Saturday, April 20, 2024
Google search engine
Homeತುಮಕೂರು ಲೈವ್ನಾಳೆ ಬೆಳಿಗ್ಗೆ ಯಿಂದ ತುಮಕೂರು ನಗರದಲ್ಲಿ ದ್ರೋಣ್ ಕ್ಯಾಮೆರಾ ಕಣ್ಗಾವಲು

ನಾಳೆ ಬೆಳಿಗ್ಗೆ ಯಿಂದ ತುಮಕೂರು ನಗರದಲ್ಲಿ ದ್ರೋಣ್ ಕ್ಯಾಮೆರಾ ಕಣ್ಗಾವಲು

Tumkuru: ಕೊರೊನ ನಿಗ್ರಹಿಸಲು ಜಿಲ್ಲಾದ್ಯಂತ ಲಾಕ್‍ಡೌನ್ ಹಾಗೂ ಕರ್ಪ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ದ್ರೋಣ್ ಕ್ಯಾಮೆರಾ ಕಣ್ಗಾವಲಿನಲ್ಲಿ ಸುಖಾಸುಮ್ಮನೆ ತಿರುಗಾಡುವವರ ಚಲನ-ವಲನವನ್ನು ಸೆರೆ ಹಿಡಿಯಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೊನ ವಂಶಿಕೃಷ್ಣ ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ ಕರ್ಪ್ಯೂ ಜಾರಿಯಲ್ಲಿರುವುದರಿಂದ ಸರ್ಕಾರದ ಆದೇಶದನ್ವಯ ನಾಗರಿಕರು ಮನೆಯಿಂದ ಹೊರಗಡೆ ಅನಾವಶ್ಯಕವಾಗಿ ತಿರುಗಾಡಬಾರದು. ಅನಗತ್ಯವಾಗಿ ಹೊರಗಡೆ ಓಡಾಡುವರನ್ನು ತಡೆಯುವ/ಪ್ರಶ್ನಿಸುವ/ವಾಪಸ್ ಕಳುಹಿಸುವ ಅಧಿಕಾರ ಪೊಲೀಸ್ ಇಲಾಖೆಗೆ ಇರುತ್ತದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪಾಲಿಸದ ವ್ಯಕ್ತಿಗಳನ್ನು ಕಾನೂನಿನಡಿ ಬಂಧಿಸಬಹುದಾಗಿದೆ.

ದ್ರೋಣ್ ಕ್ಯಾಮೆರಾದಲ್ಲಿ ಸೆರೆ ಹಿಡಿಯುವ ದೃಶ್ಯಗಳನ್ನು ಕಂಟ್ರೋಲ್ ರೂಂನಲ್ಲಿ ಕುಳಿತು ಪರಿಶೀಲಿಸಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಆದೇಶ ಪಾಲಿಸದ ವ್ಯಕ್ತಿಗಳ ವಿರುದ್ಧ ಸೆಕ್ಷನ್ 188, 270, 269 ಹಾಗೂ 271 ಐಪಿಸಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿ ಕಾರಗೃಹವಾಸ ವಿಧಿಸುವ ಅವಕಾಶವಿದೆ. ನಾಗರಿಕರು ಮನೆಯಲ್ಲಿಯೇ ಇರುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?