Tuesday, April 16, 2024
Google search engine
Homeತುಮಕೂರು ಲೈವ್ಪ್ರೊ.ಶ್ರೀನಿವಾಸ್ ಗೆ ಬಹುಜನ ಕ್ರೀಡಾರತ್ನ ರಾಷ್ಟ್ರೀಯ ಪ್ರಶಸ್ತಿ ಗರಿ

ಪ್ರೊ.ಶ್ರೀನಿವಾಸ್ ಗೆ ಬಹುಜನ ಕ್ರೀಡಾರತ್ನ ರಾಷ್ಟ್ರೀಯ ಪ್ರಶಸ್ತಿ ಗರಿ

ತುಮಕೂರು: ಅಥ್ಲೆಟಿಕ್ಸ್ ನಲ್ಲಿ ತುಮಕೂರು ಹಾಗೂ ರಾಜ್ಯದ ಕೀರ್ತಿ ಪತಾಕೆಯನ್ನು ರಾಷ್ಟ್ರ ಮಟ್ಟದಲ್ಲಿ ಹೆಚ್ಚಿಸಿರುವ ಪ್ರೊ‌. ಶ್ರೀನಿವಾಸ್ ಅವರಿಗೆ ಭಾನುವಾರ ತಿರುಪತಿಯಲ್ಲಿ ನಡೆದ ಸಮಾರಂಭದಲ್ಲಿ ಬಹುಜನ ಸಾಹಿತ್ಯ ಅಕಾಡೆಮಿಯ ರಾಷ್ಟ್ರೀಯ ಕ್ರೀಡಾರತ್ನ ಪ್ರಶಸ್ತಿ ನೀಡಲಾಯಿತು.

ಮೂಲತಃ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆಯವರಾದ ಶ್ರೀನಿವಾಸ್ ಅವರು ತಿಪಟೂರಿನ ಪಲ್ಲಾಗಟ್ಟಿ ಪದವಿ ಕಾಲೇಜಿನನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದಾರೆ.

ಕ್ರೀಡೆಯಲ್ಲಿ ಇವರು ತೋರುತ್ತಿರುವ ಆಸಕ್ತಿ, ಸಾಧನೆ ಜಿಲ್ಲೆಯ ಕ್ರೀಡಾ ಕ್ಷೇತ್ರದಲ್ಲಿ ಸಂಚಲನ ಮೂಡಿಸುತ್ತಿದೆ.

ಈಚೆಗೆ ಮಾಡಿದ ಸಾಧನೆ


ಕೇರಳದ ಕೋಝಿಕೋಡ್ ನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಫ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಾಲ್ವರ ತಂಡ ಎರಡು ಸ್ಪರ್ಧೆಗಳಲ್ಲಿ ಬೆಳ್ಳಿಪದಕ ಮತ್ತು ವ್ಯಕ್ತಿಗತವಾಗಿ ಕಂಚಿನ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದೆ.

ಕರ್ನಾಟಕದ ತುಮಕೂರು ಜಿಲ್ಲೆಯಿಂದ ಶ್ರೀನಿವಾಸ್ ಬಿ (ತುಮಕೂರು), ಜೋಷಿ, ಪದ್ಮನಾಭ, ರಾಜಮೋನಿ (ದಕ್ಷಿಣ ಕನ್ನಡ) ಅವರು 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿಪದಕ ಪಡೆದಿದ್ದಾರೆ.

ರಾಜ್ಯಪ್ರತಿನಿಧಿಸಿದ್ದ ತಂಡ. ಮುಂದೆ ಇರುವವರು ಶ್ರೀನಿವಾಸ್

ರಾಜ್ಯದ ಶ್ರೀನಿವಾಸ್ ಬಿ (ತುಮಕೂರು), ಹನುಮಂತಪ್ಪ (ಚಿತ್ರದುರ್ಗ), ಜೋಷಿ (ದಕ್ಷಿಣ ಕನ್ನಡ), ಮೋನಪ್ಪ (ಮೈಸೂರು) ಇವರು 4X400 ಮೀಟರ್ ರಿಲೇ ಓಟ ಸ್ಪರ್ಧೆಯಲ್ಲಿ ಪಾಲ್ಗೊಂಡು ಬೆಳ್ಳಿಪದಕ ಗಳಿಸಿದ್ದಾರೆ.

ವಿಶೇಷವಾಗಿ 400 ಮೀಟರ್ ಅಡೆತಡೆ ಓಟ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ತುಮಕೂರಿನ ಬಿ.ಶ್ರೀನಿವಾಸ್ ಅವರು ಕಂಚಿನ ಪದಕವನ್ನು ಪಡೆದು ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಇವರೆಲ್ಲರೂ ಮಾರ್ಚ್ ತಿಂಗಳಲ್ಲಿ ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

ಶ್ರೀನಿವಾಸ ಬಿ ಇವರು ಪಾವಗಡ ತಾಲೂಕು ವೈ.ಎನ್. ಹೊಸಕೋಟೆಯವರಾಗಿದ್ದು ತಿಪಟೂರಿನ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?