Thursday, March 28, 2024
Google search engine
Homeತುಮಕೂರ್ ಲೈವ್ಸಂವಿಧಾನವನ್ನು   ಮೀರಿದ್ದು ಯಾವುದು ಇಲ್ಲ; ನ್ಯಾಯಾಧೀಶ ನಾಗೇಶ್

ಸಂವಿಧಾನವನ್ನು   ಮೀರಿದ್ದು ಯಾವುದು ಇಲ್ಲ; ನ್ಯಾಯಾಧೀಶ ನಾಗೇಶ್

ತುಮಕೂರು: ದೇಶದಲ್ಲಿ ಸಂವಿಧಾನವೇ ಶ್ರೇಷ್ಠ. ಸಂವಿಧಾನದ ಮೀರಿ ಯಾರು ಏನನ್ನು ಮಾಡಲು ಸಾಧ್ಯವಿಲ್ಲ. ಸಂವಿಧಾನದ ಚೌಕಟ್ಟು ಉಲ್ಲಂಘಿಸುವ ಕಾಯ್ದೆಗಳನ್ನು ಸಂಸತ್ ಜಾರಿಗೆ ತಂದಾಗ ಸುಪ್ರೀಂ ಕೋರ್ಟ್ ಅವುಗಳನ್ನು ‌ರದ್ದುಗೊಳಿಸಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀರಾದ ಕೆ.ಎ.ನಾಗೇಶ ಅವರು ಹೇಳಿದರು.

ಸೂಫಿಯ ಕಾನೂನು ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನ ಉದ್ಘಾಟಿಸಿ ಮಾತನಾಡಿದರು.

ದೇಶದ ಲ್ಲಿ ಸಂವಿಧಾನವೇ ಶ್ರೇಷ್ಠ. ಸಂವಿಧಾನದ ಕರಡು ಸಮಿತಿ ಅಧ್ಯಕ್ಷ ರಾಗಿದ್ದ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಸಂವಿಧಾನ ದಿನ ಆಚರಣೆ ಮಾಡಲಾಗುತ್ತಿದೆ ಎಂದರು.

ದೇಶದ ನಾಗರಿಕರಿಗೆ ಮೂಲ ಭೂತ ಹಕ್ಕುಗಳನ್ನು ಸಂವಿಧಾನ ನೀಡಿದೆ. ಅದೇ ರೀತಿ ಮೂಲಭೂತ ಕರ್ತವ್ಯಗಳನ್ನು ಹೇಳಿದೆ. ಈ ಎರಡೂ ಹಕ್ಕುಗಳು ಒಂದಕ್ಕೊಂದು ಪೂರಕವಾಗಿವೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ದ ಆಶಯಗಳನ್ನು ಸಂವಿಧಾನ ಒತ್ತಿ ಹೇಳಿದೆ. ಸಂವಿಧಾನದ ಈ ಆಶಯಗಳನ್ನು ಜನರ ನಡುವೆ ಪ್ರಚುರಪಡಿಸಬೇಕು ಎಂದು ಅವರು ಹೇಳಿದರು.

ಕಾನೂನು ವಿದ್ಯಾರ್ಥಿಗಳು, ವಕೀಲರು ಮೂಲಭೂತ ಹಕ್ಕುಗಳ ಬಗ್ಗೆ ಆಳವಾದ ಅಧ್ಯಯನ ಮಾಡಬೇಕು. ಇದರಿಂದ ಕಕ್ಷಿದಾರನಿಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕನ್ನಡಪ್ರಭ ಮುಖ್ಯವರದಿಗಾರ ಉಗಮ ಶ್ರೀನಿವಾಸ್ ಮಾತನಾಡಿ, ಬಹುತ್ವ ಸಂವಿಧಾನದ ಮುಖ್ಯ ಆಶಯವಾಗಿದೆ. ಸಂವಿಧಾನ ವನ್ನು ಬದಲಾಯಿಸುವ ಬಗ್ಗೆ ಬಹಿರಂಗವಾಗಿ ಮಾತನಾಡಲಾಗುತ್ತಿದೆ. ಇದನ್ನು ಎಚ್ಚರಿಕೆಯಿಂದ ಗಮನಿಸಬೇಕು ಎಂದರು.

ಏಕ ಸಂಸ್ಕೃತಿಯ ನ್ನು ಏರಿ ದೇಶದ ಬಹುತ್ವ ಹಾಳು ಮಾಡುವ ಕೆಲಸ ಆಗುತ್ತಿದೆ. ದೇಶದ ಬಹತ್ವವನ್ನು ಹೇಳುವ ಸಂವಿಧಾನವನ್ನು ಉಳಿಸಲು ವಕೀಲರು ಹೋರಾಟದ ಮುನ್ನೆಲೆಗೆ ಬರಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾನೂನು ಕಾಲೇಜಿನ ಅಧ್ಯಕ್ಷ ಷಫಿ ಅಹ್ಮದ್ ಮಾತನಾಡಿ, ಸಂವಿಧಾನದ ಆಶಯಗಳ ಬಗ್ಗೆ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ‌. ಇಂತಗ ಕೆಲಸದಲ್ಲಿ ಕಾಲೇಜು ತೊಡಗಿಕೊಂಡಿದೆ ಎಂದರು.

ರಾಜ್ಯ ದಲ್ಲಿ ನಡೆದ ಆಫರೇಷನ್ ಕಮಲ, ಅನರ್ಹರ ಚುನಾವಣೆಗೆ ಹೋಗಿರುವುದು, ಮಹಾರಾಷ್ಟ್ರ ದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ಸಂವಿಧಾನದ ಬುಡನೇಲು ಮಾಡುವಂತವಾಗಿವೆ. ಇಂತ ಘಟನೆಗಳು ಆಗದಂತೆ ದೇಶದ ಜನರು ಬುದ್ಧಿವಂತಿಕೆ ತೋರಬೇಕಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಎಸ್.ರ‌ಮೇಶ್ ಮಾತನಾಡಿ, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಇಂದು ದೇಶದ ನೀತಿಗಳು ರೂಪುಗೊಳ್ಳುತ್ತಿವೆ. 2004ರ ದಶಕದ ನಂತರ ಇದು ಹೆಚ್ಚಾಗುತ್ತಿದೆ ಎಂದು ಹೇಳಿದರು.
ಉಪ ಪ್ರಾಂಶುಪಾಲರಾದ ಓಬಣ್ಣ, ಬಿಇಡಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?