Friday, March 29, 2024
Google search engine
Homeತುಮಕೂರ್ ಲೈವ್ಸಂವಿಧಾನ ಭಾರತೀಯರ ಧರ್ಮ ಗ್ರಂಥ

ಸಂವಿಧಾನ ಭಾರತೀಯರ ಧರ್ಮ ಗ್ರಂಥ

ತಿಪಟೂರು: ಭಾರತದ ಸಂವಿಧಾನವು ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಸಿದ್ಧಾಂತಗಳ ಆಧಾರದ ಮೇಲೆ ರಚಿತವಾಗಿರುವ ಶ್ರೇಷ್ಠ ಗ್ರಂಥ. ಈ ಗ್ರಂಥ ಭಾರತೀಯರ ಪಾಲಿನ ಧರ್ಮಗ್ರಂಥವಾದ ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ದಲಿತ ಮುಖಂಡ ಕುಪ್ಪಾಳು ರಂಗಸ್ವಾಮಿ ತಿಳಿಸಿದರು.

ತಿಪಟೂರು ನಗರದಲ್ಲಿ ಆಯೋಜಿಸಿದ್ದ ಸಂವಿಧಾನ ಸಮರ್ಪಣಾದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅವರು ಸಂವಿಧಾನ ಭಾರತೀಯರ ಪಾಲಿನ ಶ್ರೇಷ್ಠ ಗ್ರಂಥ ಹಲವಾರು ಭಾಷೆ ಪ್ರಾಂತ್ಯ ಜಾತಿ ಧರ್ಮಗಳ ಹೆಸರಿನಲ್ಲಿ ಹಂಚಿಹೋಗಿದ್ದ ಭಾರತೀಯರನ್ನು ಒಗ್ಗೂಡಿಸಿದ ಪರಮಶ್ರೇಷ್ಠ ಗ್ರಂಥ ಸಂವಿಧಾನ ಎಂದರು.

ಸ್ವತಂತ್ರ ಭಾರತದ ಸಂವಿಧಾನ ರಚನಾ ಕಾರ್ಯದ ಜವಾಬ್ದಾರಿಯನ್ನು ಶಿಕ್ಷಣತಜ್ಞ ವಿಶ್ವ ಜ್ಞಾನಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ರವರಿಗೆ ವಹಿಸಿದಾಗ ವಿಶ್ವದ ಎಲ್ಲಾ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಹಲವು ದೇಶಗಳ ಸಂವಿಧಾನದ ಉತ್ತಮ ಅಂಶಗಳನ್ನು ಹಾಯ್ದು ವಿವಿಧತೆಯಲ್ಲಿ ಏಕತೆಯಿಂದ ಕೂಡಿರುವ ಭಾರತಕ್ಕೆ ಉತ್ತಮ ಸಂವಿಧಾನ ರಚನೆ ಮಾಡಿದ ಪರಿಣಾಮವಾಗಿ ಇಂದು ನಮ್ಮ ಸಂವಿಧಾನ ವಿಶ್ವಶ್ರೇಷ್ಠ ಸಂವಿಧಾನವಾಗಿದೆ ಅಲ್ಲದೆ ವಿಶ್ವಕ್ಕೆ ಉತ್ತಮ ಮಾರ್ಗದರ್ಶನವನ್ನು ನೀಡುವ ಶಕ್ತಿಯನ್ನು ಪಡೆದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದಲಿತ ಸಂಘರ್ಷ ಸಮಿತಿ ತಾಲ್ಲೋಕು ಅಧ್ಯಕ್ಷ ನೊಣವಿನಕೆರೆ ಪ್ರಸನ್ನ ಮಾತನಾಡಿ ಸಂವಿಧಾನವು ಭಾರತದ ಸರ್ವಶ್ರೇಷ್ಠ ಕಾನೂನಾಗಿದ್ದು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ರೂಪುಗೊಂಡಿದೆ ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶದ ಆಡಳಿತ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ದೃಷ್ಟಿಯಿಂದ ಮೀಸಲಾತಿ ವ್ಯವಸ್ಥೆಯನ್ನು ಒಳಗೊಂಡಿದೆ, ದೇಶದಲ್ಲಿ ಕಾನೂನಿನ ದೃಷ್ಟಿಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಸರ್ವಸಮಾನ ಎನ್ನುವ ಆಸೆಯನ್ನು ಒಳಗೊಂಡ ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ ನಮ್ಮ ಭಾರತೀಯ ಸಂವಿಧಾನ ನಮ್ಮ ಸಂವಿಧಾನದಲ್ಲಿ ಹಕ್ಕುಗಳ ಅಷ್ಟೇ ಕರ್ತವ್ಯಕ್ಕೆ ಆದ್ಯತೆ ನೀಡಲಾಗಿದೆ ಆದ್ದರಿಂದ ಪ್ರತಿಯೊಬ್ಬ ಭಾರತೀಯನು ಗೌರವಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಕುಪ್ಪಾಳು ರಂಗಾಸ್ವಾಮಿ.ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನೊಣವಿನಕೆರೆ ಪ್ರಸನ್ನ.ಚಿಗ್ಗಾವಿ ಪುಟ್ಟಸ್ವಾಮಿ. ಕೆ.ಇಬಿ ಸೋಮಶೇಖರ್. ಶೆಟ್ಟಿಹಳ್ಳಿ ಚಿಕ್ಕಣ್ಣ.ಕಾರ್ಮಿಕ ಮುಖಂಡ ಗ್ಯಾರಘಟ್ಟ ಹೊನ್ನಪ್ಪ.ಗಾಂಧಿನಗರ ಬಸವರಾಜು.ಬೋವಿ ಸಮಾಜದ ಮುಖಂಡ ವಿಜಯಕುಮಾರ್ ಮತ್ತಿಘಟ್ಟ ಕಲ್ಲೇಶಯ್ಯ. ಚಂದ್ರಶೇಖರ್ ಮುಂತ್ತಾದವರು ಉಪಸ್ಥಿತರಿದರು ಕುಪ್ಪಾಳು ರಂಗಸ್ವಾಮಿ ತಂಡದಿಂದ ಕ್ರಾಂತಿ ಗೀತೆ ಹಾಡಲಾಯಿತು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?