Saturday, April 20, 2024
Google search engine
HomeUncategorizedಸುಳ್ಳು ಆರೋಪ ನಿಲ್ಲಲಿ: ದೊರೈರಾಜ್

ಸುಳ್ಳು ಆರೋಪ ನಿಲ್ಲಲಿ: ದೊರೈರಾಜ್

ತುಮಕೂರು:ದೊಡ್ಡಪಾಳ್ಯ ನರಸಿಂಹಮೂರ್ತಿ ಪತ್ರಕರ್ತರಾಗಿ ಹೋರಾಟಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರ ಮೇಲೆ ಸುಳ್ಳು ಆರೋಪ ಹೊರಿಸ ಬಂದಿಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್ ಹೇಳಿದರು.
ತುಮಕೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೊಡ್ಡಿಪಾಳ್ಯ ನರಸಿಂಹಮೂರ್ತಿ ದೇಶದ್ರೋಹಿ, ತಲೆಮರೆಸಿಕೊಂಡ ವ್ಯಕ್ತಿ ಎಂದು ಬಿಂಬಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಜನವಿರೋಧಿ ನೀತಿ ವಿರೋಧಿಸುವ ಮತ್ತು ಹೋರಾಟ ,ಮಾಡುವವರ ದನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದ್ದು ಇದನ್ನು ಬಿಡಬೇಕು ಎಂದು ಒತ್ತಾಯಿಸಿದರು.

ಸ್ವರಾಜ್ ಇಂಡಿಯಾದ ಮುಖಂಡ ಸಿ.ಯತಿರಾಜು ಮಾತನಾಡಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಂಧಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ಸ್ವಾತಂತ್ರ್ಯ ಮತ್ತು ವಿರೋಧಿ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಬಗ್ಗು ಬಡಿಯುವ ಕೆಲಸ ಮಾಡುತ್ತಿದೆ. ಇದನ್ನು ಜನಪರ ಸಂಘಟನೆಗಳು ಬಲವಾಗಿ ಖಂಡಿಸುತ್ತವೆ ಎಂದರು.

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಹಾರ್ ಮಾತನಾಡಿ ತುರ್ತು ಪರಿಸ್ಥಿತಿಯಂತಹ ಸಂದರ್ಭದಲ್ಲಿ ಪತ್ರಕರ್ತರು ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಸರ್ಕಾರ ಕೆಲಸ ಮಾಡಲು ಸಾಕಷ್ಟು ಕೆಲಸ ಇದೆ. ಹಲವು ಮಂದಿ ರೈತ, ಕಾರ್ಮಿಕ, ಆರ್ ಎಸ್ಎಸ್ ನಲ್ಲಿ ಗುರುತಿಸಿಕೊಂಡವರು ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಮಾಜ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಜನಪರ ಮತ್ತು ಪ್ರಗತಿಪರ ದನಿಗಳನ್ನು ಅಡಗಿಸುವ ಹುನ್ನಾರ ನಿರಂತರವಾಗಿ ನಡೆಯುತ್ತಿದ್ದು ಇದನ್ನು ಬಿಡಬೇಕು ಎಂದರು. ಜನಪರ ಸಂಘಟನೆಗಳ ಒಕ್ಕೂಟ, ಜನಸಂಗ್ರಾಮ ಪರಿಷತ್, ಪಿಯುಸಿಎಲ್, ಸ್ವರಾಜ್ ಇಂಡಿಯಾ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ನಾದೂರು ಕೆಂಚಪ್ಪ, ಹಂದ್ರಾಳ್ ನಾಗಭೂಷಣ, ಮೋಹನ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?