Friday, April 19, 2024
Google search engine
Homeತುಮಕೂರ್ ಲೈವ್ಸೂರ್ಯ ಗ್ರಹಣ ವೀಕ್ಷಣೆಗೆ ಇಲ್ಲಿದೆ ಉಚಿತ ಅವಕಾಶ

ಸೂರ್ಯ ಗ್ರಹಣ ವೀಕ್ಷಣೆಗೆ ಇಲ್ಲಿದೆ ಉಚಿತ ಅವಕಾಶ

Publicstory.in


ತುಮಕೂರು: ಡಿಸೆಂಬರ್ 26ರಂದು ಕಂಕಣ ಸೂರ್ಯಗ್ರಹಣದ ಪ್ರಯುಕ್ತ ತುಮಕೂರು ವಿಜ್ಞಾನ ಕೇಂದ್ರವು ಕೇಂದ್ರದ ಆವರಣದಲ್ಲಿ ಸುರಕ್ಷಿತ ಸೂರ್ಯಗ್ರಹಣದ ವೀಕ್ಷಣೆಗೆ ಸಿದ್ದತೆ ಮಾಡಲಾಗಿದೆ ಎಂದು ತುಮಕೂರು ವಿಜ್ಞಾನ ಕೇಂದ್ರ ಕಾರ್ಯದರ್ಶಿ ಎಸ್.ರವಿಶಂಕರ್ (ಮಾಮರವಿ) ತಿಳಿಸಿದ್ದಾರೆ.

ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಮೂಲಕ ಗ್ರಹಣವನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ.

ಅಂದು ತುಮಕೂರಿನಲ್ಲಿ ಪಾಶ್ರ್ವ ಸೂರ್ಯ ಗ್ರಹಣ ಕಂಡುಬರಲಿದೆ. ಶೇಕಡ 89.1ರಷ್ಟು ಸೂರ್ಯನನ್ನು ಚಂದ್ರನ ಮರೆಮಾಡುವ ಅದ್ಭುತ ನೈಸರ್ಗಿಕ ವಿದ್ಯಮಾನವನ್ನು ವೀಕ್ಷಿಸಲು ಅವಕಾಶವಿದ್ದು ಜನತೆ ಮನೆಯಿಂದ ಹೊರಬಂದು ಈ ಅದ್ಭುತ ನೆರಳುಬೆಳಕಿನ ಆಟದ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಕಣ್ತುಂಬಿಕೊಳ್ಳಲು ಮುಂದಾಗಿ ವೈಜ್ಞಾನಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು.

ಅಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಳ್ಳುವ ಸುಂದರ ಖಗೋಳ ವಿಸ್ಮಯವನ್ನು ತಪ್ಪದೇ ವೀಕ್ಷಿಸಬೇಕು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಳ್ಳಲಿದೆ.

3 ಗಂಟೆ 40 ಸೆಕೆಂಡ್‍ಗಳ ಕಾಲ ಸಂಭವಿಸಲಿರುವ ಇಂತಹ ಗ್ರಹಣವನ್ನು ಮತ್ತೊಮ್ಮೆ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಗ್ರಹಣವನ್ನು ತಮ್ಮ ಮನೆಯಲ್ಲೇ ಸುರಕ್ಷಿತವಾಗಿ ವೀಕ್ಷಿಸಲು ಸೋಲಾರ್ ಫಿಲ್ಟರ್‍ಗಳು ಹಾಗೂ ಗ್ರಹಣ ಪುಸ್ತಕ ಕಡಿಮೆ ದರದಲ್ಲಿ ತುಮಕೂರು ವಿಜ್ಞಾನ ಕೇಂದ್ರದಲ್ಲಿ ಮಾರಾಟಕ್ಕೆ ಲಭ್ಯವಿದ್ದು ಆಸಕ್ತರು ಕೆ.ನಾಗರಾಜರಾವ್ 9164888006 ಇವರನ್ನು ಸಂಪರ್ಕಿಸಲು ಕೋರಿದೆ.

ವಿಜ್ಞಾನ ಕೇಂದ್ರವು ಹವ್ಯಾಸಿ ಖಗೋಳ ವೀಕ್ಷಕರ ನೇತೃತ್ವದಲ್ಲಿ ಜಿಲ್ಲಾದ್ಯಂತ ಶಾಲಾ-ಕಾಲೇಜು ಮತ್ತು ಸಾರ್ವಜನಿಕರಿಗೆ ‘ಗ್ರಹಣ ಪಯಣ’ ಅಭಿಯಾನ ನಡೆಸಿ ಗ್ರಹಣದ ಬಗ್ಗೆ ಜನಜಾಗೃತಿಯನ್ನು ಮೂಡಿಸಲಾಗಿದೆ. ಈ ಅಭಿಯಾನದಲ್ಲಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರಹಣದ ಕುರಿತು ಪಿಪಿಟಿ ಪ್ರದರ್ಶನ ಹಾಗೂ ಉಪನ್ಯಾಸವನ್ನು ನೀಡಲಾಗಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?