Thursday, July 31, 2025
Google search engine
Homeಜಸ್ಟ್ ನ್ಯೂಸ್ಹೈಕೋರ್ಟ್ ನ್ಯಾಯಾಧೀಶರ ಭೇಟಿ ಮಾಡಿದ ತುಮಕೂರು ವಕೀಲರ ಸಂಘದ ಪದಾಧಿಕಾರಿಗಳು

ಹೈಕೋರ್ಟ್ ನ್ಯಾಯಾಧೀಶರ ಭೇಟಿ ಮಾಡಿದ ತುಮಕೂರು ವಕೀಲರ ಸಂಘದ ಪದಾಧಿಕಾರಿಗಳು

ಬೆಂಗಳೂರು; ತುಮಕೂರು ವಕೀಲರ ಸಂಘದ ಪದಾಧಿಕಾರಿಗಳು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ತುಮಕೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿ.ಎಂ. ಶ್ಯಾಮ್ ಪ್ರಸಾದ್ ಅವರನ್ನು  ಇಲ್ಲಿ ಭೇಟಿ ಮಾಡಿ ಚರ್ಚಿಸಿದರು.

ತುಮಕೂರು ಆಡಳಿತಾತ್ಮಕ ನ್ಯಾಯಮೂರ್ತಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್‌. ಕೆಂಪರಾಜಯ್ಯ ಉಪಾಧ್ಯಕ್ಷರಾದ ಎಂಎಲ್ ರವಿಗೌಡ ಪ್ರಧಾನ ಕಾರ್ಯದರ್ಶಿಯಾದ ಮಹೇಶ್ ಹೀರೆಹಳ್ಳಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಬೇಟಿ ಮಾಡಿದರು.

  ತುಮಕೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಶುಭಾಶಯ ಅರ್ಪಿಸಲು ಭೇಟಿ ನೀಡಿದ್ದರು, ಹಾಗೂ ಇತ್ತೀಚಿಗೆ ತುಮಕೂರು ಜಿಲ್ಲೆಯ ನ್ಯಾಯಾಂಗ ಇಲಾಖೆ ಹೊಸದಾಗಿ ಜಾಗ ಪಡೆಯುವ ಸಲುವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆಯೂ ಮಾಹಿತಿ ನೀಡಿದರು. ಈ ಬಗ್ಗೆ ನ್ಯಾಯಮೂರ್ತಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು .

ಸಂಘದ ಪ್ರತಿನಿಧಿಗಳು ನ್ಯಾಯಮೂರ್ತಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಉಪಾಧ್ಯಕ್ಷ ಎಂ.ಎಲ್‌. ರವಿಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಹಿರೇಹಳ್ಳಿ, ಜಂಟಿ ಕಾರ್ಯದರ್ಶಿ ಟಿ.ಎಂ. ಧನಂಜಯ, ಖಜಾಂಚಿ ಸಿಂಧು ಬಿ.ಎಂ. ಸೇರಿದಂತೆ ಕಾರ್ಯಕಾರಿ ಮಂಡಳಿಯ ಸದಸ್ಯರಾದ ಗೋವಿಂದರಾಜು ಪಿ, ಡಿ.ಎ. ಜಗದೀಶ್, ಶ್ರೀನಿವಾಸಮೂರ್ತಿ ಕೆ.ವಿ., ಶ್ರೀನಿವಾಸಮೂರ್ತಿ ವಿ.ಕೆ., ಸುರೇಶ್ ಎಸ್., ಪದ್ಮಶ್ರೀ ಸಿ.ಆ‌ರ್., ಸೇವಾಪ್ರಿಯ ಜೆ.ಎಸ್. ಮತ್ತು ಇತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?