Sunday, June 1, 2025
Google search engine
Homeಜಸ್ಟ್ ನ್ಯೂಸ್ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

ಕರ್ನಾಟಕ ನಾಟಕ ಅಕಾಡೆಮಿ ತಿಂಗಳ ನಾಟಕ ಸಂಭ್ರಮ

ಬೆಂಗಳೂರು- ಸಾಂಸ್ಕೃತಿಕ ಲೋಕವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಕಾರ್ಪೊರೇಟ್ ಲೋಕ ಯತ್ನಿಸುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಹಿರಿಯ ಪತ್ರಕರ್ತ, ಸಾಹಿತಿ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ಕಲಾಗ್ರಾಮದಲ್ಲಿ ಹಮ್ಮಿಕೊಂಡಿದ್ದ ತಿಂಗಳ ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿ ಗೌರವವನ್ನು ಸ್ವೀಕರಿಸಿ ಮಾತನಾಡಿದರು.

ನಾಲ್ಕು ಗೋಡೆಗಳ ಮಧ್ಯೆ ಇದ್ದ ರಂಗಭೂಮಿಯನ್ನು ಅಲ್ಲಿಂದ ಬಿಡುಗಡೆ ಮಾಡಿ ಜನರ ಬಳಿಗೆ ಕೊಂಡೊಯ್ಯಲು ದೊಡ್ಡ ಚಳವಳಿ ನಡೆಯಿತು. ಜನರ ಸಮಸ್ಯೆಗಳನ್ನು ಬಿಂಬಿಸುವ ಕೆಲಸ ನಡೆಯಿತು. ಆದರೆ ಈಗ ಕಾರ್ಪೊರೇಟ್ ಜಗತ್ತು ಜನರ ಬಳಿಯಿಂದ ಕಿತ್ತು ಮತ್ತೆ ಅದನ್ನು ನಾಲ್ಕು ಗೋಡೆಯ ಮಧ್ಯೆ ಬಂಧಿಸಲು ಯತ್ನಿಸುತ್ತಿದೆ ಎಂದರು.

ರಂಗಭೂಮಿ ಜನರ ಒಡನಾಡಿ. ಅದು ಪ್ರಶ್ನಿಸಲು ಪ್ರೇರೇಪಿಸುತ್ತದೆ. ಸಮಾಜ ಬದಲಾವಣೆಗೆ ದಾರಿಮಾಡಿಕೊಡುತ್ತದೆ. ಆದ ಕಾರಣಕ್ಕಾಗಿಯೇ ರಂಗಭೂಮಿಯ ಮನಸ್ಥಿತಿಯನ್ನು ಬದಲಿಸುವ ತುರ್ತು ಪ್ರಭುತ್ವಕ್ಕೆ ಇದೆ. ಸಾಹಿತ್ಯ ಹಾಗೂ ರಂಗಭೂಮಿಯ ಮೇಲೆ ಭಯದ ಪರದೆಯನ್ನು ಸೃಷ್ಟಿಸಿ ಅವು ಸ್ವಯಂ ಸೆನ್ಸಾರ್ ಶಿಪ್ ಹೇರಿಕೊಳ್ಳುವಂತೆ ಪ್ರಭುತ್ವ ಒತ್ತಾಯಿಸುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ. ಇದರ ವಿರುದ್ಧ ರಂಗ ಲೋಕ ಎಚ್ಚೆತ್ತುಕೊಳ್ಳಬೇಕು ಎಂದರು.

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ ಕೆ ವಿ ನಾಗರಾಜಮೂರ್ತಿ ಅವರು ಮಾತನಾಡಿ ನಾಟಕ ಅಕಾಡೆಮಿ ಬೆಂಗಳೂರಿನ ಹೊರಗಿನ ತಂಡಗಳನ್ನು ಆಹ್ವಾನಿಸಿ ನಾಟಕ ಪ್ರದರ್ಶನಕ್ಕೆ ದಾರಿ ಮಾಡಿಕೊಟ್ಟಿದೆ. ಈ ಮೂಲಕ ನಗರ ಹಾಗೂ ಗ್ರಾಮೀಣ ತಂಡಗಳ ನಡುವೆ ಸಂವಾದ ಸಾಧ್ಯವಾಗಿದೆ. ಇದು ಆಶಾದಾಯಕ ಬೆಳವಣಿಗೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸಂತೋಷ ನಾಯಕ ಪಟ್ಲ ಅವರು ನಿರ್ದೇಶಿಸಿದ ‘ದಿ ಫೈಯರ್’ ನಾಟಕವನ್ನು ಪ್ರದರ್ಶಿಸಲಾಯಿತು. ಉಡುಪಿಯ ಭೂಮಿಗೀತ ಸಾಂಸ್ಕೃತಿಕ ವೇದಿಕೆ ನಾಟಕವನ್ನು ಪ್ರದರ್ಶಿಸಿತು. ನಾಟಕ ಅಕಾಡೆಮಿ ಸದಸ್ಯರಾದ ಜಗದೀಶ್ ಜಾಲ ಹಾಗೂ ಲವಕುಮಾರ್ ಉಪಸ್ಥಿತರಿದ್ದರು.

ಕರ್ನಾಟಕ ನಾಟಕ ಅಕಾಡೆಮಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ಅವರು ತಿಂಗಳ ಅತಿಥಿ ಗೌರವವನ್ನು ಸ್ವೀಕರಿಸಿ ಮಾತನಾಡಿದರು. ಚಿತ್ರದಲ್ಲಿ ಜಗದೀಶ ಜಾಲ, ಕೆ ವಿ ನಾಗರಾಜ ಮೂರ್ತಿ ಹಾಗೂ ಲವಕುಮಾರ್ ಇದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?