Friday, September 20, 2024
Google search engine
HomeUncategorizedರಂಗನಹಟ್ಟಿ ಗಣಪತಿ ವಿಸರ್ಜನೆ ವೇಳೆ ದುರ್ಘಟನೆ, ಮೃತರ ಕುಟುಂಬಕ್ಕೆ ಮುರಳೀಧರ ಹಾಲಪ್ಪ ನೆರವು

ರಂಗನಹಟ್ಟಿ ಗಣಪತಿ ವಿಸರ್ಜನೆ ವೇಳೆ ದುರ್ಘಟನೆ, ಮೃತರ ಕುಟುಂಬಕ್ಕೆ ಮುರಳೀಧರ ಹಾಲಪ್ಪ ನೆರವು

ತುರುವೇಕೆರೆ: ಗಣೇಶ ವಿಸರ್ಜನೆ ವೇಳೆ ಇಂತಹ ದುರ್ಘಟನೆಗಳು ನಡೆಯದಂತೆ ಗ್ರಾಮೀಣ ಭಾಗದಲ್ಲಿನ ಜನರು ಬಹಳ ಎಚ್ಚರಿಕೆ ವಹಿಸಬೇಕು ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಮನವಿ ಮಾಡಿದರು.
ತಾಲ್ಲೂಕಿನ ಮಾರಸಂದ್ರ ರಂಗನಹಟ್ಟಿ ಗ್ರಾಮದಲ್ಲಿ ಈಚೆಗೆ ಗಣೇಶ ವಿಸರ್ಜನೆಗೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಮನೆಗೆ ದಾಬಸ್ ಪೇಟೆ ಒಳಕಲ್ ಮಠದ ಬಸವರಮಾನಂದ ಸ್ವಾಮೀಜಿ ಜೊತೆ ಬೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಂತಾನ್ವ, ಧೈರ್ಯ ತುಂಬಿ ಮಾತನಾಡಿದ ಅವರು
ಜಿಲ್ಲಾ ಹಾಗು ತಾಲ್ಲೂಕು ಆಡಳಿತ ಬಹಳ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದರೂ ಸಹ. ಗ್ರಾಮೀಣ ಪ್ರದೇಶದಲ್ಲಿ ಅರಿವಿನ ಕೊರತೆ ಕಾಣುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ಕಾರ್ಯ ಕ್ರಮ ಸ್ಥಳೀಯ ಮಟ್ಟದ ಅಧಿಕಾರಿಗಳು ಮಾಡಬೇಕು ಎಂದರು.
ಮೃತರ ಎರಡು ಕುಟುಂಬದ ಸದಸ್ಯರ ಜೊತೆ ಮಾತನಾಡಿದ್ದು ಜಿಲ್ಲಾ ಸಚಿವರ ಆದೇಶದಂತೆ ಸರ್ಕಾರದಿಂದ ಸಿಗುವ ಸವಲತ್ತು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲು ಪ್ರಯತ್ನ ಮಾಡಲಾಗುವುದು. ಮೃತ ರೇವಣ್ಣನ ಇನ್ನೊಬ್ಬ ಮಗ ಐಟಿಐ ಮಾಡಿದ್ದು ಕೌಶಲ್ಯ ಅಭಿವೃದ್ಧಿ ಯಲ್ಲಿ ತರಬೇತಿ ನೀಡಿ ಒಳ್ಳೆಯ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದು ಮತ್ತು ದಯಾನಂದ್ ಪತ್ನಿಗೆ ಪದವೀಧರೆಯಾಗಿದ್ದು ಸರ್ಕಾರದಿಂದ ಸಿಗುವಂತಹ ಉದ್ಯೋಗ ದೊರಕಿಸಿಕೊಡುವ ಬಗ್ಗೆ ಭರವಸೆ ನೀಡಿದರು.
ದಾಬಸ್ ಪೇಟೆ ಒಳಕಲ್ ಮಠದ ಬಸವರಮಾನಂದ ಸ್ವಾಮೀಜಿ ಮಾತನಾಡಿ, ಈ ದುರ್ಘಟನೆ ಅತ್ಯಂತ ನೋವಿನ ಸಂಗತಿ. ಎರಡು ಕುಟುಂಬಕ್ಕೆ ಸಂತಾನ್ವ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದು. ಕಾಂಗ್ರೆಸ್ ಮುಖಂಡ ಮುರಳಿಧರಹಾಲಪ್ಪ ಜಿಲ್ಲಾ ಸಚಿವರ ಮಾರ್ಗದರ್ಶನದಂತೆ ಸರ್ಕಾರದಿಂದ ಸಿಗುವಂತಹ ಪರಿಹಾರ ಕೊಡಿಸಲು ಗ್ರಾಮಕ್ಕೆ ಆಗಮಿಸಿ ನೊಂದ ಕುಟುಂಬಕ್ಕೆ ಸಿಗುವ ಸವಲತ್ತು ಪರಿಹಾರ ಕೊಡಿಸಲು ವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎರಡೂ ಕುಟುಂಬಕ್ಕೆ ಧನ ಸಹಾಯ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಗ್ರಾಮ ಪಂಚಾಯತಿ ಸದಸ್ಯ ಯೋಗೀಶ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಶ್ರೀನಿವಾಸ್, ಮುಖಂಡರಾದ ತ್ರೈಲೋಕಿನಾಥ್, ಜಯಣ್ಣ, ಮಂಜುನಾಥ್ ಹಲವು ಮುಖಡರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?