Saturday, July 27, 2024
Google search engine
HomeUncategorizedಕೊನೆಗೂ ಸಿಕ್ಕ ಕಳ್ಳ

ಕೊನೆಗೂ ಸಿಕ್ಕ ಕಳ್ಳ

ತುರುವೇಕೆರೆ: ಪಟ್ಟಣದ ವಿವಿಧ ಭಾಗಗಳಲ್ಲಿನ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್ನ ಮೂರು ಅಂಗಡಿಗಳ ಬೀಗ ಮುರಿದು ಲಕ್ಷಾಂತರ ರೂಪಾಯಿಗಳ ಮೌಲ್ಯದ ವಸ್ತು ಕಳವು ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಜಿಲ್ಲೆಯ ಉದಯಗಿರಿ ತಾಲ್ಲೂಕಿನ ಸಯ್ಯದ್ ಅಜರುದ್ದಿನ್ (28) ಮತ್ತು ಹತಾವುಲ್ಲಾ(23) ಬಂಧಿತ ಆರೋಪಿಗಳಾಗಿದ್ದು ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆಬೀಸಿದ್ದಾರೆ. ಬಂದಿತ ಆರೋಪಿಗಳು ಮಂಡ್ಯ, ಮೈಸೂರು ಸೇರಿದಂತೆ ವಿವಿಧ ತಾಲ್ಲೂಕು ಜಿಲ್ಲೆಗಳಲ್ಲಿನ ಕಳವು ಪ್ರಕರಣಗಳಲ್ಲಿ ಬಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಆರೋಪಿಗಳು ಅಕ್ಟೋಬರ್ ತಿಂಗಳಲ್ಲಿ ಪಟ್ಟಣದ ಪೊಲೀಸ್ ಠಾಣೆ ಎದುರಿನ ಸಿ.ಟಿ ಎಲೆಕ್ಟ್ರಾನಿಕ್ಸ್ ಅಂಗಡಿ, ಬಾಣಸಂದ್ರ ರಸ್ತೆಯಲ್ಲಿನ ಶಾರದಾ ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ವೇರ್ ಮತ್ತು ಮುನಿಯೂರು ಗೇಟ್ ಬಳಿಯ ಗಂಗಾಧರೇಶ್ವರ ಹಾರ್ಡ್ ವೇರ್ ಅಂಗಡಿಯ ಬೀಗ ಮುರಿದ ಕಳ್ಳರು ಲಕ್ಷಾಂತರ ರೂಪಾಯಿಗಳ ಮೌಲ್ಯದ ಟಿ.ವಿ, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಕೊಳವೆ ಬಾವಿಯ ಉಪಕರಣಗಳನ್ನು ಕಳವು ಮಾಡಿ ತಲೆಮರೆಸಿಕೊಂಡಿದ್ದರು.

ಪಟ್ಟಣದ ಈ ಸರಣಿ ಕಳ್ಳತನದಿಂದ ಅಂಗಡಿ ಮಾಲೀಕರು ಮತ್ತು ಪಟ್ಟಣಿಗರು ಆತಂಕಕ್ಕೆ ಒಳಗಾಗಿದ್ದರು. ಇದನ್ನು ಸವಾಲಾಗಿ ತೆಗೆದುಕೊಂಡ ತಾಲ್ಲೂಕಿನ ಸಿಪಿಐ ಲೋಹಿತ್ ಅವರು ಕಳವಾದ ಒಂದು ತಿಂಗಳೊಳಗಾಗಿ ಅಂದರೆ ನವೆಂಬರ್ 18ರಂದು ಆರೋಪಿಗಳನ್ನು ಸೆರೆಹಿಡಿದಿದ್ದು

ಇದರಿಂದ ಪಟ್ಟಣಿಗರು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?