Saturday, July 27, 2024
Google search engine
Homeಜಸ್ಟ್ ನ್ಯೂಸ್ಓದುವ ಸಂಸ್ಕೃತಿ ಹರಡಲು ಲೇಖಕರ ಕರೆ

ಓದುವ ಸಂಸ್ಕೃತಿ ಹರಡಲು ಲೇಖಕರ ಕರೆ

ಪರಾಗ್ ಹಾಗೂ ಬಹುರೂಪಿಯಿಂದ ಭಾಷಾಂತರ ಕಾರ್ಯಾಗಾರ

ಸಂವಿಧಾನ ಅರಿವಿಗೆ ಇರುವ ಬಾಗಿಲು. ಅರಿವು ಬದಲಾವಣೆಗೆ ಇರುವ ದಾರಿದೀಪ. ಹಾಗಾಗಿ ಓದುವ ಸಂಸ್ಕೃತಿಯನ್ನು ಹರಡಬೇಕಾದ ತುರ್ತು ನಮ್ಮ ಮುಂದಿದೆ ಎಂದು ಹಿರಿಯ ಸಾಹಿತಿ, ಭಾಷಾಂತರಕಾರರಾದ ಎಂ ಅಬ್ದುಲ್ ರೆಹಮಾನ್ ಪಾಷ ಅವರು ಅಭಿಪ್ರಾಯಪಟ್ಟರು.

‘ ಪರಾಗ್ ‘ ಸಂಸ್ಥೆ ಹಾಗೂ ‘ ಬಹುರೂಪಿ ‘ ಪ್ರಕಾಶನ ಹಮ್ಮಿಕೊಂಡಿರುವ ‘ಬಿಂಬ ಪ್ರತಿಬಿಂಬ’ ಮೂರು ದಿನಗಳ ಮಕ್ಕಳ ಕೃತಿಗಳ ಭಾಷಾಂತರ ಕಲಿಕಾ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಂವಿಧಾನದ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯನ್ನು ಅನಾವರಣ ಮಾಡಿ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಾಯಿತು.

ಬಹುರೂಪಿ ಪ್ರಕಟಿಸಿರುವ ಗುಜ್ಜಾರ್ ಅವರ ‘ಎಲ್ಲರಿಗಾಗಿ ಅಂಬೇಡ್ಕರ್ ‘ ಸಚಿತ್ರ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಸಂವಿಧಾನ ಜನರಿಗೆ ನೀಡಿರುವ ಭರವಸೆ ದೊಡ್ಡದು. ಈ ಭರವಸೆಯನ್ನು ಉಳಿಸಿಕೊಳ್ಳಬೇಕಾದ ತುರ್ತು ಎಲ್ಲರ ಮುಂದಿದೆ ಎಂದು ಪಾಷಾ ಅಭಿಪ್ರಾಯಪಟ್ಟರು.

ಪರಾಗ್ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮಿ ಕರುಣಾಕರನ್ ಅವರು ಮಾತನಾಡಿ ಇಂದು ಸಂವಿಧಾನದ ಆಶಯವನ್ನು ಎಲ್ಲರೆಡೆಗೆ ಕೊಂಡೊಯ್ಯಬೇಕಾದ ತುರ್ತು ಇದೆ. ಪರಾಗ್ ಮಕ್ಕಳ ಕೃತಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು

ಅಂಬೇಡ್ಕರ್ ಅವರ ಕಾಲಾನುಕಾಲದ ಹೇಳಿಕೆಗಳ ಮೂಲಕ ಅವರ ಮಹತ್ವವನ್ನು ಮನಗಾಣಿಸುವ ಪ್ರಯತ್ನವನ್ನು ಎಲ್ಲರಿಗಾಗಿ ಅಂಬೇಡ್ಕರ್ ಕೃತಿಯ ಮೂಲಕ ಮಾಡಲಾಗಿದೆ ಎಂದು ಬಹುರೂಪಿ ಸಹ ಸಂಸ್ಥಾಪಕರಾದ ಶ್ರೀಜಾ ವಿ. ಎನ್. ತಿಳಿಸಿದರು.

ಮಕ್ಕಳ ಸಾಹಿತ್ಯ ತಜ್ಞರಾದ ತೇಜಸ್ವಿ ಶಿವಾನಂದ್, ಪರಾಗ್ ನ ತುಹಿನಾ ಶರ್ಮ, ವಿವೇಕ್, ಬಹುರೂಪಿಯ ಜಿ ಎನ್ ಮೋಹನ್ ಉಪಸ್ಥಿತರಿದ್ದರು.

ಪರಾಗ್ ಹಾಗೂ ಬಹುರೂಪಿ ಪ್ರಕಾಶನ ಜಂಟಿಯಾಗಿ ಹಮ್ಮಿಕೊಂಡಿದ್ದ ಮಕ್ಕಳ ಕೃತಿಗಳ ಭಾಷಾಂತರ ಕಾರ್ಯಾಗಾರವನ್ನು ಹಿರಿಯ ಸಾಹಿತಿ ಎಂ ಅಬ್ದುಲ್ ರೆಹಮಾನ್ ಪಾಷ ಉದ್ಘಾಟಿಸಿದರು. ಚಿತ್ರದಲ್ಲಿ ಮಕ್ಕಳ ಸಾಹಿತ್ಯ ತಜ್ಞರಾದ ತೇಜಸ್ವಿ ಶಿವಾನಂದ್, ಪರಾಗ್ ನ ಲಕ್ಷ್ಮಿ ಕರುಣಾಕರನ್, ಬಹುರೂಪಿಯ ಶ್ರೀಜಾ ವಿ ಎನ್ ಹಾಗೂ ಜಿ ಎನ್ ಮೋಹನ್ ಇದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?