Tuesday, May 21, 2024
Google search engine
Homeಜೀವನ ಚರಿತ್ರೆಶೈಕ್ಷಣಿಕ ಅಭಿವೃದ್ಧಿಯ ಹರಿಕಾರ: ವೂಡೇ ಪಿ ಕೃಷ್ಣ

ಶೈಕ್ಷಣಿಕ ಅಭಿವೃದ್ಧಿಯ ಹರಿಕಾರ: ವೂಡೇ ಪಿ ಕೃಷ್ಣ

ಕಳೆದ ಸಂಚಿಕೆಯಿಂದ…..

ಶಿಕ್ಷಣ ತಜ್ಞರಾದ ನಾಡೋಜ ಡಾ ವೂಡೇ ಪಿ ಕೃಷ್ಣ ಅವರ ಸಂಕ್ಷಿಪ್ತ ಜೀವನ ಚರಿತ್ರೆ ” ಶಿಕ್ಷಣ ಶಿಲ್ಪಿ ” ಕೃತಿಯು ಪಬ್ಲಿಕ್ ಸ್ಟೋರಿಯಲ್ಲಿ ಕೆಲವು ವಾರದಿಂದ ಪ್ರಕಟವಾಗುತ್ತಿದೆ. ಮೊದಲ ಕಂತನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಚುಕ್ಕಾಣೆ ಹಿಡಿದು ಅದನ್ನು ಸರ್ವತೋಮುಖವಾಗಿ ಬೆಳೆಸಿದ ಕೀರ್ತಿ ಕೃಷ್ಣ ಅವರಿಗೆ ಸಲ್ಲುತ್ತದೆ. ಇದು ಅವರ ಬದುಕಿನ ಮತ್ತು ಶಿಕ್ಷಣದತ್ತಿಯ ಸುವರ್ಣ ಅಧ್ಯಾಯ ಎನ್ನಬಹುದು.

ಡಾ‌. ಕೃಷ್ಣರವರು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಬಂದಾಗ ಇದ್ದ 9.4 0 0 ವಿದ್ಯಾರ್ಥಿಗಳ ಸಂಖ್ಯೆ ಇಂದು 21,000 ಕ್ಕೆ ಏರಿದೆ. 1200 ಮಂದಿ ಸಿಬ್ಬಂದಿಗಳಿದ್ದಾರೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ 33 ವಿದ್ಯಾಸಂಸ್ಥೆಗಳು ಹರಡಿವೆ ಇದು ಇವರ ಕಾರ್ಯಕ್ಷಮತೆಗೆ ಹಿಡಿದ ಕನ್ನಡಿ. ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಪೂರಕವಾಗಿ ಬೋಧಕ ಸಿಬ್ಬಂದಿ ಸಂಶೋಧನೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸುವುದು ಡಾ. ಕೃಷ್ಣ ಅವರ ವಿಶೇಷತೆ.

ಕೃಷ್ಣರವರು ಕೇವಲ ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿ. ರಾಷ್ಟ್ರ, ಅಂತಾರಾಷ್ಟ್ರೀಯ ಶಿಕ್ಣಣದ ಮಹಾನ್ ಚಿಂತಕರು ಎಂಬುದು ಹೆಚ್ಚು ಸಮಂಜಸ. ಶಿಕ್ಷಣ ಕ್ಷೇತ್ರ ಡಾ.ಕೃಷ್ಣರವರ ಇಷ್ಟದ ಆಯ್ಕೆ‌. ‘ ನೀನು ಇಷ್ಟಪಟ್ಟದ್ದನ್ನು ಸಮರ್ಥವಾಗಿ ಮಾಡು’ ಎಂಬ ಇವರ ತಂದೆಯವರ ಮಾರ್ಗದರ್ಶನದಂತೆ ತಾವು ಆರಿಸಿಕೊಂಡ ಕ್ಷೇತ್ರದಲ್ಲಿ ಏನನ್ನಾದರೂ ಸಾಧಿಸಲೇಬೇಕೆಂಬ ಛಲ ಇವರದು. ತಾವು ಮಾಡಬೇಕಿರುವ ಯೋಜನೆಗಳ ಟಿಪ್ಪಣಿ ತಯಾರಿಸಿಕೊಂಡು ಒಂದೊಂದೇ ಕೆಲಸವನ್ನು ಸಮರ್ಥವಾಗಿ ಕಾರ್ಯರೂಪಕ್ಕೆ ತರುತ್ತಾರೆ.

ಸ್ನೇಹ- ವಿಶ್ವಾಸಗಳಿಗೆ ಬೆಲೆ ಕೊಡುವ ಕೃಷ್ಣರವರು ಬುದ್ಧಿ ಮತ್ತು ಕಾರ್ಯಸಾಧನೆಯಿಂದ ಶೈಕ್ಷಣಿಕ ರಂಗದಲ್ಲಿ ಉಜ್ವಲವಾದ ಹೆಜ್ಜೆಗುರುತುಗಳನ್ನು ಮೂಡಿಸಿದ್ದಾರೆ. ಸಮಾಜಕ್ಕೆ ಉತ್ತಮ ನಾಗರಿಕರನ್ನು ಒದಗಿಸುವ ಕೆಲಸದಲ್ಲಿ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಅಲ್ಲದೆ ಸದಾಶಿವನಗರ ಶಿಕ್ಷಣ ಸಂಸ್ಥೆಗಳು, ಏಟ್ರಿಯಾ ತಾಂತ್ರಿಕ ಮಹಾವಿದ್ಯಾಲಯ ಮುಂತಾದ ವಿದ್ಯಾಸಂಸ್ಥೆಗಳಲ್ಲಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಂದುವರೆಯುವುದು…….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?