Saturday, July 27, 2024
Google search engine
Homeತುಮಕೂರ್ ಲೈವ್ಅಂಗನವಾಡಿ ನೌಕರರ ಹೋರಾಟಕ್ಕೆ ಪೊಲೀಸರ ಅಡ್ಡಿ

ಅಂಗನವಾಡಿ ನೌಕರರ ಹೋರಾಟಕ್ಕೆ ಪೊಲೀಸರ ಅಡ್ಡಿ

ಪಬ್ಲಿಕ್ ಸ್ಟೋರಿ: ಪ್ರಾಥಮಿಕ ಪೂರ್ವ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಬೇಕು ಎಂಬ ಪ್ರಮುಖ ಬೇಡಿಕೆ ಸೇರಿದಂತೆ ಅಂಗನವಾಡಿ ನೌಕರರ ವಿವಿಧ ಒತ್ತಾಯಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಕರೆ ನೀಡಿದ್ದ ಪಾದಯಾತ್ರೆಗೆ ಪೊಲೀಸ್ ರು ತಡೆ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ರಾಜ್ಯದ ವಿವಿಧ ಭಾಗಗಳಿಂದ ತುಮಕೂರಿಗೆ ಅಂಗನವಾಡಿ ನೌಕರರು ಆಗಮಿಸಿ ಅಲ್ಲಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ನಡೆಸುವ ಕರೆಯನ್ನು ನೀಡಲಾಗಿತ್ತು. ಈಬಗ್ಗೆ ಸರ್ಕಾರ, ಪೊಲೀಸ್ ಇಲಾಖೆ ಗಮನಕ್ಕೆ ಲಿಖಿತ, ಮೌಖಿಕವಾಗಿ ತರಲಾಗಿದೆ ಎಂದು ಅಂಗನವಾಡಿ ನೌಕರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ವರಲಕ್ಷ್ಮಿ ತಿಳಿಸಿದರು.

ಕೋಲಾರ ಸೇರಿದಂತೆ ರಾಜ್ಯದ ಹಲವೆಡೆಯಿಂದ ಪಾದಯಾತ್ರೆಯಲ್ಲಿ ಭಾಗವಹಿಸಲು ಬರುತ್ತಿದ್ದವರನ್ನು ಪೊಲೀಸರು ತಡೆದು ದೌರ್ಜನ್ಯ ಎಸಗುತ್ತಿದ್ದಾರೆ. ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ನಡೆಸುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದೆ ಎಂದು ಮುಖಂಡರು ದೂರಿದ್ದಾರೆ.

ಪತ್ರಿಕಾ ಗೋಷ್ಠಿ ನಡೆಯುವಾಗಲೇ ತುಮಕೂರು ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಮುಖಂಡರಾದ ವರಲಕ್ಷ್ಮಿ, ಮೀನಾಕ್ಷಿ ಸುಂದರಂ, ಸೈಯದ್ ಮುಜೀದ್, ಬಸವರಾಜು ಅವರೊಂದಿಗೆ  ಮಾತು  ಕತೆ ನಡೆಸುತ್ತಿದ್ದಾರೆ.

ಈ ವೇಳೆಗಾಗಲೇ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಬೇಕಿತ್ತು. ವಿವಿಧೆಡೆಯಿಂದ ಪಾದಯಾತ್ರೆಗಾಗಿ ತುಮಕೂರಿಗೆ ಆಗಮಿಸಿರುವ ಕಾರ್ಯಕರ್ತೆಯರು ಪೊಲೀಸರ ನಡೆಗೆ ಬೇಸತ್ತು ಕಾದು ಕುಳಿತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?