Saturday, July 27, 2024
Google search engine
Homeತುಮಕೂರ್ ಲೈವ್ಬರಗೂರು ನೇತೃತ್ವದಲ್ಲಿ ತುಮಕೂರಿನಲ್ಲಿ ಯುವ ಬರಹಗಾರರ ಕಾರ್ಯಾಗಾರ

ಬರಗೂರು ನೇತೃತ್ವದಲ್ಲಿ ತುಮಕೂರಿನಲ್ಲಿ ಯುವ ಬರಹಗಾರರ ಕಾರ್ಯಾಗಾರ

ತುಮಕೂರು: ಕರ್ನಾಟಕ ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯಿಂದ ತುಮಕೂರಿನಲ್ಲಿ ರಾಜ್ಯಮಟ್ಟದ ಯುವ ಬರಹಗಾರರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2020ರ ಜನವರಿ 4 ಮತ್ತು 5 ರಂದು ಎರಡು ದಿನಗಳ ಕಾಲ ನಡೆಯಲಿರುವ ಯುವ ಬರಹಗಾರರ ಸಾಹಿತ್ಯ ಕಾರ್ಯಾಗಾರದಲ್ಲಿ ನಲವತ್ತು ವರ್ಷದೊಳಗಿನ ಬರಹಗಾರರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಕನ್ನಡ ಸಾಹಿತ್ಯದ ತಾತ್ತಿಕ ನೆಲೆಗಳಲ್ಲದೆ, ಸಾಹಿತ್ಯದಲ್ಲಿ ಬದ್ಧತೆ, ಸಾಮಾಜಿಕ ಜವಾಬ್ದಾರಿ ಕುರಿತಂತೆ ತಜ್ಞರಿಂದ ವಿಷಯ ಮಂಡನೆಯಾಗಲಿದ್ದು ಅರ್ಥಪೂರ್ಣ ಚರ್ಚೆ ನಡೆಯಲಿದೆ ಎಂದಿದ್ದಾರೆ.

ಕಾರ್ಯಾಗಾರವನ್ನು ಪ್ರಸಿದ್ಧ ಮಲೆಯಾಳಿ ಸಾಹಿತಿ ಹಾಗೂ ಚಲನಚಿತ್ರ ವಿಮರ್ಶಕ ರಾಮಚಂದ್ರನ್ ಉದ್ಘಾಟಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸುವ ಬಂಡಾಯಗಾರರಿಗೆ ಉಚಿತ ವಸತಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಹೆಸರು ನೋಂದಾಯಿಸಿಕೊಳ್ಳಲು ತುಮಕೂರು ಜಿಲ್ಲಾ ಸಂಚಾಲಕರಾದ ಡಾ.ನಾಗಭೂಷಣ್ ಬಗ್ಗನಡು-9964852518 ಮತ್ತು ಡಾ. ಓ.ನಾಗರಾಜ್-9448659644 ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದೆ.

ಭಕ್ತರಹಳ್ಳಿ ಕಾಮರಾಜ್ ಮತ್ತು ಡಾ.ರಂಗಾರೆಡ್ಡಿ ಕೋಡಿರಾಂಪುರ ಕಾರ್ಯಾಗಾರದ ನಿರ್ದೇಶಕರಾಗಿದ್ದಾರೆ ಎಂದು ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?