Saturday, July 27, 2024
Google search engine
HomeUncategorizedಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ:  9 ಮಂದಿಯ ಮೇಲೆ ಪ್ರಕರಣ ದಾಖಲು

ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ:  9 ಮಂದಿಯ ಮೇಲೆ ಪ್ರಕರಣ ದಾಖಲು

Publicstory


ತುರುವೇಕೆರೆ: ಕೋವಿಡ್-19ರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಯನ್ನು ದಿಕ್ಕರಿಸಿ ಸಾರ್ವಜನಿಕರನ್ನು ಗುಂಪು ಹಾಕಿಕೊಂಡು ಕಾರ್ಯಕ್ರಮ ಮಾಡಿದ ಆರೋಪದಡಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಸೇರಿದಂತೆ 9 ಮಂದಿಯ ಮೇಲೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ಹೊರಪೇಟೆಯ ಯಜಮಾನ್ ಮಹೇಶ್, ದೇವೇಗೌಡ ಬಡಾವಣೆಯ ಮಲ್ಲಿಕಾರ್ಜುನ್, ಚಂದ್ರಶೇಖರ್, ಸ್ವರ್ಣಾಂಬ ಪ್ರಾವಿಜನ್ ಸ್ಟೋರ್ನ ರಾಜೇಶ್, ಹೊರಪೇಟೆಯ ಚಿದಾನಂದ, ಎಂ.ಬೇವಿನಹಳ್ಳಿಯ ಮಹಾಲಿಂಗಯ್ಯ, ಯೋಗೇಶ್ ಟ್ರೇಡ್ ಮಾಲೀಕ ಯೋಗೇಶ, ವಿನಾಯಕ ಕುಂಕುಮ ಅಂಗಡಿಯ ಜಗದೀಶ್, ಬಸವೇಶ್ವರ ನಗರದ ಕಲ್ಯಾಣ ಸ್ವಾಮಿಯನ್ನು ಪ್ರಕರಣದ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.ಘಟನೆ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಯಾವುದೇ ಮೆರವಣಿಗೆ ಹಾಗು ಇನ್ನಿತರ ಜನರು ಸೇರುವ ಕಾರ್ಯ ಕ್ರಮಗಳನ್ನು ಮಾಡಬಾರದೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಸಹ ಮಾ.29ರ ರಾತ್ರಿ 8 ಗಂಟೆಯ ಸಮಯದಲ್ಲಿ ಮೇಲಿನ 9 ಆರೋಪಿಗಳು ಇಲ್ಲಿನ ಕೋಡಿಬಸವೇಶ್ವರ ಸ್ವಾಮಿಯ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆಯನ್ನು ಮಾಡಿದ್ದರಿಂದ ರಾಷ್ಟ್ರೀಯ ವಿಪತ್ತು ಕಾಯ್ದೆ 2005 ಮತ್ತು ಕಲಂ60ರ ಅಡಿಯಲ್ಲಿ ಮಾ.30ರಂದು ಪಿಎಸ್.ಐ.ಪ್ರೀತ್ ಅವರು ಸರ್ಕಾರದ ನಿರ್ದೇಶನದ ಮೇರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದ ಒಂಬತ್ತು ಮಂದಿಯ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?