Saturday, July 27, 2024
Google search engine
Homeತುಮಕೂರು ಲೈವ್ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ‌ ಇನ್ನಿಲ್ಲ

ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ‌ ಇನ್ನಿಲ್ಲ

ತುಮಕೂರು: ಲೇಖಕಿ,ಸಮಾಜ ಸೇವಕರಾದ ಶಅನ್ನಪೂರ್ಣ ವೆಂಕಟನಂಜಪ್ಪ ಅವರು ಹೃದಯಾಘಾತದಿಂದ ಮಂಗಳವಾರ ಬೆಳಗಿನ ಜಾವ 5ಗಂಟೆಗೆ ನಿಧನಹೊಂದಿದರು.

ಅವರಿಗೆ 68ವರ್ಷ ವಯಸ್ಸಾಗಿತ್ತು.

ಹಲವು ಸಾಹಿತ್ಯ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುತ್ತಿದ್ದರು. ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದರು.

ಸಾಹಿತ್ಯ, ಸಮಾಜಸೇವೆ, ಸಹಕಾರ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಅನ್ನಪೂರ್ಣ ಅವರ ನಿಧನಕ್ಕೆ ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ ಮಲ್ಲಿಕಾಬಸವರಾಜು, ಕಾರ್ಯದರ್ಶಿ ಡಾ. ಅರುಂಧತಿ, ಸಹ ಕಾರ್ಯದರ್ಶಿ ಡಾ.ಶ್ವೇತಾರಾಣಿ ಕಂಬನಿ ಮಿಡಿದಿದ್ದಾರೆ.

ಲೇಖಕಿಯರ ಸಂಘದ ಚಟುವಟಿಕೆ,ಬೆಳವಣಿಗೆಯಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಕೊಂಡಾಡಿದ್ದಾರೆ.

ಕಸಾಪ ನಗರ ಘಟಕದ ಅಧ್ಯಕ್ಷೆ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷ್ಯೆಯಾಗಿ ಅವರ ಕೆಲಸ ಗಣನೀಯವಾಗಿದೆ ಎಂದು ಹೇಳಿದ್ದಾರೆ.

ಕಿತ್ತೂರು ಚೆನ್ನಮ್ಮ ಪ್ರಶಸ್ತಿ, ಸಹಕಾರ ರತ್ನ ಪ್ರಶಸ್ತಿ ಪಡೆದಿದ್ದ ಅವರು ಸ್ನೇಹಜೀವಿಗಳಾಗಿದ್ದರು. ಅವರ ನಿಧನಕ್ಕೆ ಕಸಾಪ ಕಂಬನಿ ಮಿಡಿದಿದೆ ಎಂದು ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?