Thursday, September 5, 2024
Google search engine
Homeಜಸ್ಟ್ ನ್ಯೂಸ್ಡಿ.ಆರ್.ಬಸವರಾಜ್ ಇನ್ನಿಲ್ಲ

ಡಿ.ಆರ್.ಬಸವರಾಜ್ ಇನ್ನಿಲ್ಲ

ತುರುವೇಕೆರೆ: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಮಾಜಿ ಉಪಾಧ್ಯಕ್ಷರಾದ ಡಿ.ಆರ್.ಬಸವರಾಜು(73) ಅವರು ಭಾನುವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ತಾಲ್ಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದ ನಿವಾಸಿಯಾದ ಮೃತ ಡಿ.ಆರ್.ಬಸವರಾಜುರವರು ನಾಲ್ವರು ಗಂಡು ಮಕ್ಕಳು, ಪತ್ನಿ ಚಂದ್ರಮ್ಮ ಹಾಗು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಮೃತ ಡಿ.ಆರ್.ಬಸವರಾಜುರವರು ತಾಲ್ಲೂಕು ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಮುಖ್ಯವಾಗಿ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದು ಪಕ್ಷ ಕಟ್ಟಲು ಶ್ರಮಿಸಿ ಜಿಲ್ಲಾ ಹಾಗು ರಾಜ್ಯ ಮಟ್ಟದ ನಾಯಕರೊಂದಿಗೆ ಒಳ್ಳೆಯ ಹೆಸರನ್ನು ಸಂಪಾದಿಸಿಕೊಂಡಿದ್ದರು. ರಾಜಕೀಯದ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲೂ ಸಹ ಸಕ್ರಿಯವಾಗಿ ಪಾಲ್ಗೊಂಡು ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ್ದರು.

ದೊಂಬರನಹಳ್ಳಿ ಗ್ರಾಮದ ಹಾಲು ಉತ್ಪಾದರಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ ಹಾಗು ಕೊಂಡಜ್ಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದವರು. ಮುಖ್ಯವಾಗಿ ದೊಂಬರನಹಳ್ಳಿ ಗ್ರಾಮದಲ್ಲಿ ಶ್ರೀ ಸೋಮೇಶ್ವರ ಪ್ರೌಢ ಶಾಲೆ ಸ್ಥಾಪನೆಗೆ ಶ್ರಮಿಸಿ ಅದರ ಶಾಲಾಭಿವೃದ್ಧಿ ಸಮಿತಿಯ ಕಾರ್ಯದಶರ್ಿಯಾಗಿಯೂ ಶಾಲೆಯ ಏಳಿಗೆಗೆ ದುಡಿದಿದ್ದರು.

ಮೃತ ಡಿ.ಆರ್.ಬಸವರಾಜುರವರಿಗೆ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲಿದ್ದರು. ಭಾನುವಾರ ತಡ ರಾತ್ರಿ ನಿಧನರಾಗಿದ್ದಾರೆ.

ಮೃತರ ಸ್ವ ಗ್ರಾಮವಾದ ದೊಂಬರನಹಳ್ಳಿಯಲ್ಲಿ ಸೋಮವಾರ 3 ಗಂಟೆಗೆ ಅಂತ್ಯಶವಸಂಸ್ಕಾರ ನೆರವೇರಿತೆಂದು ಕುಟುಂಬದವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?