Tuesday, July 23, 2024
Google search engine
Homeಪೊಲಿಟಿಕಲ್BSY ಬದಲಾವಣೆ: ಕುತೂಹಲ ಮೂಡಿಸಿದ ಹೊಸ ನಾಯಕನಿಗಾಗಿ ಲಿಂಗಾಯತರ ಸಭೆ

BSY ಬದಲಾವಣೆ: ಕುತೂಹಲ ಮೂಡಿಸಿದ ಹೊಸ ನಾಯಕನಿಗಾಗಿ ಲಿಂಗಾಯತರ ಸಭೆ

Publicstory. in


ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ನಾಯಕನಿಗಾಗಿ ಲಿಂಗಾಯತ-ವೀರಶೈವ ಸಮನ್ವಯ ವೇದಿಕೆ ಬೆಂಗಳೂರಿನಲ್ಲಿ ಸಭೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಅಶೋಕ ಬಿ.ಹಿಂಚಿಗೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಕೇಳಿ ಬಂದ ಮಾತುಗಳು


* ಲಿಂಗಾಯತ-ವೀರಶೈವ ರಾಜಕಾರಣಿಗಳು ವಂಶಪಾರಂರ್ಯ, ವ್ಯಭಿಚಾರ, ಭ್ರಷ್ಟಾಚಾರ ಹಾಗೂ ಕಳಂಕಿತರಾಗಿದ್ದರೆ ಅಂತಹವರನ್ನು ಸಮುದಾಯದವರು ಗಟ್ಟಿಯಾಗಿ ವಿರೋಧಿಸಬೇಕು.

* ಡಿಸೆಂಬರ್ ನಲ್ಲಿ ಬಿಜೆಪಿಯಲ್ಲಿ ಭಾರಿ ಬದಲಾವಣೆ ಆಗಲಿವೆ ಎಂಬ ಸುದ್ದಿ ಇದೆ.

* ಒಂದು ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಆ ಸ್ಥಾನಕ್ಕೆ ಸಮುದಾಯದ ಮತ್ತೊಬ್ಬ ಗಟ್ಟಿ ನಾಯಕರನ್ನೇ ಹೈಕಮಾಂಡ್ ಪರಿಗಣಿಸಬೇಕು.

* ಬಸವಣ್ಣನವರ ತತ್ವಕ್ಕೆ ಅಪಚಾರಚಾಗಲು ಬಿಡಬಾರದು.

* ವೀರಶೈವ-ಲಿಂಗಾಯತ ಬಣಗಳಿದ್ದರೆ ಮೂರನೆಯವರು ದುರ್ಲಾಭ ಪಡೆಯುತ್ತಾರೆ.

* ಜೆಡಿಎಸ್ ದ್ರೋಹದ ಕಾರಣ ಅನುಕಂಪದ ಆಧಾರದಲ್ಲಿ ಯಡಿಯೂರಪ್ಪ ಅವರನ್ನು ಸಮುದಾಯ ನಾಯಕ ಎಂದು ಒಪ್ಪಿಕೊಂಡಿತು. ಆದರೆ ಇಂದು ಅವರ ನಾಯಕತ್ವ ಕೊನೆಯಾಗುವ ಲಕ್ಷಣಗಳು ಕಾಣುತ್ತಿವೆ.

* ಮುಂದಿನ ನಾಯಕರು ನಮ್ಮ ಸಮುದಾಯದ ಉತ್ತಮ ನಾಯಕನೇ ಅಗಬೇಕು.

* ಈ ಸಂಗತಿಯನ್ನು ಬಿಜೆಪಿ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲಾಗುವುದು.

* ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿಗಳಾಗುವವರಲ್ಲಿ ಬಸನಗೌಡ ಪಾಟೀಲ ಯತ್ನಾಳ, ಜಗದೀಶ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಇದ್ದಾರೆ.
ಕಾಂಗ್ರೆಸ್ ನಲ್ಲಿ ಎಂ.ಬಿ.ಪಾಟೀಲ ನಿರ್ವಿವಾದವಾಗಿ ಸಮುದಾಯದ ನಾಯಕ.

* ಕಾಂಗ್ರೆಸ್ ಮೂಲತಃ ಲಿಂಗಾಯತರ ಪಕ್ಷ. ಎಸ್.ನಿಜಲಿಂಗಪ್ಪ, ವೀರೇಂದ್ರ ಪಾಟೀಲ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ಜೆ.ಎಚ್.ಪಟೇಲ್, ಎಸ್.ಆರ್.ಬೊಮ್ಮಾಯಿ ಅಂತಹವರು ಮುಖ್ಯಮಂತ್ರಿಗಳಾಗಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ.

* ಇವತ್ತು ನಮ್ಮ ನಾಯಕರಲ್ಲಿ ಮೌಲ್ಯಗಳು ಕುಸಿದಿವೆ. ಹೀಗಾಗಲು ನಾವು ಬಿಡಬಾರದು.

* ಲಿಂಗಾಯತ-ವೀರಶೈವ ಬಣಗಳ ಕಚ್ಚಾಟವನ್ನು ನಿಲ್ಲಿಸಿ ಒಂದಾಗಿ ಸಮುದಾಯದ ಏಳ್ಗೆಗೆ ಶ್ರಮಿಸಬೇಕು.

* ಈ ಸಭೆ ಯಾರದೇ ಪ್ರಾಯೋಜಿತ ಸಭೆ ಅಲ್ಲ. ಇವತ್ತು ಎಲ್ಲರೂ ಮೀಸಲಾತಿ ಬೇಕು ಎಂದು ರಸ್ತೆಗೆ ಇಳಿದಿದ್ದಾರೆ. ಹೀಗಿರುವಾಗ ಸಮುದಾಯ ಕೈಕಟ್ಟಿ ಕೂರಲು ಸಾಧ್ಯವಿಲ್ಲ.

* ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಸಮುದಾಯವನ್ನು ಒಡೆದು ಎಂ‌.ಬಿ ಪಾಟೀಲರನ್ನು ಹರಕೆಯ ಕುರಿ ಮಾಡಿದ್ದಾರೆ‌‌. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು.

* ಲಿಂಗಾಯತ-ವೀರಶೈವ ಬಣಗಳು ಒಟ್ಟಾಗಿ ಸಂಘಟನೆಯಾದರೆ ಮಾತ್ರ ನಮ್ಮ ನಾಯಕ ಬೆಳೆಯಬಲ್ಲ.

* ಈ ದಿಸೆಯಲ್ಲಿ ಶೀಘ್ರವೇ ಲಿಂಗಾಯತ-ವೀರಶೈವ ಸಮನ್ವಯ ವೇದಿಕೆ ವತಿಯಿಂದ ಬೆಂಗಳೂರಿನಲ್ಲಿ ಗುರು-ವಿರಕ್ತ ಸ್ವಾಮೀಜಿಗಳ ಮತ್ತು ಪ್ರಮುಖರ ಸಭೆ ಹಮ್ಮಿಕೊಳ್ಳಲಾಗಿದೆ.

* ಸಭೆಯಲ್ಲಿ ಇದ್ದವರು- ಹೈಕೋರ್ಟಿನ ಹಿರಿಯ ವಕೀಲ ಗಂಗಾಧರ ಗುರುಮಠ, ಎಚ್.ಎಸ್.ಚಂದ್ರಮೌಳಿ, ಲೆಕ್ಕ ಪರಿಶೋಧಕ ಡಾ.ಗಿರೀಶ್ ಕೆ‌.ನಾಶಿ, ಸಾಹಿತಿ-ಆರ್ಥಿಕ ತಜ್ಞ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಹಾಲನೂರು ಲೇಪಾಕ್ಷಿ, ಜಿ.ಪಂ.ಸದಸ್ಯ ತೇಜಸ್ವಿ ವಿ.ಪಟೇಲ್, ರೈತ ಸಂಘದ ಮಲ್ಲೇಶ, ಎಂ.ಟಿ.ಸುಭಾಶ್ಚಂದ್ರ.


ಯಾರು ಏನು ಹೇಳಿದರು:

* ಸರ್ಪಭೂಷಣ ಮಠದ ಮಲ್ಲಿಕಾರ್ಜುನ ದೇವರು ಹೇಳಿದ್ದು-
ಲಿಂಗಾಯತ-ವೀರಶೈವ ಸಮುದಾಯಕ್ಕೆ ಸೇರಿದವರೇ
“ಕೇಶವ ಕೃಪಾ”ದ ಮುಖ್ಯಸ್ಥರು ಆಗಬೇಕು.

* ಡಾ.ಗಿರೀಶ್ ಕೆ.ನಾಶಿ- ಯತ್ನಾಳ್ ಅವರ ನೇರ ನಿಷ್ಠುರ ಹೇಳಿಕೆಗಳು ಹೇಗೆ ವಿವಾದ ಆಗಲು ಸಾಧ್ಯ?, ವಿವಾದಗಳಿಲ್ಲದೆ ನಾಯಕನಾಗುವುದಾದರೂ ಹೇಗೆ?

* ಡಾ.ಜಿ.ಎನ್.‌ಮಲ್ಲಿಕಾರ್ಜುನಪ್ಪ- ಲಿಂಗಾಯತ-ವೀರಶೈವ ಎಂಬ ವೈದಿಕ-ಅವೈದಿಕವಾದ ಎರಡು ಎತ್ತುಗಳ ಬಂಡಿಯನ್ನು ಮುನ್ನಡೆಸುವ ಭವಿಷ್ಯದ ನಾಯಕ ಸಂಸ್ಕೃತಿ ಉಳ್ಳ ನಿಸ್ವಾರ್ಥಿ ಆಗಿರಬೇಕು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?