Saturday, July 27, 2024
Google search engine
HomeUncategorizedತುರುವೇಕೆರೆ ಸಾ.ಶಿ.ದೇವರಾಜ್ ಜಿಲ್ಲಾ ಕಸಾಪ ಚುನಾವಣೆಗೆ ಸ್ಪರ್ಧೆ

ತುರುವೇಕೆರೆ ಸಾ.ಶಿ.ದೇವರಾಜ್ ಜಿಲ್ಲಾ ಕಸಾಪ ಚುನಾವಣೆಗೆ ಸ್ಪರ್ಧೆ

Publicstory


ತುರುವೇಕೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಸೇವೆ ಸಲ್ಲಿಸಲು ಸಾಹಿತಿಗಳೇತರರಿಗೂ ಅವಕಾಶ ಕಲ್ಪಿಸುವಂತಾಗ ಬೇಕು; ಆ ನಿಟ್ಟಿನಲ್ಲಿ ತಾಲ್ಲೂಕಿನ ಸಾ.ಶಿ.ದೇವರಾಜ್ ಅವರು ಕೂಡ ಜಿಲ್ಲಾ ಕಸಾಪ ಸ್ಥಾನಕ್ಕೆ ಸ್ಪರ್ಧಿಯಾಗಿದ್ದಾರೆಂದು ಎಪಿಎಂಸಿ ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವಾನಾಥ್ ಹೇಳಿದರು.

ಪಟ್ಟಣದ ಕನ್ನಡ ಭವನದಲ್ಲಿ ಸ್ಪರ್ಧಿ ಸಾ.ಶಿ.ದೇವರಾಜ್ ಅವರ ಪ್ರಣಾಳಿಕೆ ಭಿತ್ತಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಕಳೆದ 25 ವರ್ಷಗಳಿಂದ ನಾಡು, ನುಡಿ ಸೇವೆಯಲ್ಲಿ ಸದಾ ಸಕ್ರಿಯರಾಗಿರುವ ಇವರು ಸಾಹಿತ್ಯ ಕ್ಷೇತ್ರದ ಗಣ್ಯರೊಂದಿಗೆ ನಿಕಟ ಸಂಪರ್ಕ ಹೊಂದಿ ತುರುವೇಕೆರೆ ತಾಲ್ಲೂಕಿನಲ್ಲಿ ಅದ್ದೂರಿಯಾಗಿ 10 ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದರು.

ಜಿಲ್ಲಾ ಕಸಾಪ ಚುನಾವಣಾ ಸ್ಪರ್ಧಿ ಸಾ.ಶಿ.ದೇವರಾಜ್ ಮಾತನಾಡಿ, ನಾನು ಲಯನ್ಸ್ ಕ್ಲಬ್ ಅಧ್ಯಕ್ಷನಾಗಿ ಸಾವಿರಾರು ನೇತ್ರ ಶಿಬಿರಗಳು, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರಗಳನ್ನು ಏರ್ಪಡಿಸದ್ದಲ್ಲದೆ ಸ್ವಯಂ ಸುಮಾರು 20 ಬಾರಿ ರಕ್ತದಾನ ಮಾಡಿದ್ದೇನೆ ಎಂದರು.

ತುರುವೇಕೆರೆಯಲ್ಲಿ ಮೂರು ಬಾರಿ ರಾಜ್ಯ ಮಟ್ಟದ ನಾಟಕೋತ್ಸವನ್ನು ಆಯೋಜಿಸಿ ಯಶಸ್ವಿಯಾಗಿ ನಾಟಕೋತ್ಸವ ಮಾಡಿದ್ದೇನೆ. ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ ಆಳ್ವಾಸ್ ನುಡಿಸಿರಿಯನ್ನು 2 ಬಾರಿ ಯಶಸ್ವಿಯಾಗಿ ನಡೆಸಿದ್ದೆ ಎಂದರು.

ತುರುವೇಕೆರೆಯಲ್ಲಿ ನಿರ್ಮಾಣವಾಗಿರುವ ಕನ್ನಡ ಭವನಕ್ಕೆ 2 ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದು. ನಾನು ಕಸಾಪ ಅಧ್ಯಕ್ಷನಾಗಿದ್ದಾಗ ಹಲವಾರು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೂರಾರು ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಯಾಗಿದ್ದಾನೆ.
ಈಗಾಗಲೇ ನನಗೆ ಉತ್ತಮ ಶಿಕ್ಷಕ ಪ್ರಶಸ್ತಿ, ಉತ್ತಮ ಸಿ.ಆರ್.ಪಿ ಪ್ರಶಸ್ತಿ, ರೋಟರಿ ಸಂಸ್ಥೆಯಿಂದ ಸಮಾಜ ಸೇವಾ ಪ್ರಶಸ್ತಿ ಪಡೆದಿದ್ದು. ತಾಲ್ಲೂಕಿನ ಎಲ್ಲಾ ಜಾತಿ, ಜನಾಂಗ ಮತ್ತು ಕನ್ನಡ ಸಾಹಿತ್ಯ ಪ್ರೇಮಿಗಳ ವಿಶ್ವಾಸ ಮತ್ತು ಎಲ್ಲಾ ರಾಜಕೀಯ ಪಕ್ಷದವರ ಬೆಂಬಲದಿಂದ ಜಿಲ್ಲಾ ಕಸಬಾ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು ಒಂದು ವೇಳೆ ನಾನು ಗೆದ್ದರೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮ್ಮೇಳನಗಳ ಸ್ವರೂಪ ಬದಲಾಯಿಸುತ್ತೇನೆ ಎಂದು ಹೇಳಿದರು.

ತುಮಕೂರಿನಲ್ಲಿ ರಾಜ್ಯ ಮಟ್ಟದ 69 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದು ಹಲವಾರು ವರ್ಷ ಕಳೆದರೂ ಸಹ ಇದುವೆರೆಗೂ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಜರುಗಿಲ್ಲಆದ್ದರಿಂದ ಎಲ್ಲಾ ಹಿರಿಯ ಸಾಹಿತಿಗಳು ಮತ್ತು ಜನಪ್ರತಿನಿಧಿಗಳ ಮಾರ್ಗದರ್ಶನ ಪಡೆದು ಸಾಹಿತ್ಯ ಮ್ಮೇಳನ ಆಯೋಜಿಸುವುದು. ತುಮಕೂರಿನ ಕಸಾಪ ಭವನವನ್ನು ಮೇಲ್ದರ್ಜೆಗೆ ಏರಿಸುತ್ತೇನೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿಅಜೀವ ಸದಸ್ಯರ ಸಂಖ್ಯೆ ಹೆಚ್ಚಿಸುವುದು. ಇವುಗಳನ್ನು ಕಾರ್ಯರೂಪಕ್ಕೆ ತರಲು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕಸಾಪ ಮತದಾರರು ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಂಕರೇಗೌಡ, ಕಂಚೀರಾಯಪ್ಪ, ರಾಮಚಂದ್ರು, ನಂರಾಜುಮುನಿಯೂರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?