Saturday, July 20, 2024
Google search engine
Homeತುಮಕೂರು ಲೈವ್ವೀಕೆಂಡ್ ಕರ್ಪ್ಯೂ: ಓಡಾಟಕ್ಕೆ ಯಾರಿಗೆಲ್ಲ ಅವಕಾಶ?

ವೀಕೆಂಡ್ ಕರ್ಪ್ಯೂ: ಓಡಾಟಕ್ಕೆ ಯಾರಿಗೆಲ್ಲ ಅವಕಾಶ?

Public story


ತುಮಕೂರು: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚನೆ ನೀಡಿದ್ದಾರೆ.

ಮಾರ್ಗಸೂಚಿಯನ್ವಯ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವಾರಾಂತ್ಯದ ಕರ್ಫೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ, ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆ, ಪಾಲಿಕೆ, ನಿಗಮಗಳು ಸೇರಿದಂತೆ ತುರ್ತು/ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆ/ಕಚೇರಿಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ.

ಕೋವಿಡ್ ಗೆ ಸಂಬಂಧಿಸಿದ ಅಗತ್ಯ ಸೇವೆ ಮತ್ತು ನ ಕರ್ತವ್ಯಗಳನ್ನು ನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ತುರ್ತು ಮತ್ತು ಅಗತ್ಯ ಸೇವೆಗಾಗಿ 24/7 ಕಾರ್ಯಾಚರಣೆ ಮಾಡುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು.ಇಂತಹ ಸಂಸ್ಥೆಗಳಿಂದ ನೀಡಲಾದ ಗುರುತಿನ ಚೀಟಿ ಹೊಂದಿರುವ ನೌಕರರ ಚಲನೆಗೆ ಅನುಮತಿಸಲಾಗುವುದು. ಆದರೂ ಸಂಬಂಧಿಸಿದ ಕೈಗಾರಿಕೆ/ಸಂಸ್ಥೆಗಳು ಸಾಧ್ಯವಾದಷ್ಟು ಮಟ್ಟಿಗೆ ತಮ್ಮ ನೌಕರರಿಗೆ ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.

ಅಧಿಕೃತ ಗುರುತಿನ‌ ಚೀಟಿ ಹೊಂದಿರುವ ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರ ನೌಕರರು ಮತ್ತು ವಾಹನಗಳ‌ ಓಡಾಟಕ್ಕೂ ಅನುಮತಿ ನೀಡಲಾಗುವುದು.

ಐಟಿ ಮತ್ತು ಐಟಿಇಎಸ್ ಕಂಪನಿಗಳು / ಸಂಸ್ಥೆಗಳ ಅಗತ್ಯವಿರುವ ಸಿಬ್ಬಂದಿ ಹಾಗೂ ನೌಕರರು ಮಾತ್ರ ಕಚೇರಿಯಿಂದ ಕೆಲಸ ಮಾಡತಕ್ಕದ್ದು. ಉಳಿದವರು ಮನೆಯಿಂದಲೇ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ.

ಕನಿಷ್ಠ ಪುರಾವೆಗಳನ್ನು ಹೊಂದಿರುವ ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳುವವರಿಗೆ ಅನುಮತಿಸಲಾಗುವುದು.
ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌, ಪ್ರಾಣಿಗಳ ಮೇವು ಮಾರಾಟ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.
ರಸ್ತೆ ಬದಿ ಮಾರಾಟಗಾರರು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿ, ಸ್ವತಂತ್ರ ಮದ್ಯದಂಗಡಿ ಮತ್ತು ಮಳಿಗೆಗಳನ್ನು ತೆರೆದು ಮಾರಾಟ ಮಾಡಲು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಅವಕಾಶವಿದೆ.
ಮನೆಯ ಹೊರಗಿನ ವ್ಯಕ್ತಿಗಳ ಚಲನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಎಲ್ಲಾ ವಸ್ತುಗಳ ಮನೆ ವಿತರಣೆ(home delivery)ಯನ್ನು 24×7 ಪ್ರೋತ್ಸಾಹಿಸಲಾಗುತ್ತದೆ.

ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಿಂದ ತಿನಿಸುಗಳನ್ನು ತೆಗೆದುಕೊಂಡು ಹೋಗಲು ಮತ್ತು ಮನೆಗೆ ತಲುಪಿಸಲು ಮಾತ್ರ ಅನುಮತಿಸಲಾಗುತ್ತದೆ.

ಪ್ರಯಾಣಿಕರ ಪ್ರಯಾಣಕ್ಕೆ ಅನುವಾಗುವಂತೆ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ‌ ಮತ್ತು ಬಸ್ ಟರ್ಮಿನಲ್ / ನಿಲ್ದಾಣಗಳಿಗೆ ಹೋಗಲು/ಬರಲು ಸಾರಿಗೆ/ಖಾಸಗಿ ವಾಹನ/ ಟ್ಯಾಕ್ಸಿಗಳಿಗೆ ಅನುಮತಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ದಾಖಲೆ / ಟಿಕೆಟ್ ಅನ್ನು ಕಟ್ಟುನಿಟ್ಟಾಗಿ ಹಾಜರುಪಡಿಸಬೇಕು.

ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ರಾಜ್ಯ ಸರ್ಕಾರ ಹೊರಡಿಸಿದ ಕೋವಿಡ್ 19 ಸೂಕ್ತ ನಡವಳಿಕೆ ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ತಮ್ಮ ಮನೆಯಲ್ಲಿಯೇ 40 ಜನರವರೆಗಿನ ನಿಕಟ ಕುಟುಂಬ ಸಂಬಂಧಿಗಳು ಮಾತ್ರ ಒಳಗೊಂಡಂತೆ ನೆರವೇರಿಸಬೇಕು. ಶವಸಂಸ್ಕಾರ / ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಮಾತ್ರ ನೆರವೇರಿಸಲು ಅನುಮತಿಸಲಾಗುವುದು ಎಂದು ಅವರು ನಿರ್ದೇಶನ ನೀಡಿದ್ದಾರೆ.
ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?