Saturday, July 20, 2024
Google search engine
Homeಜನಮನಇವರ ಕಂಡರೆ ದೇವರಾಜ್ ಅರಸ್ ಭಯ ಬೀಳುತ್ತಿದ್ದರು

ಇವರ ಕಂಡರೆ ದೇವರಾಜ್ ಅರಸ್ ಭಯ ಬೀಳುತ್ತಿದ್ದರು

ತುಮಕೂರು: ಬಿ.ಬಸವಲಿಂಗಪ್ಪ ಅವರು ಮುಖ್ಯಮಂತ್ರಿಯಾಗಿದ್ದರೆ ದೇವರಾಜ ಅರಸು ಅವರಿಗಿಂತ ಉತ್ತಮ ಆಡಳಿತ ನೀಡುತ್ತಿದ್ದರು ಎನ್ನುವ ಭಯ ಸ್ವತಹಃ ದೇವರಾಜ ಅರಸರಲ್ಲಿತ್ತು, ದೇವರಾಜ ಅರಸು ಉತ್ತಮ ಆಡಳಿತ ನೀಡುತ್ತಿದ್ದರು ಸಹ,ಸಮಾಜ ಸುಧಾರಣೆಗೆ ಇನ್ನಷ್ಟು ಕ್ರಮ ತೆಗೆದುಕೊಳ್ಳಬೇಕೆಂದು ಬಸವಲಿಂಗಪ್ಪ ಒತ್ತಾಯ ಮಾಡುತ್ತಿದ್ದರು ಎಂದು ಚಿಂತಕ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಎಸ್‍ಸಿ,ಎಸ್‍ಟಿ ನೌಕರರ ಸಮನ್ವಯ ಸಮಿತಿ ಮತ್ತು ಬಂಡಾಯ ಸಾಹಿತ್ಯ ಸಂಘಟನೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಮತ್ತು ಬಿ.ಬಸವಲಿಂಗಪ್ಪ ಸ್ಮರಣ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತಿದ್ದ ಅವರು, ಅಂಬೇಡ್ಕರ್ ಅವರ ಉತ್ತರಾಧಿಕಾರಿ ಎಂದರೆ ಅದು ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ನಾಗವಾರ ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕವಾಗಿ ಎಸಿ,ಎಸ್ಟಿ,ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿದರು,ಚಿಂತಕ ದೊರೈರಾಜು,ಕಲಾಶ್ರೀಡಾ.ಲಕ್ಷ್ಮಣ್‍ದಾಸ್,ಜಿ.ಪಂ.ಮಾಜಿ ಸದಸ್ಯ ಕೆಂಚಮಾರಯ್ಯ,ಕಲಾವಿದ ಹನುಮಂತೇಗೌಡ,ಡಾ.ಬಸವರಾಜು,ನರಸೀಯಪ್ಪ, ಸಿಎಒ ನರಸಿಂಹಮೂರ್ತಿ,ಚಂದ್ರಪ್ಪ,ಡಾ.ಓ.ನಾಗರಾಜು,ವಕೀಲ ಮಂಜುನಾಥ್ ಹೆಚ್.ವಿ. ನಾಗಭೂಷಣ್ ಬಗ್ಗನಡು ಸೇರಿದಂತೆ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?