Friday, July 26, 2024
Google search engine
Homeಜನಮನಆರಂಭದಲ್ಲೇ ಜನರ ಮೆಚ್ಚುಗೆ ಪಡೆಯುತ್ತಿರುವ ಜಿಲ್ಲಾಧಿಕಾರಿ

ಆರಂಭದಲ್ಲೇ ಜನರ ಮೆಚ್ಚುಗೆ ಪಡೆಯುತ್ತಿರುವ ಜಿಲ್ಲಾಧಿಕಾರಿ

Publicstory


ತುಮಕೂರು: ಜಿಲ್ಲೆಯಲ್ಲಿ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆರಂಭದಲ್ಲೇ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ.

ವಿಜಯಪುರದ ಜಿಲ್ಲಾಧಿಕಾರಿಯಾಗಿದ್ದಾಗ ನೆರೆ ಬಂದಿತ್ತು. ಆಗ ಅವರ ತಾತನ ಅಂತ್ಯಕ್ರಿಯೆಗೂ ತೆರಳದೇ ಕೆಲಸ ನಿರ್ವಹಿಸಿದ್ದರು. ಅದಕ್ಕೆ ಅವರು ನೀಡಿದ ಉತ್ತರದಿಂದ ಕೆಲವರ ಕಣ್ಣಾಲಿಗಳು ಒದ್ದೆಯಾಗಿದ್ದವು.

ಜನರ ನಡುವೆ ಆತ್ಮೀಯವಾಗಿ ಮಾತನಾಡುವ ಅವರ ಪರಿ ಈ ಹಿಂದೆ ಇಲ್ಲಿ ಕೆಲಸ ನಿರ್ವಹಿಸಿದ್ದ ಮೋಹನ್ ರಾಜ್ ಅವರೊಂದಿಗೆ ಸಮೀಕರಣ ಮಾಡುತ್ತಿದ್ದಾರೆ.

ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಅವರ ಕೊರ್ಟ್ ಕಲಾಪದ ಬಗ್ಗೆ ವಕೀಲರು ಸಹ ಮೆಚ್ಚುಗೆ ಸೂಚಿಸುತ್ತಿದ್ದರು.

ಜನರ ಜೊತೆ ಬೆರೆಯುವ, ಕಷ್ಟಸುಖ ಕೇಳುವ ಜಿಲ್ಲಾಧಿಕಾರಿಗಳು ಬೇಕಿತ್ತು. ಪಾಟೀಲರು ಈ ನಿಟ್ಟಿನಲ್ಲಿ ಕೆಲಸ ಮಾಡುವವರು ಎಂದು ಅನ್ನಿಸತೊಡಗಿದೆ. ನಿಜವಾದ ಜಿಲ್ಲಾಧಿಕಾರಿ ಎಂದರೆ ಶಾಸಕರು, ಸಂಸದರಿಗೂ ಮಿಗಿಲು. ಜನರ ಕಷ್ಟಗಳನ್ನು ಹಂಚಿಕೊಳ್ಳಬೇಕು ಎಂದು ರೈತ ಸಂಘದ ಮುಖಂಡ ದೇವರಾಜ್ https://publicstory.in ಗೆ ತಿಳಿಸಿದರು.

ಗ್ರಾಮ ವಾಸ್ತವ್ಯ


ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಲಕ್ಷ್ಮಿಪುರದಲ್ಲಿ ವೈ.ಎಸ್.ಪಾಟೀಲ ಅವರ ಗ್ರಾಮ ವಾಸ್ತವ್ಯ ಮಾಡಿ ಗಮನ ಸೆಳೆರು.

ಎಸ್ಪಿ ಡಾ.ಕೆ ವಂಶಿಕೃಷ್ಣ, ಸಿಇಒ ಗಂಗಾಧರಸ್ವಾಮಿ, ಎಡಿಸಿ ಚನ್ನಬಸಪ್ಪ, ಎಸಿ ಸೋಮಪ್ಪ, ತಹಶೀಲ್ದಾರ್ ಡಾ.ವಿಶ್ವನಾಥ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ವಾಸ್ತವ್ಯ ಮಾಡಲು ಆಗಮಿಸಿದ್ದ. ಜಿಲ್ಲಾಧಿಕಾರಿಗಳನ್ನು ಶಾಸಕರಾದ ವೀರಭದ್ರಯ್ಯ ಅವರು ಸ್ವಾಗತಿಸಿದರು.

ಗ್ರಾಮಸ್ಥರಿಗೆ ಉಚಿತ ಅರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು.
ಕೃಷಿ , ತೋಟಗಾರಿಕೆ, ಆರೋಗ್ಯ, ಆಹಾರ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ಅಧಿಕಾರಿಗಳು ಅರಿವು ಮೂಡಿಸಿದರು.
ಗ್ರಾಮದ 6 ಮಂದಿಗೆ ಪಿಂಚಣಿ ಆದೇಶ ಪತ್ರ, ಆರೋಗ್ಯ ಕಾರ್ಡು, ಕೃಷಿ ಸಲಕರಣೆ ವಿತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?