Saturday, July 27, 2024
Google search engine
Homeಕೃಷಿತುಮುಲ್ ವಿರುದ್ಧ ರೈತರ ಆಕ್ರೋಶ

ತುಮುಲ್ ವಿರುದ್ಧ ರೈತರ ಆಕ್ರೋಶ

ಮಲ್ಲಸಂದ್ರ: ಹಾಲಿನ ದರ ಕಡಿತ ಮಾಡಿರುವ ತುಮುಲ್ ಕ್ರಮವನ್ನು ಖಂಡಿಸಿ ಮಲ್ಲಸದ್ರದಲ್ಲಿರುವ ತುಮಕೂರು ಹಾಲು ಒಕ್ಕೂಟದ ಎದುರು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬೇಸಿಗೆಯಲ್ಲಿ ಹಾಲಿನ ಅವಕ ಹೆಚ್ಚಾಗಿದೆ ಎಂಬ ನೆಪವೊಡ್ಡಿ ಹಾಲಿನ ದರವನ್ನು 2 ರೂ ಕಡಿತಗೊಳಿಸಿದೆ. ಪಶು ಆಹಾರದ ದರವನ್ನು ಕೆ.ಜಿ.ಗೆ ಎರಡು ರೂ ಹೆಚ್ಚಳ ಮಾಡಿದೆ. ಇದರಿಂದ ರೈತರಿಗೆ ಒಂದು ಲೀಟರ್‌ಗೆ 4 ರೂ ನಷ್ಟವಾಗಿದೆ.ಇದನ್ನು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಡಿಸೆಂಬರ್ 4 ರವರೆಗೆ ಕಾಲಾವಕಾಶ ನೀಡಿದ್ದು, ಕಡಿತ ಮಾಡಿರುವ ಹಾಲಿನ ದರ ಮರುಸ್ಥಾಪನೆ ಮತ್ತು ಪಶು ಆಹಾರದ ದರ ಕಡಿತ ಮಾಡದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸ್ ಮನವಿ ಸ್ವೀಕರಿಸಿ ಮಾತನಾಡಿ, ರೈತ ಸಂಘ ಸಲ್ಲಿಸಿರುವ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಮತ್ತು ಕೆ.ಎಂ.ಎಫ್‌ಗೆ ಪತ್ರ ಬರೆದು, ಅಲ್ಲಿಂದ ಬರುವ ಸೂಚನೆಗಳ ಅನ್ವಯ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಂಡು ರೈತರಿಗೆ ಅನುಕೂಲವಾಗುವ ರೀತಿ ಆದೇಶ ಹೊರಡಿಸಲಾಗುವುದು ಎಂದು ಭರವಸೆ ನೀಡಿದರು.

ಹಾಲಿನ ಪ್ರೋತ್ಸಾಹಧನವನ್ನು ಆಗಸ್ಟ್ ತಿಂಗಳವರೆಗೆ ನೀಡಲಾಗಿದೆ. ಅದು ನೇರವಾಗಿಯೇ ರೈತರ ಖಾತೆಗಳಿಗೆ ಹೋಗುವುದರಿಂದ ತೊಂದರೆಯಿಲ್ಲ. ನಂತರದ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡುವ ನೀರಿಕ್ಷೆ ಇದೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್, ತುಮಕೂರು ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎಸ್.ಧನಂಜಯ ಆರಾಧ್ಯ, ಮಹಿಳಾ ಅಧ್ಯಕ್ಷೆ ಶಿವರತ್ನಮ್ಮ, ತಾಲೂಕು ಅಧ್ಯಕ್ಷ ನಾಗೇಂದ್ರ, ಸಣ್ಣದ್ಯಾಮೇಗೌಡ, ಮಲ್ಲಿಕಾರ್ಜುನಯ್ಯ, ಸಿದ್ದರಾಜು ಸೇರಿ ಹಲವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?