Saturday, July 27, 2024
Google search engine
Homeತುಮಕೂರು ಲೈವ್ಉಚಿತ ಬಸ್ ದೇವಸ್ಥಾನಕ್ಕೆ ಹೋಗಿ: ಎಂಟಿಕೆ

ಉಚಿತ ಬಸ್ ದೇವಸ್ಥಾನಕ್ಕೆ ಹೋಗಿ: ಎಂಟಿಕೆ

ಮಹಿಳೆಯರಿಗೆ ಸ್ವಾವಲಂಬನೆಯ ಶಕ್ತಿ ನೀಡಿದ ಶಕ್ತಿ ಯೋಜನೆ: ಶಾಸಕ ಎಂ.ಟಿ.ಕೃಷ್ಣಪ್ಪ

ತುರುವೇಕೆರೆ:
ತಾಲ್ಲೂಕಿನ ಮಹಿಳೆರು ಸರ್ಕಾರ ನೀಡಿರುವ ಉಚಿತ ಬಸ್ ಪ್ರಯಾಣವನ್ನು ಬಳಸಿಕೊಂಡು ಎಲ್ಲ ದೇವಸ್ಥಾನಗಳಿಗೆ ಹೋಗಿ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.


ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಭಾನುವಾರ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ನಮ್ಮ ಪ್ರಯಾಣಕ್ಕೆ ಚಾಲನೆ ನೀಡಿ ಮಾತನಾಡಿದರು.


ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳಲ್ಲಿ ಶಕ್ತಿ ಯೋಜನೆಯೂ ಒಂದಾಗಿದ್ದು ಇಂದು ರಾಜ್ಯದಾದ್ಯಂತ ಚಾಲನೆ ನೀಡಲಾಗುತ್ತಿದ್ದೆ. ಇಂತಹ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪೂಕರವಾದ ಅವಕಾಶವನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಸರ್ಕಾರದ ಯೋಜನೆಯನ್ನು ತಾಲ್ಲೂಕಿನ ಎಲ್ಲ ಮಹಿಳೆಯರು ಸಮರ್ಥವಾಗಿ ಬಳಸಿಕೊಂಡು ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳಿ. ಈ ಸರ್ಕಾರ ಉಳಿದ ನಾಲ್ಕು ಯೋಜನೆಗಳನ್ನು ಹಂತ ಹಂತವಾಗಿ ನೀಡುತ್ತಾರೆ ಅವುಗಳ ಪ್ರಯೋಜನವನನ್ನೂ ಪಡೆದುಕೊಳ್ಳಿ ಎಂದರು.


ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಯಾವುದಾದರೂ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣ ಮಾಡಿ. ಕುಟುಂಬದ ಏಳಿಗೆಗೆ ಶಕ್ತಿ ಯೋಜನೆ ಮಹತ್ವಪೂರ್ಣವಾಗಿದೆ ಎಂದರು.


ಇದೇ ವೇಳೆ ತುರುವೇಕೆರೆಯಿಂದ ಬೆಂಗಳೂರಿಗೆ ಮೊದಲು ಉಚಿತ ಬಸ್ ಗೆ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕ ಆರ್.ಮೂರ್ತಿ, ಮೇಲ್ವಿಚಾರಕರಾದ ಮಧುಸೂಧನ್, ಲೋಹಿತ್, ನರಸಿಂಹ ಸ್ವಾಮಿ, ಕ್ಯಾಷಿಯರ್ ಮಂಜುನಾಥ್, ಮುಖಂಡರುಗಳಾದ ಮಾವಿನಕೆರೆ ವಿಜಿಯೇಂದ್ರ, ರಾಘು, ನರಸೇಗೌಡ, ರಾಜಣ್ಣ, ಶಿವಾನಂದ ಬಸ್ ನಿರ್ವಾಹಕ ರಂಗಸ್ವಾಮಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?