Wednesday, July 24, 2024
Google search engine
Homeಜಸ್ಟ್ ನ್ಯೂಸ್ತಿಗಳ ಸಮುದಾಯಕ್ಕೆ ನೆರವು

ತಿಗಳ ಸಮುದಾಯಕ್ಕೆ ನೆರವು

ಗುಬ್ಬಿ: ತಿಗಳ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ತಿಸಿದರು.
ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘದ ಬೆಂಗಳೂರು ಮತ್ತು ಅಗ್ನಿವಂಶ ಕ್ಷತ್ರಿಯ ವಿದ್ಯಾಭಿವೃದ್ಧಿ ಸಂಘ ಗುಬ್ಬಿ ಇವರ ಸಹಯೋಗದಲ್ಲಿ 2023 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಜನಾಂಗದ ತುಮಕೂರು, ಹಾಸನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾತನಾಡಿದರು.
ತಿಗಳ ಸಮುದಾಯವು ವಿದ್ಯಾಭ್ಯಾಸವನ್ನು ಕೃಷಿಯಲ್ಲಿ ಸಾಧನೆ ಮಾಡಿದಂತೆ ತಮ್ಮ ಮಕ್ಕಳಿಗೆ ವಿದ್ಯೆಯನ್ನು ಕೋಡಿಸಲು ಗುರಿಯನ್ನು ಇಟ್ಟುಕೊಂಡು ವಿದ್ಯೆ ಅಭ್ಯಾಸ ಮಾಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅಗ್ನಿವಂಶ ಕ್ಷತ್ರಿಯ ವಿದ್ಯಾ ಅಭಿವೃದ್ಧಿ ಸಂಘದ ಅಧ್ಯಕ್ಷ ರಾಮಣ್ಣ ಮಾತನಾಡಿ,
ಸಮುದಾಯದಲ್ಲಿಉತ್ತಮ ವಿದ್ಯಾಭ್ಯಾಸವನ್ನು ಮಾಡುವ ಮೂಲಕ ಸಮಾಜ ದಕ್ಕೆ ಹೆಸರು ಬರುವಂತೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು ಉನ್ನತ ಹುದ್ದೆಗಳನ್ನು ಅಲಂಕರಿಸಿದ ನಂತರ ತಮಗೆ ಸಹಾಯ ನೀಡಿದಂತಹ ಸಮಾಜದ ಸಂಘ ಸಂಸ್ಥೆಗಳ ಏಳಿಗೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 45 ವಿದ್ಯಾರ್ಥಿಗಳನ್ನು ಹಾಗೂ ಪೋಷಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ರೇವಣ್ಣಸಿದ್ದಯ್ಯ, ಕಾರ್ಯದರ್ಶಿ ಕೆಂಪಯ್ಯ, ಶ್ರೀಕಾಂತ್, ಅನಂತಕೃಷ್ಣ, ಲಕ್ಷ್ಮಣ್, ದಾಸಪ್ಪ, ಸಿದ್ದಯ್ಯ, ಬೆ.ಗ್ರಾಂ ಜಿಲ್ಲೆಯ ರವಿ, ನಂಜೇಗೌಡ, ನಿರ್ದೇಶಕರಾದ ಲೋಕೇಶ್ ಬಾಬು, ಕುಂಬಯ್ಯ, ಮಲ್ಲಪ್ಪ, ಯೋಗಾನಂದ, ನಾಗರಾಜು, ಇತರರು ಇದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?