Saturday, July 27, 2024
Google search engine
Homeಜಸ್ಟ್ ನ್ಯೂಸ್ನಾನು ಬೇರೆ ಪಕ್ಷಕ್ಕೆ ಹೋಗಲಾರೆ: ಶಾಸಕ ಜ್ಯೋತಿಗಣೇಶ್

ನಾನು ಬೇರೆ ಪಕ್ಷಕ್ಕೆ ಹೋಗಲಾರೆ: ಶಾಸಕ ಜ್ಯೋತಿಗಣೇಶ್

ತುಮಕೂರು: ನಾನು ಬೇರೆ ಪಕ್ಷಕ್ಕೆ ಹೋಗಲಾರೆ. ಬಿಜೆಪಿಯಿಂದ ನಗರಕ್ಕೆ ನಾನೇ ಅಭ್ಯರ್ಥಿ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂಥ ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದ್ದೇನೆ. ಮುಖ್ಯಮಂತ್ರಿ ಸಹಿತ ಹಲವು ಸಚಿವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದಾರೆ ಎಂದರು.

ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಬಿಜೆಪಿಯಲ್ಲಿ ಲಾಗಾಯ್ತನಿಂದಲೂ ನಡೆದುಕೊಂಡು ಬಂದಿದೆ. ಈ ಸಲವೂ ಪಕ್ಷ ನನಗೆ ಟಿಕೆಟ್ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

ಹಲವು ಮಂದಿ ಟಿಕೆಟ್ ಬಯಸುತ್ತಿರುವುದರಲ್ಲಿ ತಪ್ಪೇನಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕು ಇದೆ. ಆದರೆ ಪಕ್ಷ ಈ ಬಗ್ಗೆ ನಿರ್ಧಾರ ಮಾಡಲಿದೆ ಎಂದರು.

ಮುಂದಿನ ಸಲವೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರ ಕ್ಕೆ ಬರಲಿದೆ. ಕೇಂದ್ರದಲ್ಲಿ ಬಿಜೆಪಿಯೇ ಬರಲಿದೆ. ಪಕ್ಷ ಅಧಿಕಾರಕ್ಕೆ ಬರಬೇಕೆಂದು ಕೆಲಸ ಮಾಡುತ್ತಿದ್ದೇನೆ ಎಂದರು.

ಕಳೆದ ಸಲವು ನನಗೆ ಟಿಕೆಟ್ ನೀಡಲು ವಿರೋಧ ಇತ್ತು. ಈ ವಿರೋಧದ ನಡುವೆಯೇ ನಾನು ಗೆದ್ದು ಬರಲಿಲ್ಲವೇ ಎಂದು ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?