Sunday, September 8, 2024
Google search engine
HomeUncategorizedಶಾಸಕ ಎಂ.ಟಿ.ಕೃಷ್ಣಪ್ಪನವರ ಜನತಾ ದರ್ಶನಕ್ಕೆ ರೈತರು, ಸಾರ್ವಜನಿಕರ ದಂಡು

ಶಾಸಕ ಎಂ.ಟಿ.ಕೃಷ್ಣಪ್ಪನವರ ಜನತಾ ದರ್ಶನಕ್ಕೆ ರೈತರು, ಸಾರ್ವಜನಿಕರ ದಂಡು

ತುರುವೇಕೆರೆ: ಶಾಸಕ ಎಂ.ಟಿ.ಕೃಷ್ಣಪ್ಪನವರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಜನತಾ ದರ್ಶನ ಮಾಡಿ ರೈತರು, ಸಾರ್ವಜನಿಕರ ಆಹ್ವಾಲು ಸ್ವೀಕರಿಸಿದರು.
ರೈತರು ಮತ್ತು ಸಾರ್ವಜನಿಕರು ತಮ್ಮ ಜಮೀನು ಹಾಗು ಇನ್ನಿತರ ಕೆಲಸ ಕಾರ್ಯಗಳಿಗೆ ತುರುವೇಕೆರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಮವಾರ ಬರುತ್ತಾರೆ. ಜೊತೆಗೆ ಶಾಸಕರು ತಾಲ್ಲೂಕು ಕಚೇರಿಯ ತಮ್ಮ ಕೊಠಡಿಯಲ್ಲಿ ಜನರ ಸಮಸ್ಯೆಗಳ ಆಲಿಸಲೆಂದೇ ಕುಳಿತಿದ್ದರು.
ಈ ವೇಳೆ ಕೆಲ ರೈತರು ಕಂದಾಯ ಇಲಾಖೆಗೆ ಸಂಬಂಧಿಸಿದ ಪೌತಿ ಖಾತೆ, ಪಹಣಿ ತಿದ್ದುಪಡಿ, ಪೋಡಿ, ಖಾತೆ ಬದಲಾವಣೆ, ಸಾಗುವಳಿ ಚೀಟಿ ನೀಡುವುದು, ಅಂಗವಿಕಲರ ವೇತನ, ನಿವೇಶನ, ಪಡಿತರ ಚೀಟಿ, ವೃದ್ದಾಪ್ಯವೇತನ, ವಿಧವಾ ವೇತನ, ಕಾಲು ದಾರಿ ಬಿಡಿಸುವುದು, ಅಕ್ರಮ ಸಕ್ರಮ ಜಮೀನು ಖಾತೆ ಮಾಡುವುದು, ಜಮೀನು ದುರಸ್ಥಿಗೊಳಿಸುವುದು, ಇತರೆ ಭೂ ದಾಖಲೆ ಹಾಗು ಬೇರೆ ಇಲಾಖೆಗಳಿಗೆ ಸಂಬಂಧಿಸಿದ ಹಲವು ಅರ್ಜಿಗಳನ್ನು ಸ್ವೀಕರಿಸಿ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ನೇತೃತ್ವದಲ್ಲಿ ಕೆಲವನ್ನು ಸ್ಥಳದಲ್ಲೇ ಪರಿಹರಿಸಿ ಉಳಿದವುಗಳನ್ನು ಸಂಬಂಧಪಟ್ಟಅಧಿಕಾರಿಗಳು ಪರಿಹರಿಸುವಂತೆ ಸೂಚನೆ ನೀಡಿದರಲ್ಲದೆ
ರೈತರು, ಜನರ ಸೇವೆಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಇರುವುದು ಅವರನ್ನು ಕಚೇರಿಗಳಿಗೆ ಅಲೆಸದೆ ಕೆಲಸ ಮಾಡಿಕೊಡಿ. ಸರ್ಕಾರ ನೀಡುವ ಸೌಲಭ್ಯಗಳನ್ನು ಪ್ರಾಮಾಣಿಕವಾಗ ಅರ್ಹ ಫಲಾನುಭವಿಗಳಿಗೆ ನೀಡಿ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳಿಗೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?