ಜಸ್ಟ್ ನ್ಯೂಸ್ತುಮಕೂರ್ ಲೈವ್

ಕೆಬಿಗೆ ರಾಜ್ಯಮಟ್ಟದ ನುಡಿನಮನ

ತುಮಕೂರು:ಸಾಹಿತಿ ಕೆ.ಬಿ.ಸಿದ್ದಯ್ಯ ನಿಧನದ ಹಿನ್ನೆಲೆಯಲ್ಲಿ ಮುಂದಿನ ಕಾರ್ಯಯೋಜನೆಗಳನ್ನು ಕೈಗೊಳ್ಳುವ ಸಂಬಂಧ ತುಮಕೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಾತ್ಯತೀತ ಯುವ ವೇದಿಕೆಯಿಂದ ಆಯೋಜಿಸಿದ್ದ ಸಭೆಯಲ್ಲಿ ತುಮಕೂರಿನಲ್ಲಿ ರಾಜ್ಯಮಟ್ಟದ ನುಡಿನಮನ ಕಾರ್ಯಕ್ರಮ ನಡೆಸುವುದು ಮತ್ತು ಕೆ.ಬಿ.ಸಿದಯ್ಯ ಪ್ರತಿಷ್ಠಾನ ಸ್ಥಾಪಿಸುವ ಕುರಿತು ಚರ್ಚಿಸಲಾಯಿತು.
ಒಂದು ತಿಂಗಳೊಳಗೆ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಯಿತು. ನುಡಿನಮನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವನೂರು ಮಹಾದೇವ, ಎಚ್.ಗೋವಿಂದಯ್ಯ, ಮಲ್ಲಿಕಾ ಘಂಟಿ, ಸಾಹಿತಿ ಸಿದ್ದಲಿಂಗಯ್ಯ ಮತ್ತು ರವಿವರ್ಮ ಕುಮಾರ್ ಸೇರಿದಂತೆ ಹಲವರನ್ನು ಕರೆಸುವ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಹಿರಿಯರಾದ ಕೆ.ದೊರೈರಾಜ್, ಕುಂದೂರು ತಿಮ್ಮಯ್ಯ, ಡಾ.ಬಸವರಾಜ್, ಜಿ.ಟಿ.ವೆಂಕಟೇಶ್, ವಿರೂಪಾಕ್ಷ ಡ್ಯಾಗೇರಹಳ್ಳಿ, ಕೊಟ್ಟಶಂಕರ್, ವಕೀಲ ಮಾರುತಿ ಪ್ರಸಾದ್ ಮೊದಲಾದವರು ಭಾಗವಹಿಸಿ ಅಭಿಪ್ರಾಯಗಳನ್ನು ಹಂಚಿಕೊಂಡರು.

Comment here