Sunday, September 8, 2024
Google search engine
Homeಜಸ್ಟ್ ನ್ಯೂಸ್ಕೆಂಪೇಗೌಡರ ಜಯಂತಿ: ವಕೀಲ ಧನಫಾಲ್

ಕೆಂಪೇಗೌಡರ ಜಯಂತಿ: ವಕೀಲ ಧನಫಾಲ್

ತುರುವೇಕೆರೆ: ತಾಲ್ಲೂಕು ಒಕ್ಕಲಿಗರ ಸಂಘ ಹಾಗು ತಾಲ್ಲೂಕು ಆಡಳಿತದ ವತಿಯಿಂದ ಜೂನ್ 27 ರಂದು ಪಟ್ಟಣದ ವೈ.ಟಿ ರಸ್ತೆಯಲ್ಲಿರುವ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವನ್ನು ಆಚರಿಸಲಾಗುತ್ತಿದೆ ಎಂದು ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಎಚ್.ಧನಫಾಲ್ ತಿಳಿಸಿದರು.

ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಬಿಜಿಎಸ್ ಸಮುಧಾಯ ಭವನದ ಕಚೇರಿಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು

ಒಕ್ಕಲಿಗ ನೌಕರರ ಸಂಘ, ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ, ಹಾಗೂ ಕೆಂಪೇಗೌಡ ಯುವಸೇನೆ ಇವುಗಳ ಸಹಯೋಗದೊಂದಿಗೆ ಗುರುವಾರ ಬೆಳಿಗ್ಗೆ 10-30ಕ್ಕೆ ಪಟ್ಟಣದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಶಾಸಕರಾದ ಎಂ.ಟಿ.ಕೃಷ್ಣಪ್ಪನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎಚ್.ಧನಪಾಲ್ ಅವರು ವಹಿಸಲಿದ್ದಾರೆ. ಅದೇ ರೀತಿ ಮಾಜಿ ಶಾಸಕರುಗಳಾದ ಮಸಾಲ ಜಯರಾಮ್, ಎಚ್.ಬಿ.ನಂಜೇಗೌಡ, ರುದ್ರಪ್ಪ ಸೇರಿದಂತೆ ಅನೇಕ ಗಣ್ಯರು ಹಾಗು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಪಟ್ಟಣದಲ್ಲಿ ನೂರಾರು ಯುವಕರು, ಸಮುದಾಯದವರು ಬೈಕ್ ರ್ಯಾಲಿ ಹೊರಡಲಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಿಂದ ಕೆಂಪೇಗೌಡರ ಪ್ರತಿಮೆಯನ್ನು ಎತ್ತಿನ ಗಾಡಿಯಲ್ಲಿ ಕೂರಿಸಿ ಮೆರವಣಿಗೆ ಮಾಡುತ್ತಾ ಸಾಗುವುದು. ಹಾಗು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಜರುಗಲಿದೆ. ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಮೈಸೂರಿನ ಡಾ.ಮಂಜುನಾಥ್ ರವರು ಕೆಂಪೇಗೌಡರ ಸಾಧನೆ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.

ಒಕ್ಕಲಿಗರ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಎನ್.ಚಂದ್ರೇಗೌಡ ಮಾತನಾಡಿ, ನಾಡಪ್ರಭು ಕೇಂಪೇಗೌಡ ಮತ್ತು ಕಲ್ಯಾಣದ ಬಸವಣ್ಣನಂತಹ ಶ್ರೇಷ್ಠ ನಾಯಕರು ಎಲ್ಲ ಸಮುದಾಯಗಳನ್ನು ಸಾಂಸ್ಕೃತಿಕವಾಗಿ ಬೆಸೆಯುವ ಕೆಲಸ ಮಾಡಿದ ಜಾತ್ಯಾತೀತ ನಾಯಕರು.

ಆ ನಿಟ್ಟಿನಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಬಸವೇಶ್ವರ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಹುಲ್ಲೇಕೆರೆ ಎಚ್.ಎನ್.ಮಹದೇವಯ್ಯ, ಲೇಖಕ ಮತ್ತು ಸಂಶೋಧಕರು ಪ್ರೊ.ಪುಟ್ಟರಂಗಪ್ಪ, ನಿವೃತ್ತ ಸೈನಿಕ ತಿಪ್ಪಯ್ಯ, ತಬಲ ವಿದ್ವಾಂಸ ಚಂದ್ರುಶೇಖರ್, ಪರಿಸರ ಪ್ರೇಮಿ ರಾಮಣ್ಣ, ವೈದ್ಯಕ್ಷೀಯ ಕ್ಷೇತ್ರದ ಡಾ.ನಾಗರಾಜು ಅವರುಗಳನ್ನು ಸನ್ಮಾನಿಸಿ, ಅಭಿನಂದಿಸಲಾಗುವುದು. ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲಾ ಗಣ್ಯರು, ವಿದ್ವಾಂಸರು, ಕಲಾವಿದರು, ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಎಸ್.ಎಂ.ಶಂಕರಯ್ಯ, ಲೆಕ್ಕಪರಿಶೋಧಕ ಡಿ.ಪಿ.ರಾಜು, ನಿರ್ದೇಶಕರಾದ ಬಾಣಸಂದ್ರ ರಾಜಣ್ಣ, ಲೇಖಕ ಪ್ರೊ. ಪುಟ್ಟರಂಗಪ್ಪ ಇನ್ನಿತರರು ಉಪಸ್ಥಿತರಿದ್ದರು.

ಪೋಟೋ ಶೀರ್ಷಿಕೆ

ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಬಿಜಿಎಸ್ ಸಮುಧಾಯ ಭವನದ ಕಚೇರಿಯಲ್ಲಿ ಕೆಂಪೇಗೌಡರ 515ನೇ ಜಯಂತ್ಯುತ್ಸ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಎಚ್.ಧನಫಾಲ್ ಮಾತನಾಡಿದರು. ಒಕ್ಕಲಿಗರ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಎನ್.ಚಂದ್ರೇಗೌಡ ಇನ್ನಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?