Wednesday, March 27, 2024
Google search engine
Homeಪೊಲಿಟಿಕಲ್ಸುರೇಶಗೌಡರಿಗೆ ಬೆಂಬಲ ಘೋಷಿಸಿದ ಲಿಂಗಾಯತ-ವೀರಶೈವರು

ಸುರೇಶಗೌಡರಿಗೆ ಬೆಂಬಲ ಘೋಷಿಸಿದ ಲಿಂಗಾಯತ-ವೀರಶೈವರು

ತುಮಕೂರು; ಸಂಸದರಾದ ಜಿ.ಎಸ್. ಬಸವರಾಜ್ ನೇತೃತ್ವದಲ್ಲಿ ನಾಗವಲ್ಲಿ ಸಮೀಪದ ಶಕ್ತಿಸೌಧದಲ್ಲಿ ಶನಿವಾರ ಸೇರಿದ್ದ ಲಿಂಗಾಯತ, ವೀರಶೈವ ಮುಖಂಡರ ಸಭೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಬಿ.ಸುರೇಶಗೌಡರನ್ನು ಬೆಂಬಲಿಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾತನಾಡಿದ ಸಂಸದ ಜಿ.ಎಸ್.ಬಸವರಾಜ್ ಗ್ರಾಮಾಂತರ ಕ್ಷೇತ್ರದಲ್ಲಿ ವೀರಶೈವ-ಲಿಂಗಾಯಿತ ಸಮುದಾಯದ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ವಿ.ಸುರೇಶಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
,ಕಳೆದ ಚುನಾವಣೆಯಲ್ಲಿ ಕೆಲವರು ಮಾಡಿದ ಅಪಪ್ರಚಾರದಿಂದಾಗಿ ವೀರಶೈವ ಸಮಾಜ ಸುರೇಶಗೌಡ ಅವರನ್ನು ಕೈಬಿಟ್ಟ ಪರಿಣಾಮ ಸಾವಿರ ಮತಗಳ ಅಂತರ ದಿಂದ ಸೋಲು ಅನುಭವಿಸಬೇಕಾಯಿತು. ಈ ಬಾರಿ ಹಾಗಾದಂತೆ ಎಚ್ಚರಿಕೆ ವಹಿಸಬೇಕೆಂದರು.


ಶಾಸಕ ಬಿ.ಸುರೇಶಗೌಡ ಅವರು ತಮ್ಮ ೧೦ ವರ್ಷಗಳ ಅವಧಿಯಲ್ಲಿ ಹಲವಾರು ಯೋಜನೆಗಳನ್ನು ತಂದು ಕೆಲಸ ಮಾಡಿದ್ದಾರೆ. ಜಾತ್ಯಾತೀತವಾಗಿ ಕೆಲಸ ಮಾಡಿ,ಪೈಲೆಟ್ ಪ್ರಾಜೆಕ್ಟ್ ಮೂಲಕ ಪ್ರತಿ ರೈತರ ಪಂಪ್‌ಸೆಟ್‌ಗೆ ಪ್ರತ್ಯೇಕ ಟಿ.ಸಿ., ಮನೆ ಮನೆಗೆ ಕುಡಿಯುವ ನೀರು,ರಸ್ತೆ,ಚರಂಡಿ ಕಾಮಗಾರಿ ಕೈಗೊಂಡು ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ದಿ ಪಡಿಸಿದ್ದಾರೆ. ಹಾಗಾಗಿ ಅವರನ್ನು ವೀರಶೈವ-ಲಿಂಗಾಯಿತ ಸಮಾಜ ಈ ಬಾರಿ ಕೈ ಹಿಡಿದರೆ,ಶಾಸಕರಾಗಿ,ಮಂತ್ರಿಯೂ ಆಗುವ ಅವಕಾಶ ವಿದೆ ಎಂದು ಜಿ.ಎಸ್.ಬಸವರಾಜು ನುಡಿದರು.


ರವಿಶಂಕರ್ ಹೆಬ್ಬಾಕ ಮಾತನಾಡಿ,ಬಿಜೆಪಿ ಪಕ್ಷ ರಾಜ್ಯದಲ್ಲಿ,ರಾಷ್ಟ್ರದಲ್ಲಿ ಲಿಂಗಾ ಯಿತ,ವೀರಶೈವ ಸಮುದಾಯಕ್ಕೆ ಅತ್ಯಂತ ಜವಾಬ್ದಾರಿಯುತ ಸ್ಥಾನಗಳನ್ನು ನೀಡಿ,ರಾಜಕೀಯವಾಗಿ ಬೆಳೆಯಲು ಸಹಕಾರಿಯಾಗಿದೆ.ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್,ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಯಾದರೆ,ಹಲವರಿಗೆ ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನ ನೀಡಿದ್ದಲ್ಲದೆ, ಪಕ್ಷದಲ್ಲಿಯೂ ಪ್ರಮುಖ ಸ್ಥಾನ ನೀಡಿದೆ.ರಾಜ್ಯದಲ್ಲಿ ಬಿಜೆಪಿ ಎಂದರೆ ವೀರಶೈವ-ಲಿಂಗಾಯಿತರು ಎಂಬಂತಾಗಿದೆ. ಜಿಲ್ಲೆಯಲ್ಲಿ ಸಮಾಜ ಬಿಜೆಪಿ ಬೆನ್ನಿಗೆ ನಿಂತಿದೆ ಎಂದರು.

ನನಗೆ ಮಂತ್ರಿಯಾಗುವ ಆಸೆಯಿಲ್ಲ.ಈ ಕ್ಷೇತ್ರದ ಸಮಗ್ರ ಅಭಿವೃದ್ದಿಯೊಂದೆ ನನ್ನ ಮುಂದಿರುವ ಗುರಿ ಎಂದು ಸುರೇಶಗೌಡ ತಿಳಿಸಿದರು.

ಸುರೇಶಗೌಡರು ಗ್ರಾಮಾಂತರದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮಪಂಚಾಯಿತಿಗಳಲ್ಲಿ ನಮ್ಮ ಸಮುದಾಯದ ವ್ಯಕ್ತಿಗಳಿಗೆ ರಾಜಕೀಯ ಪ್ರಾತಿನಿಧ್ಯ ಒದಗಿಸಿದ್ದಾರೆ.ಹಾಗಾಗಿ ನಾವೆಲ್ಲರೂ ಗ್ರಾಮಾಂತರದಲ್ಲಿ ಸುರೇಶಗೌಡ ರನ್ನು ಬೆಂಬಲಿಸಬೇಕಿದೆ ಎಂದು ರವಿ ಹೆಬ್ಬಾಕ ಮನವಿ ಮಾಡಿದರು.

ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ಮಾತನಾಡಿ,ವಿದ್ಯಾರ್ಥಿ ದಿಸೆಯಿಂದಲೂ ನನಗೆ ರಾಜಕೀಯ ಶಕ್ತಿ ನೀಡಿದವರು ಬಿ.ಎಸ್.ಯಡಿಯೂರಪ್ಪ ನವರು. ಅವರಿಗೆ ನನ್ನ ತಂದೆಗಿಂತಲೂ ಹೆಚ್ಚಿನ ಸ್ಥಾನವನ್ನು ನೀಡಿದ್ದೇನೆ.ನಾನು ಶಾಸಕನಾಗಿದ್ದ ಕಾಲದಲ್ಲಿ ಸುಮಾರು ೧೫ ಬಾರಿ ಕ್ಷೇತ್ರಕ್ಕೆ ಬಂದ ಯಡಿಯೂರಪ್ಪ,ನನ್ನ ಪ್ರತಿ ಕಾರ್ಯಕ್ರಮಗಳಿಗೆ ಬೆಂಬಲವಾಗಿ ನಿಂತಿದ್ದಾರೆ.ಇದರ ಭಾಗವಾಗಿಯೇ ಹಲವಾರು ವರ್ಷಗಳಿಂದ ಆಗದ ಹೆಬ್ಬೂರು,ಗೂಳೂರು ಏತ ನೀರಾವರಿ ಯೋಜನೆ ಒಂದು ವರ್ಷದಲ್ಲಿಯೇ ಆಗಲು ಸಾಧ್ಯವಾಯಿತು.ನನ್ನ ಮೇಲೆ ನಂಬಿಕೆ ಇಟ್ಟು ನೀಡಿದ ಪೈಲೆಟ್ ಪ್ರಾಜೆಕ್ಟನ್ನು ಸಮರ್ಥವಾಗಿ ನಿಭಾಯಿಸಿ ಸುಮಾರು ೨೫ ಸಾವಿರ ಟಿ.ಸಿ.ಗಳನ್ನು ರೈತರಿಗೆ ನೀಡಿದ್ದೇನೆ.ಜಲಜೀವನ್ ಮೀಷನ್ ಆರಂಭವಾಗುವ ಹತ್ತು ವರ್ಷ ಮೊದಲೇ ಮನೆ ಮನೆಗೆ ನೀರು ನೀಡಿದ್ದೇನೆ.ಕೆಲವರ ಅಪಪ್ರಚಾರದಿಂದ ಕಳೆದ ಚುನಾವಣೆಯಲ್ಲಿ ವೀರಶೈವ ಸಮಾಜದ ಕೆಲವರು ನನ್ನಿಂದ ದೂರ ಸರಿದ ಪರಿಣಾಮ ಸೋಲು ಕಾಣಬೇಕಾಯಿತು ಎಂದರು.


ದೇಶದ ಹಿತದೃಷ್ಟಿಯಿಂದ ನರೇಂದ್ರಮೋದಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಬಿಜೆಪಿಗೆ ಲೀಡ್ ಬರುವಂತೆ ನೋಡಿಕೊಂಡಿದ್ದೇನೆ.ಅಭಿವೃದ್ದಿಯೇ ಈ ಚುನಾವಣೆಯ ಪ್ರಮುಖ ವಿಚಾರವಾಗಿದೆ.ದೇಶ ಮತ್ತು ರಾಜ್ಯದ ಅಭಿವೃದ್ದಿಗೆ ವೀರಶೈವ-ಲಿಂಗಾಯಿತರ ಕೊಡುಗೆ ಮಹತ್ವ ದಾಗಿದೆ. ನಿಜಲಿಂಗಪ್ಪ,ವೀರೇಂದ್ರಪಾಟೀಲ್, ಬಿ.ಎಸ್.ವೈ,ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಗಳಾದರೆ, ಹಲವರು ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡಿ, ರಾಜ್ಯವನ್ನು ಅಭಿವೃದ್ದಿ ಪಡಿಸಿದ್ದಾರೆ.ಗ್ರಾಮಾಂತರ ಕ್ಷೇತ್ರ ಅಭಿವೃದ್ದಿಯಾಗಬೇಕೆಂದರೆ ಬಿಜೆಪಿ ಗೆಲ್ಲಬೇಕಿದೆ.ಹಾಗಾಗಿ ಮೇ.೧೦ರ ಚುನಾವಣೆಯ ಮತದಾನದ ವೇಳೆ ಬಿಜೆಪಿ ಅಭ್ಯರ್ಥಿಯಾಗಿರುವ ನನಗೆ ಮತ ನೀಡಿ,ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.


ಕಾರ್ಯಕ್ರಮಕ್ಕೂ ಮುನ್ನ ಜಗಜ್ಯೋತಿ ಬಸವೇಶ್ವರರ, ಸಿದ್ದಗಂಗಾ ಶ್ರೀಗಳ ಭಾವಚಿತ್ರಕ್ಕೆ ಪುಷನಮನ ಸಲ್ಲಿಸಲಾಯಿತು. ವೇದಿಕೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಶಂಕರಣ್ಣ,ರೈತಮೋರ್ಚಾದ ಶಿವಪ್ರಸಾದ್,ರೇಣುಕಾಪ್ರಸಾದ್, ಹೊನ್ನೇಶಕುಮಾರ್,ಗೂಳೂರು ಶಿವಕುಮಾರ್, ಲೋಕೇಶಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?