Saturday, July 27, 2024
Google search engine
Homeಜಸ್ಟ್ ನ್ಯೂಸ್ಮಧ್ಯಸ್ಥಿಕೆಯಲ್ಲೇ ನ್ಯಾಯ ಸುಲಭ: ಜಿಲ್ಲಾ ಪ್ರಧಾನ ನ್ಯಾಯಾದೀಶ ಜಯಂತಕುಮಾರ್

ಮಧ್ಯಸ್ಥಿಕೆಯಲ್ಲೇ ನ್ಯಾಯ ಸುಲಭ: ಜಿಲ್ಲಾ ಪ್ರಧಾನ ನ್ಯಾಯಾದೀಶ ಜಯಂತಕುಮಾರ್

Publicstory

ತುಮಕೂರು: ಲೋಕಾ ಅದಾಲತ್ ನಡೆಸುವ ಮದ್ಯಸ್ಥಿಕೆಯಿಂದ ಸುಲಭ ನ್ಯಾಯದಾನ ಪಡೆಯಲು ಸಾಧ್ಯ ಎಂದು ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ. ಜಯಂತ ಕುಮಾರ್ ಹೇಳಿದರು.

ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಹಾಗೂ ಪ್ರಥಮ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಲವು ಕ್ಲಿಷ್ಟಕರ, ನಾಜೂಕಿನ ಪ್ರಕರಣಗಳನ್ನು ಸಾಮಾನ್ಯ ನ್ಯಾಯದಾನದಲ್ಲಿ ಬಗೆಹರಿಸಲು ಕಷ್ಟಸಾಧ್ಯ. ಇಂತಹ ಪ್ರಕರಣಗಳು ಅತಿ ಸುಲಭವಾಗಿ ಮಧ್ಯಸ್ಥಿಕೆ ಮೂಲಕ ಹೇಗೆ ಬಗೆಹರಿಸಬಹುದಾಗಿದೆ ಎಂಬುದನ್ನು ಕತೆಯ ಮೂಲಕ ಮನವರಿಕೆ ಮಾಡಿಕೊಟ್ಟರು.

ಕಥೆಗಳ ಮೂಲಕವೇ ವಿದ್ಯಾರ್ಥಿಗಳಿಗೆ ಕಾನೂನು ಪರಿಚಯ ಮಾಡಿಕೊಟ್ಟ ನ್ಯಾಯಾಧೀಶರ ವಾಕ್ ಲಹರಿಗೆ ವಿದ್ಯಾರ್ಥಿಗಳು ತಲೆದೂಗಿದರು‌.

ಜನರು ತಮ್ಮ ತಮ್ಮ ಪಾತ್ರಗಳಿಗೆ ಅಂಟಿಕೊಳ್ಳಬಾರದು. ಬದುಕಿನ ಸನ್ನಿವೇಷ, ಪರಿಸ್ಥಿತಿಗೆ ಅನುಗುಣವಾಗಿ ನಡೆದುಕೊಳ್ಳುವುದನ್ನು ಕಲಿತರೆ ಬದುಕು ಸುಖಮಯವಾಗಿರಲಿದೆ ಎಂದರು.


ಹೆಣ್ಣು ಒಬ್ಬ ತಾಯಿಯಾಗಿ, ತಂಗಿ, ಹೆಂಡತಿಯಾಗಿ ಹೀಗೆ ಅನೇಕ ಪಾತ್ರಗಳನ್ನು ನಿಭಾಯಿಸುತ್ತಾಳೆ. ಈ ಯಾವ ಪಾತ್ರಗಳಿಗೂ ಅಂಟಿಕೊಳ್ಳುವುದಿಲ್ಲ. ಆದರೆ ಅತ್ತೆಯ ಪಾತ್ರಕ್ಕೆ ಒಂದಾಗ ಅಂಟಿಕೊಳ್ಳುತ್ತಾರೆ. ಇದುವೇ ಅತ್ತೆ, ಸೊಸೆಯ ಗಲಾಟೆಗೆ ಕಾರಣವಾಗುತ್ತದೆ ಎಂದರು.

ಪ್ರಾಮಾಣಿಕತೆ, ಬದ್ಧತೆ, ತಾಳ್ಮೆ, ಸಹನೆ ಇದ್ದಲ್ಲಿ ಸಾಧನೆಯೂ ಸಾಧ್ಯ, ಸುಖಮಯ ಜೀವನವೂ ಸಾಧ್ಯ ಎಂದರು.

ನೀವು ಮರಗಳಾಗಿ ಬೆಳೆಯಿರಿ. ಬೇರೆಯವರಿಗೂ ಆಶ್ರಯದಾತರಾಗಿ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ನೂರುನ್ನೀಸಾ ಅವರು ಮಾತನಾಡಿ,

ಸುಫಿಯಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಕಂಡರೆ ನನಗೆ ಮೆಚ್ಚು. ಕಾನೂನು ಸೇವಾ ಪ್ರಾಧಿಕಾರದ ಕೆಲಸಗಳಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ಮಾಡಿರುವ ಕೆಲಸ ಅಚ್ಚುಮೆಚ್ಚಿನದಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.

ಯುವ ಜನತೆ ದಾರಿ ತಪ್ಪಿ ನಡೆಯುತ್ತಿದೆ. ಇದು ಸಮಾಜದ ಅಲ್ಲೋಲ, ಕಲ್ಲೋಲಕ್ಕೆ ಕಾರಣವಾಗುತ್ತಿದೆ. ಕಾನೂನು ಸೇವಾ ಪ್ರಾಧಿಕಾರಕ್ಕೆ ಮಕ್ಕಳ ಸಮಸ್ಯೆಗಳನ್ನು ಹೊತ್ತು ತರುವ ಪೋಷಕರ ಸಂಖ್ಯೆ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಾಂಶುಪಾಲರಾದ ಡಾ. ರಮೇಶ್ ಮಾತನಾಡಿ, ಕಾನೂನು ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ನ್ಯಾಯಬದ್ಧತೆ, ಸಾಮಾಜಿಕ ನ್ಯಾಯ, ಪಾರದರ್ಶಕತೆ, ಸಂವಿಧಾನದ ಆಶಯಗಳನ್ನು ಜಾರಿಗೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ಎಚ್ ಎಂ ಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ, ಉಪ ಪ್ರಾಂಶುಪಾಲ ಓಬಯ್ಯ, ಪ್ರಾಧ್ಯಾಪಕರಾದ ಸಿ.ಕೆ.ಮಹೇಂದ್ರ, ಮಮತಾ, ತಬಸಮ್, ಕಾಶಿಪ್, ಶ್ರೀನಿವಾಸ್, ಗ್ರಂಥಪಾಲಕ ಸುಬ್ಬು, ಸೂಪರಿಡಿಂಡ್ ಟೆಂಟ್ ಜಗದೀಶ್ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?