Saturday, July 20, 2024
Google search engine
Homeತುಮಕೂರು ಲೈವ್ತುರುವೇಕೆರೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ: ಮಾಜಿ ಶಾಸಕರಿಗೆ ಸವಾಲು ಹಾಕಿದ ಶಾಸಕ ಮಸಾಲ ಜಯರಾಂ

ತುರುವೇಕೆರೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ: ಮಾಜಿ ಶಾಸಕರಿಗೆ ಸವಾಲು ಹಾಕಿದ ಶಾಸಕ ಮಸಾಲ ಜಯರಾಂ

Publicstory. in


ತುರುವೇಕೆರೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಬಿಜೆಪಿ ತಾಲ್ಲೂಕಿನಲ್ಲಿ ಇತಿಹಾಸ ಸೃಷ್ಠಿಸಿದ್ದು ಇದರೊಂದಿಗೆ 30ಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ನಮ್ಮ ಅಭ್ಯರ್ಥಿಗಳು ಅಧಿಕಾರ ಹಿಡಿಯಲಿದ್ದಾರೆಂದು ಶಾಸಕ ಮಸಾಲಜಯರಾಂ ತಿಳಿಸಿದರು.

ತಾಲ್ಲೂಕಿನ ಚಿಕ್ಕೋನಹಳ್ಳಿ ಬಳಿಯಿರುವ ಶಾಸಕರ ಫಾರಂ ಹೌಸ್ನಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿಯ ನೂತನ ಸದಸ್ಯರುಗಳಿಗೆ ಅಭಿನಂದನೆ ಹಾಗು ಶಾಲು ಹಾಕುವ ಮೂಲಕ ಸ್ವಾಗತಿಸಿ ಸನ್ಮಾನಿಸಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ಕಾರ್ಯಗತ ಮಾಡಬೇಕಿದೆ. ತಮ್ಮ ಗ್ರಾಮಗಳಿಗೆ ನೀವೇ ಶಾಸಕರು ನಿಮ್ಮ ಗ್ರಾಮಗಳ ಅಭಿವೃದ್ದಿಗೆ ಶ್ರಮಿಸಬೇಕಿದೆ. ನಾನು ಸಹ ಹೆಚ್ಚಿನ ಸಹಕಾರ ನಿಮಗೆ ನೀಡಲಿದ್ದು ಹಳ್ಳಿಯಿಂದ ದಿಲ್ಲಿವರೆಗೂ ಬಿಜೆಪಿ ಅಧಿಕಾರದಲ್ಲಿದ್ದು ನಮ್ಮ ಅಧಿಕಾರವನ್ನು ಚಲಾಯಿಸಿ ತಮ್ಮ ಕೆಲಸಗಳನ್ನು ತಾವೇ ಮಾಡಬೇಕು. ನನ್ನ ಅವಧಿಯಲ್ಲಿ ಎಲ್ಲಾ ಸದಸ್ಯರಿಗೂ ಸಮನಾದ ಅಧಿಕಾರ ನೀಡಲಿದ್ದೇನೆ. ಎಲ್ಲರೂ ಗ್ರಾಮದ ಅಭಿವೃದ್ದಿಗೆ ಶ್ರಮಿಸಿ ಎಂದು ಸಲಹೆ ನೀಡಿದರು.

ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಆಮೂಲಾಗ್ರ ಅಭಿವೃದ್ದಿಗಾಗಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೆಚ್ಚಿನ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತೇವೆ. ಮಾಜಿ ಶಾಸಕರು ಗ್ರಾಮ ಪಂಚಾಯಿತಿಯಲ್ಲಿ ನಾವೇ ಹೆಚ್ಚು ಸ್ಥಾನ ಗೆಲವು ಪಡೆದಿರುವುದಾಗಿ ಸುಳ್ಳು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ‌ ಎಂದು ಗೇಲಿ ಮಾಡಿದರು.

ನಮ್ಮ ಬೆಂಬಲಿತ ಸದಸ್ಯರುಗಳನ್ನು ಪೆರೇಡ್ ಮಾಡಲಾಗುವುದು. ಅದರಂತೆ ನೀವು ಸಹ ಪೆರೇಡ್ ಮಾಡಿ ತೋರಿಸಿ. ಒಂದು ಸ್ಥಾನ ನಿಮ್ಮ ಪಕ್ಷದಲ್ಲಿ ಹೆಚ್ಚು ಬಂದಿದ್ದೇ ಆದಲ್ಲಿ ನಾನು ರಾಜಕೀಯ ನಿವೃತ್ತಿಯಾಗಲಿದ್ದೇನೆ ಎಂದು ಮಾಜಿ ಶಾಸಕರಿಗೆ ಸವಾಲು ಹಾಕಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ನೂತನ ಸದಸ್ಯರುಗಳಿಗೆ ಕೇಸರಿ ಶಾಲು ಹಾರ ಹಾಕಿ ಸನ್ಮಾನಿಸಿ ಅಭಿನಂದಿಸಿ ಸಿಹಿ ನೀಡಿ ಶುಭಕೋರಿದರು.
ತಾಲ್ಲೂಕಿನ ಲೋಕಮ್ಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ನೀರಗುಂದ ಸಾಮಾನ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ದಲಿತ ಸಮುದಾಯಕ್ಕೆ ಸೇರಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಆರ್.ಅಲ್ಲಪ್ಪ ಹಾಗೂ ಜೆ.ನಳಿನ ಇವರುಗಳು ಶಾಸಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಮುಖಂಡರಾದ ಸಿ.ಎಸ್.ಪುರ ನಾಗರಾಜು, ತಿಮ್ಮರಾಯಪ್ಪ, ಮಲ್ಲೇಶ್, ವಿ.ಟಿ.ವೆಂಕಟರಾಮು, ಕಾಳಂಜೀಹಳ್ಳಿ ಸೋಮಶೇಖರ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?