Friday, April 19, 2024
Google search engine
Homeಕ್ರೈಂಬಾರ್ ಸಿಬ್ಬಂದಿಯಿಂದ ಕೊಲೆ

ಬಾರ್ ಸಿಬ್ಬಂದಿಯಿಂದ ಕೊಲೆ

ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ಇರುವ ಎಸ್ ಎಸ್ ಬಾರ್ ಸಿಬ್ಬಂದಿ ಗ್ರಾಹಕನ್ನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆ ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಐವರು ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಿಗ್ಗೆ ಖಾಸಗಿ ಬಸ್ ನಿಲ್ದಾಣದಲ್ಲಿ ಮುಬಾರಕ್ ಎಂಬಾತನನ್ನು ಕೊಲೆ ಮಾಡಿ ಶವ ಎಸೆಯಲಾಗಿತ್ತು.

ಘಟನೆ ಬೆನ್ನು ಹತ್ತಿದ ಪೊಲೀಸರಿಗೆ ಬಾರ್ ಸಿಬ್ಬಂದಿ ಕೊಲೆ ಮಾಡಿರುವುದು ಗೊತ್ತಾಗಿದೆ.

ರಾತ್ರಿ, ಮುಬಾರಕ್ ಅವರು ಬಾರ್ ಗೆ ಕುಡಿಯಲು ಹೋಗಿದ್ದರು. ಆಗ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದರು. ಮಾತಿಗೆ ಮಾತು ಬೆಳೆದು ಐದು ಜನರು ಸೇರಿ ಮುಬಾರಕ್ ಅವರಿಗೆ ಚೆನ್ನಾಗಿ ಥಳಿಸಿ ನಂತರ ಆಯುಧಗಳಿಂದ ತಿವಿದು ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಬಳಿಕ ಶವವನ್ನು ಬಸ್ ನಿಲ್ದಾಣದಲ್ಲಿ ಬಿಸಾಕಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?