Saturday, April 20, 2024
Google search engine
Homeಜಸ್ಟ್ ನ್ಯೂಸ್ಕೋಳಾಲ: ಪಿಡಿಒ ಅಮಾನತು; ಕಾರಣವೇನು?

ಕೋಳಾಲ: ಪಿಡಿಒ ಅಮಾನತು; ಕಾರಣವೇನು?

ಕೊರಟಗೆರೆ ತಾಲ್ಲೂಕಿನ ಕೋಳಾಲ ಗ್ರಾಮ ಪಂಚಾಯತಿ ಪಿಡಿಒ ಎಚ್.ವಿ.ಕೋಮಲ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿ.ಪಂ.ಸಿಇಒ ಗುರುವಾರ ಆದೇಶ ಹೊರಡಿಸಿದ್ದಾರೆ.

ಬಿದರೆಗುಟ್ಟೆ ಗ್ರಾಮದ ಅಂಗನವಾಡಿ ಕಟ್ಟಡದ 5 ಲಕ್ಷ ರೂಪಾಯಿಯನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಿಕೊಂಡ ಆರೋಪ ಹಾಗೂ ಹದಿನಾಲ್ಕನೇ ಹಣಕಾಸು ಯೋಜನೆಯ ಹಣ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗೆ ಕಾದಿರಿಸಿ ಅಮಾನತುಗೊಳಿಸಲಾಗಿದೆ.

ಹೋರಾಟದ ಕಥನ

ಪಿಡಿಒ ಆಡಳಿತದ ವಿರುದ್ದ ವಕೀಲ ಕೋಳಾಲ ಚಿನ್ಮಯ ಅವರು ದೂರು ನೀಡಿದ್ದರು.

ಹಣ ದುರುಪಯೋಗದ ಕುರಿತು ಅವರು ಓಬಡ್ಸ್ ಮನ್ ನ್ಯಾಯಾಲಯದಲ್ಲೂ ದೂರು ದಾಖಲಿಸಿದ್ದಾರೆ.

ಇಲ್ಲಿ ಹಗಲು ದರೋಡೆಯನ್ನೇ ನಡೆಸಲಾಗಿದೆ. ನನ್ನ ಹೋರಾಟವನ್ನು ಹತ್ತಿಕ್ಕಲು ಹಲವು ಪ್ರಯತ್ನಗಳನ್ನು ನಡೆಸಿದರು. ಆದರೂ ನಾನು ಧೃತಿಗೆಡದೆ ಹೋರಾಟ ಮುಂದುವರೆಸಿದೆ. ಗ್ರಾ.ಪಂ.ಗಳಲ್ಲಿ ನಡೆಯುತ್ತಿರುವ ಬಗ್ಗೆ ಸ್ಥಳೀಯ ಯುವಕರು ಹೋರಾಟ ಆರಂಭಿಸಬೇಕು ಎಂದು ವಕೀಲ ಕೋಳಾಲ ಚಿನ್ಮಯ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?