Saturday, July 27, 2024
Google search engine
Homeತುಮಕೂರು ಲೈವ್ಏ.30: ತುಮಕೂರಲ್ಲಿ ಪ್ರಜಾಪ್ರಭುತ್ವದ ಹಬ್ಬ

ಏ.30: ತುಮಕೂರಲ್ಲಿ ಪ್ರಜಾಪ್ರಭುತ್ವದ ಹಬ್ಬ

ತುಮಕೂರು: ಮತದಾರರಲ್ಲಿ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏಪ್ರಿಲ್ ೩೦ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲೆಯಾದ್ಯಂತ ಆಯೋಜಿಸಲಾಗುವುದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದ್ದು, ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏಪ್ರಿಲ್ 3೦ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು. ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಓ ನೇತೃತ್ವದಲ್ಲಿ, ತಾಲ್ಲೂಕು ಮಟ್ಟದಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿ ಒಂದೇ ರೀತಿಯ ’ಪ್ರಜಾಪ್ರಭುತ್ವದ ಹಬ್ಬ ’ಮೇ 10 ಮತದಾನ’ ಎಂಬ ಧ್ಯೇಯ ಒಳಗೊಂಡಿರುವ ಬಾವುಟವನ್ನು ಸಿದ್ಧಪಡಿಸಿ ಪ್ರತಿ ಮತಗಟ್ಟೆಗಳಿರುವ ಪ್ರದೇಶಾವಾರು ಧ್ವಜಾರೋಹಣವನ್ನು ನೆರವೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕಾಲ್ನಡಿಗೆ ಜಾಥಾ ಸೇರಿದಂತೆ ಚುನಾವಣಾ ವಿಷಯಗಳನ್ನೊಳಗೊಂಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಥವಾ ಸಂಬಂಧಿತ ವ್ಯಕ್ತಿಗಳು ಭಾಗವಹಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಒಂದು ಗಂಟೆಗೆ ಕಡಿಮೆ ಇಲ್ಲದಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಒಟ್ಟಾರೆ ಪ್ರತಿ ಮತಗಟ್ಟೆಯನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭಾರತ ಚುನಾವಣಾ ಆಯೋಗ ಈ ವರ್ಷ ಬಿಡುಗಡೆ ಮಾಡಿರುವ ಚುನಾವಣಾ ಗೀತೆಯನ್ನು ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ 2018 ರಲ್ಲಿ ಬಿಡುಗಡೆ ಮಾಡಿರುವ ಚುನಾವಣಾ ಗೀತೆಗಳನ್ನು ಬಳಸಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಸ್ತುವಾರಿ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ನೈತಿಕ ಚುನಾವಣೆಯ ಕುರಿತು ಮತದಾರರಿಗೆ ಬಿತ್ತಿಪತ್ರಗಳ ವಿತರಣೆ, ಎಲ್ಇಡಿ ವಾಹನಗಳ ಮೂಲಕ ಜಾಗೃತಿ, ಮತದಾನದ ಮಹತ್ವ ಕುರಿತು ಬೀದಿ ನಾಟಕ, ಜಾನಪದ ಕಲೆಗಳ ಮೂಲಕ ಮತದಾರರ ಜಾಗೃತಿ, ಸೈಕಲ್, ದ್ವಿಚಕ್ರ ವಾಹನ ಮತ್ತು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವುದು, ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ಕುರಿತು ಮಾಹಿತಿ, ಭಾರತ ಚುನಾವಣಾ ಆಯೋಗ ನೈತಿಕ ಚುನಾವಣೆ ನಡೆಸಲು ಮತದಾರರಿಗಾಗಿ ಹೊರ ತಂದಿರುವ ಸಿವಿಜಿಲ್, ಕೆವೈಸಿ, ಚುನಾವಣಾ ಸಕ್ಷಮ್ ಆಪ್ಗಳು ಸೇರಿದಂತೆ ಸಹಾಯವಾಣಿ 1950 ರ ಬಗ್ಗೆ ಪ್ರಚುರಪಡಿಸಬೇಕು. ನಿಮ್ಮ ಮತಗಟ್ಟೆ ಎಲ್ಲಿದೇ ಎಂದು ತಿಳಿದುಕೊಳ್ಳಿ ಮತ್ತು ಮೇ 10 ರಂದು ತಪ್ಪದೇ ಮತದಾನ ಮಾಡಿ ಎನ್ನುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?