Saturday, July 27, 2024
Google search engine
Homegovernanceಆದರ್ಶಗಳನ್ನು ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯ: ತಹಶಿಲ್ದಾರ್ ಮಮತಾ

ಆದರ್ಶಗಳನ್ನು ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯ: ತಹಶಿಲ್ದಾರ್ ಮಮತಾ

Publicstory/prajayoga

ಶಿರಾ: ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ, ಧ್ಯೇಯಗಳು ಅವರ ಆದರ್ಶಗಳನ್ನು ಭಾರತೀಯರೆಲ್ಲರೂ ಉಳಿಸಿ ಬೆಳೆಸಿಕೊಂಡು ಹೋಗುವ ಕರ್ತವ್ಯ ನಮ್ಮದು. ಭಾರತದ ಏಕತೆಯನ್ನು ಸಾರುವ ತ್ರಿವರ್ಣ ಧ್ವಜದಡಿಯಲ್ಲಿ ನಾವೆಲ್ಲರೂ ಭಾರತೀಯರು ನಾವೆಲ್ಲಾ ಭಾರತಾಂಬೆಯ ಮಕ್ಕಳಾಗಿ ಸಾಮರಸ್ಯದಿಂದ ಬದುಕೋಣ ಎಂದು ತಹಶೀಲ್ದಾರ್ ಮಮತ ಹೇಳಿದರು.

ಅವರು ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳು ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ  76ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಅಖಂಡ ಭಾರತದ ಪ್ರಜೆಗಳು ಸಾಮರಸ್ಯದಿಂದ ಬದುಕಲು ಭಾರತೀಯತೆಯನ್ನು ಎತ್ತಿ ಹಿಡಿಯಲು ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನದಡಿಯಲ್ಲಿ ಕಾನೂನು ನಿಯಮಗಳಿಗೆ ಗೌರವ ನೀಡಬೇಕು. ಅವುಗಳನ್ನು ಪಾಲಿಸುತ್ತ ನಮ್ಮ ಹಕ್ಕುಗಳನ್ನು ಅನುಭವಿಸುವ ಜೊತೆಗೆ ಕರ್ತವ್ಯವನ್ನು ಅರಿಯುವ ಅಗತ್ಯವಿದೆ. ನನ್ನ ದೇಶ ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ ವೈವಿದ್ಯತೆಯಿಂದ ಕೂಡಿದ್ದರೂ ತ್ರಿವರ್ಣ ಧ್ವಜದಡಿಯಲ್ಲಿ ಏಕತೆಯಿಂದ ಸಾಮರಸ್ಯವನ್ನು ಮೆರೆಯುವಂತಹ ಹಿರಿಮೆ ನಮ್ಮದು. ಅಮೃತ ಮಹೋತ್ಸವ ಸ್ವಾತಂತ್ರ್ಯ ಸಂಭ್ರಮದ ದಿನದಂದು ಈ ನಾಡಿನ ಪ್ರತಿ ಪ್ರಜೆಯು ಸಾಮರಸ್ಯದಿಂದ ಸಮಾನತೆ, ಭ್ರಾತೃತ್ವದಿಂದ, ಬದುಕುವಂತಹ ವಾತಾವರಣವನ್ನು ಪ್ರತಿಯೊಬ್ಬರಿಗೂ ಕಲ್ಪಿಸಿಕೊಡಬೇಕಿದೆ. ಸಹಬಾಳ್ವೆ, ಸಹಜೀವನವೆಂಬ ಮೇರು ಮನಸಿನ ವ್ಯಕ್ತಿತ್ವ ನಮ್ಮೆಲ್ಲರದ್ದಾಗಲಿ ಎಂದು ಆಶಿಸಿದರು.

ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ, ಸಾವಿರಾರೂ ದೇಶಪ್ರೇಮಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಹಿಳೆಯರು ವಿಧವೆಯಾಗಿದ್ದಾರೆ. ಎಲ್ಲರ ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಈ ದೇಶಕ್ಕೋಸ್ಕರ ತ್ಯಾಗ ಬಲಿದಾನ ಮಾಡಿದ ಕ್ರಾಂತಿಕಾರಿ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ಒಂದು ದಿನ ಸ್ಮರಿಸುವ ಈ ದಿನವಾಗಬಾರದು. ಅವರ ಸ್ಮರಣೆ ನಿತ್ಯೋತ್ಸವವಾಗಬೇಕು ಎಂದರು.

ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನದ ಶಕ್ತಿಯಿಂದ ಇಂದು ಸಾಮಾನ್ಯ ಪ್ರಜೆಗೂ ಸೂಕ್ತ ಸ್ಥಾನಮಾನಗಳು ದೊರೆಯುತ್ತಿವೆ. ಪ್ರತಿಯೊಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು. ಅವರ ತ್ಯಾಗ ಬಲಿದಾನದಿಂದ ಇಂದು ನಾವುಗಳು ಸ್ವತಂತ್ರರಾಗಿದ್ದೇವೆ. ಮನೆ ಮನೆಗೂ ತ್ರಿವರ್ಣ ಧ್ವಜ ಅಭಿಯಾನದಡಿ ಇಂದು ರಾಷ್ಟ್ರದ  ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಏಕ್ ಭಾರತ್ ಶ್ರೇಷ್ಠ ಭಾರತ್ ಎಂಬ ಮನೋಭಾವದಿಂದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. 

ಅದ್ಧೂರಿಯಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ: 76ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ್ದ ಸುಮಾರು 2500 ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.

ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ಉಪಾಧ್ಯಕ್ಷ ಅಂಬುಜಾಕ್ಷಿ ನಟರಾಜ್, ಕಾಡುಗೊಲ್ಲ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ, ಡಿವೈಎಸ್ಪಿ ನವೀನ್‌ಕುಮಾರ್, ಶಿರಾ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಮಾರುತೀಶ್, ನಗರಸಭಾ ಸದಸ್ಯ ಎಸ್.ಎಲ್.ರಂಗನಾಥ್, ಆರ್.ರಾಮು, ಗ್ರೇಡ್-2 ತಹಶಿಲ್ದಾರ್ ಮಂಜುನಾಥ್, ತಾ.ಪಂ. ಇ.ಓ. ಅನಂತರಾಜು, ಬಿಇಓ ಶಂಕರಯ್ಯ, ಪೌರಾಯುಕ್ತ ಶ್ರೀನಿವಾಸ್, ದೈಹಿಕ ಶಿಕ್ಷಣ ಪರಿವೀಕ್ಷಕ ಕುಮಾರ್, ಸಹಾಯಕ ಕೃಷಿ ನಿರ್ದೇಶಕ ರಂಗನಾಥ್, ಕಸಬಾ ಕಂದಾಯ ನಿರೀಕ್ಷಕ ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?