Saturday, July 27, 2024
Google search engine
Homeಕ್ರೈಂಸಾರ್ವರ್ಕರ್ ಫ್ಲೆಕ್ಸ್ ಹರಿದ ಪ್ರಕರಣ ; ಕಿಡಿಗೇಡಿಗೆ ಗುಂಡಿಡುವಂತೆ ಸೊಗಡು ಶಿವಣ್ಣ ಆಗ್ರಹ

ಸಾರ್ವರ್ಕರ್ ಫ್ಲೆಕ್ಸ್ ಹರಿದ ಪ್ರಕರಣ ; ಕಿಡಿಗೇಡಿಗೆ ಗುಂಡಿಡುವಂತೆ ಸೊಗಡು ಶಿವಣ್ಣ ಆಗ್ರಹ

Publicstory/prajayoga

ತುಮಕೂರು: ಜಿಲ್ಲೆಯಲ್ಲಿ ಸಾರ್ವರ್ಕರ್ ಫ್ಲೆಕ್ಸ್ ಹರಿದವರನ್ನು ಕಂಡಲ್ಲಿ ಗುಂಡಿಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಕೆಜೆ ಹಳ್ಳಿ ಡಿಜೆಹಳ್ಳಿ ಹಾಗೂ ಶಿವಮೊಗ್ಗದಂತಾಗುವುದು ಬೇಡ. ಸರ್ವರ್ಕರ್ ಫೋಟೋ‌ ಹರಿದವರು ಪಾಪಿಗಳು. ಅವರನ್ನು ಕೋಡಲೇ ಬಂಧಿಸಬೇಕು. ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು. ಪಾಲಿಕೆಯವರು ಫ್ಲೆಕ್ಸ್ ತೆಗೆದುಹಾಕಿರುವುದು ತಪ್ಪು, ಆಯುಕ್ತರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಕ್ರೋಶ ಹೊರ ಹಾಕಿದರು.

ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ  ನಗರದ ಅಲ್ಲಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ ಗಳನ್ನು‌  ಹಾಕಲಾಗಿತ್ತು. ಅದರಲ್ಲಿ ಸರ್ವರ್ಕರ್ ಭಾವಚಿತ್ರವೂ ಇತ್ತು. ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜಿನ ಮುಂಭಾಗ ಸಾರ್ವರ್ಕರ್ ಫೋಟೋ ಇದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು‌ ಸೋಮವಾರ ರಾತ್ರಿ ಹರಿದು ಹಾಕಿರುವ ಸಂಗತಿ ಬೆಳಕಿಗೆ ಬಂದಿತ್ತು.

ಎಸ್ಪಿ ಪ್ರತಿಕ್ರಿಯೆ

ತುಮಕೂರು ಶಾಂತವಗಿರುವ ಟೌನ್. ಅದನ್ನು ಹಾಗೆಯೇ ಕಾಪಾಡಿಕೊಂಡು ಹೋಗೋಣ. ಸೋಮವಾರ ರಾತ್ರಿ ಈ ಘಟನೆ ನಡೆದಿರುವುದು ಬೆಳಿಗ್ಗೆ ಗಮಕ್ಕೆ ಬಂದಿದೆ. ಉಳಿದ ಎಲ್ಲಾ ಫ್ಲೆಕ್ಸ್ ಗಳನ್ನು ಕಾರ್ಪೊರೇಶನ್ ನವರು ಕ್ಲಿಯರ್ ಮಾಡಿದ್ದರೆ. ಜನರನ್ನು ಪ್ರಚೋದಿಸುವ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರವೋಕ್ ಆಗಬಾರದು. ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?