Saturday, July 27, 2024
Google search engine
Homeಕ್ರೈಂಪೊಲೀಸ್ ಗೆ ಚಾಕು ಇರಿತ ; ಆರೋಪಿ ಬಂಧನ

ಪೊಲೀಸ್ ಗೆ ಚಾಕು ಇರಿತ ; ಆರೋಪಿ ಬಂಧನ

Publicstory/prajayoga

ಬೆಂಗಳೂರು: ಮಹಿಳಾ ಕಾನ್ಸ್ಟೇಬಲ್‌ಗೆ ರೌಡಿಶೀಟರ್ ಒಬ್ಬ ಚಾಕು ಇರಿದು ಪರಾರಿಯಾಗಲು ಯತ್ನಿಸಿರುವ ಘಟನೆ ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಪ್ತಿಯ ಜ್ಯೋತಿ ನಗರದಲ್ಲಿ ನಡೆದಿದೆ.

ಚಾಕು ಇರಿತಕ್ಕೊಳಗಾದ ಮಹಿಳಾ ಹೆಡ್ ಕಾನ್ಸ್ಟೇಬಲ್ ವಿನುತಾ ಎಂದು ತಿಳಿದು ಬಂದಿದೆ.

ಆರೋಪಿ ರೌಡಿಶೀಟರ್ ಶೇಖ್ ಷರೀಫ್ನನ್ನು ಬಂಧಿಸಲು ಆಗಸ್ಟ್ 5 ರಂದು  ವಿನುತಾ ಹೋಗಿದ್ದರು. ಈ ವೇಳೆ ಚಾಕು ಇರಿದು ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ.

ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಷರೀಫ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಮತ್ತೊಂದು ಕೊಲೆಗೆ ಸಂಚು ರೂಪಿಸಿದ್ದನು ಎಂಬ ಮಾಹಿತಿ ಆಧರಿಸಿ ಆತನನ್ನು ಠಾಣೆಗೆ ಕರೆತರಲು  ವಿನುತಾ ಹಾಗೂ ತಂಡ ಹೋಗಿತ್ತು.

ರಾತ್ರಿ 9.30ಕ್ಕೆ ಆತನನ್ನು ಕರೆದುಕೊಂಡು ಹೋಗಲು ತಂಡ ಮುಂದಾಗಿತ್ತು. ಈ ಸಂದರ್ಭ ಈ ಘಟನೆ ನಡೆದಿದೆ. ಆದರೆ ಸ್ಥಳೀಯರ ಸಹಾಯದಿಂದ ಆತನನ್ನು ಬಂಧಿಸಲಾಗಿದೆ.

ಹೆಡ್ ಕಾನ್ಸ್ಟೇಬಲ್ ವಿನುತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಐಪಿಸಿ 307, 353, 354 ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?