Publicstory/prajayoga
– ವರದಿ, ಎ.ಶ್ರೀನಿವಾಸಲು
![](https://publicstory.in/wp-content/uploads/2022/08/img_20220820_0752228913012522268752367.jpg)
ಪಾವಗಡ: ಶ್ರಾವಣ ಮಾಸದ ನಾಲ್ಕನೇ ಶನಿವಾರ ಹಲವು ರಾಜ್ಯಗಳಿಂದ ಭಕ್ತರು ಆಗಮಿಸಿ ಬೆಳಗಿನ ಜಾವದಿಂದಲೇ ಸರತಿ ಸಾಲ್ಲಿನಲ್ಲಿ ನಿಂತು ಶನೇಶ್ವರ ಸ್ವಾಮಿ ದೇವರ ದರ್ಶನ ಪಡೆದರು.
ನಾಲ್ಕನೇ ಶ್ರಾವಣ ಶನಿವಾರವಾದ ಹಿನ್ನೆಲೆಯಲ್ಲಿ ಶುಕ್ರವಾರವೇ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಸಂಜೆ ವೇಳೆಗೆ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಿತು.
ಈ ಸಂದರ್ಭದಲ್ಲಿ ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸುವ ಸಲುವಾಗಿ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ಹೊಸ ಬಸ್ ನಿಲ್ದಾಣದ ತಿರುವಿನಿಂದ ಹಾಗೂ ಶಿರಾ ರಸ್ತೆಯ ನಾಗಲಕಟ್ಟೆವರೆಗೂ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಶ್ರಾವಣ ಮಾಸದ ಅಮಗವಾಗಿ ಪಟ್ಟಣದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.