Saturday, July 27, 2024
Google search engine
Homeಸಂಘ ಸಂಸ್ಥೆಕೊಂಡವಾಡಿ ಚಂದ್ರಶೇಖರ್ ಅಭಿಮಾನಿಗಳಿಂದ ಆರೋಗ್ಯ ತಪಾಸಣಾ ಶಿಬಿರ

ಕೊಂಡವಾಡಿ ಚಂದ್ರಶೇಖರ್ ಅಭಿಮಾನಿಗಳಿಂದ ಆರೋಗ್ಯ ತಪಾಸಣಾ ಶಿಬಿರ

Publicstory/prajayoga

ಮಧುಗಿರಿ: ಗ್ರಾಮೀಣ ಭಾಗದ ಜನರ ಆರೋಗ್ಯ ತಪಾಸಣೆಗೆ ಉಚಿತ ಅರೋಗ್ಯ ತಪಾಸಣಾ ಶಿಬಿರಗಳು ಸಹಕಾರಿಯಾಗಲಿವೆಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.

Sponsored

ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ಸರ್ವೋದಯ ಪ್ರೌಢಶಾಲಾ ಆವರಣದಲ್ಲಿ ಕೊಂಡವಾಡಿ ಚಂದ್ರಶೇಖರ್ ಅಭಿಮಾನಿಗಳ ಬಳಗ, ತುಮುಲ್ ಹಾಗೂ ರೈತ ಮತ್ತು ನೌಕರರ ಕಲ್ಯಾಣ ಟ್ರಸ್ಟ್ ಆಯೋಜಿಸಿದ್ದ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು 

ಗ್ರಾಮೀಣ ಭಾಗದ ಜನರು ಆರೋಗ್ಯ ಕಾಪಾಡಿಕೊಳ್ಳಬೇಕು ಹಾಗೂ ಸಂಘ ಸಂಸ್ಥೆ ಮತ್ತು ಸರ್ಕಾರದಿಂದ ಬರುವ ಸವಲತ್ತಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಕಳೆದ ಮಾರ್ಚ್ ಅವಧಿಲ್ಲಿ ಮಧುಗಿರಿಯಲ್ಲಿ ಹಮ್ಮಿಕೊಂಡಿದ ಅರೋಗ್ಯ ಶಿಬಿರ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ನಾನು ತುಮುಲ್ ಅಧ್ಯಕ್ಷನಾಗಿದ್ದ ಸಮಯದಲ್ಲಿ ಹತ್ತಾರು ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದ್ದೆ. ಇದು ನನಗೆ ತೃಪ್ತಿ ತಂದಿದೆ. ಮುಂದಿನ ವಾರ ದೊಡ್ಡೇರಿ, ಕಸಬಾ, ಐ.ಡಿ ಹಳ್ಳಿಯಲ್ಲಿ ಈ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ  ಜಿಪಂ ಮಾಜಿ ಸದಸ್ಯ ಎಚ್.ಕೆಂಚಮಾರಯ್ಯ ಸೇರಿದಂತೆ ಮತ್ತಿತರರು ಇದ್ದರು.

ಶಿಬಿರದಲ್ಲಿ ಸುಮಾರು 2 ಸಾವಿರಕ್ಕು ಅಧಿಕ ಜನ ತಪಾಸಣೆಯಲ್ಲಿ ಭಾಗಿದ್ದರು, ಶಿಬಿರದಲ್ಲಿ ಸುಮಾರು 400 ಜನರಿಗೆ ಉಚಿತವಾಗಿ ಕನ್ನಡಕ, 100 ವಾಕರ್, 150 ವಾಕಿಂಗ್ ಸ್ಟಿಕ್ ಮತ್ತು 40 ಶ್ರವಣ ಸಾಧನವನ್ನು ವಿತರಣೆ ಮಾಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?