Saturday, July 20, 2024
Google search engine
Homeಪೊಲಿಟಿಕಲ್ತುಮಕೂರು ವಿವಿಯಲ್ಲಿ ತಿಗಳ ಸಂಶೋಧನಾ ಕೇಂದ್ರ : ಸಿಎಂ ಭರವಸೆ

ತುಮಕೂರು ವಿವಿಯಲ್ಲಿ ತಿಗಳ ಸಂಶೋಧನಾ ಕೇಂದ್ರ : ಸಿಎಂ ಭರವಸೆ

Publicstory/prajayoga

ತುಮಕೂರು: ತಿಗಳರ ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹೆಚ್ಚಿನ ಅಧ್ಯಯನ ಕೈಗೊಳ್ಳಲು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಕೇಂದ್ರ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಶುಕ್ರವಾರ ನಡೆದ ‘ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶ ಮತ್ತು ಗುರುವಂದನಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತಿಗಳ ಸಮಾಜದ ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರಗಳಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ 4.45 ಕೋಟಿ ಅನುದಾನವನ್ನು ನೀಡಿ ಅವರ ಶೈಕ್ಷಣಿಕ ಸಾಧನೆಗೆ ಸಹಕರಿಸಲು ಸರ್ಕಾರ ಬದ್ಧವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ  ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ  ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕಾಗಿ ವಿಶೇಷ ಅನುದಾನವನ್ನು ನೀಡಿ ಅವರ ಅಭ್ಯುದಯಕ್ಕೆ ಸರ್ಕಾರ ಶ್ರಮಿಸುತ್ತಿದೆ.  ಕೃಷಿಯಾಧರಿತ ಕಸುಬುದಾರರಿಗೆ ವಿಶೇಷ ಘಟಕ ಯೋಜನೆಯಡಿ ಅನುದಾನವನ್ನು ನೀಡಲಾಗುತ್ತಿದ್ದು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಜತ ಕತ್ತಿಯನ್ನು ನೀಡಿ ಗೌರವಿಸಲಾಯಿತು. ತಿಗಳ ಸಮಾಜದ ಜ್ಞಾನನಂದಪುರಿ ಸ್ವಾಮಿಗಳಿಗೆ ಗುರುವಂದನೆಯನ್ನು ಸಲ್ಲಿಸಲಾಯಿತು. ಜತೆಗೆ ಲೇಖಕ ಸೂರ್ಯಪ್ರಕಾಶ್ ಬರೆದಿರುವ ಅಗ್ನಿಬನ್ನಿರಾಯ ಸ್ವಾಮಿಯ ಕುರಿತ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠಾಧೀಶರಾದ ಡಾ. ಸಿದ್ಧಲಿಂಗ ಮಹಾಸ್ವಾಮಿ, ವಿವಿಶ ಮಠಾಧೀಶರು ಹಾಗೂ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸಂಸದ ಜಿ.ಎಸ್. ಬಸವರಾಜು, ವಿಧಾನ ಪರಿಷತ್ತು ಸದಸ್ಯರಾದ  ಸಿ.ಪಿ ಯೋಗೀಶ್ವರ್, ಪಿ.ಆರ್ ರಮೇಶ್, ಶಾಸಕರಾದ ಜ್ಯೋತಿಗಣೇಶ್, ಡಾ.ಸಿ ಎಂ ರಾಜೇಶ್ ಗೌಡ, ಮಸಾಲ ಜಯರಾಂ, ಮುರುಳಿಧರ್ ಹಾಲಪ್ಪ ಮುಂತಾದವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?