Sunday, May 19, 2024
Google search engine
Homeತುಮಕೂರು ಲೈವ್ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿದ ಗಣೇಶೋತ್ಸವ : ಸಿದ್ದಲಿಂಗ ಶ್ರೀ

ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿದ ಗಣೇಶೋತ್ಸವ : ಸಿದ್ದಲಿಂಗ ಶ್ರೀ

Publicstory/Prajayoga

ತುಮಕೂರು: ವಿನಾಯಕ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 46ನೇ ವರ್ಷದ 35 ದಿನಗಳ ಗಣೇಶೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.

ಗಣೇಶೋತ್ಸವದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ,‌ ಸ್ವಾತಂತ್ರ್ಯೋತ್ಸವಕ್ಕೆ ಕೊಡುಗೆ ಕೊಟ್ಟ ಉತ್ಸವ ಎಂದರೆ ಗಣೇಶೋತ್ಸವ ಎಂದು ಹಮ್ಮೆಯಿಂದ ಹೇಳಿಕೊಳ್ಳಬಹುದು. ಬಾಲಗಂಗಾಧರನಾಥ ತಿಲಕ್ ಅವರು ಮಹಾರಾಷ್ಟ್ರದಲ್ಲಿ ಬಹಳ ವಿಶೇಷವಾಗಿ ಆಚರಿಸಿಕೊಂಡು ಬಂದಿದ್ದರು. ಮನೆಗಳಲ್ಲಿ ಗಣೇಶೋತ್ಸವನ್ನು ಮಾಡಿಕೊಳ್ಳುವಂತಹ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಗ್ರವಾಗಿ ಒಟ್ಟಾಗಿ ಸೇರಿ ಐಕ್ಯತೆಯಿಂದ ಗಣೇಶೋತ್ಸವವನ್ನು ಮಾಡಬೇಕೆಂಬ ವ್ಯವಸ್ಥೆ ಮಾಡಿ ಜನರಲ್ಲಿ ಸ್ವಾತಂತ್ರ್ಯೋತ್ಸವದ ಕಿಚ್ಚನ್ನು ಹಚ್ಚಬೇಕು ಎಂಬ ಉದ್ಧೇಶವನ್ನಿಟ್ಟುಕೊಂಡು ಪ್ರಾರಂಭ ಮಾಡಿದರು ಎಂದು ನುಡಿದರು.

ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿಯ ಗಣೇಶೋತ್ಸವಕ್ಕೆ ಒಂದು ಇತಿಹಾಸವಿದೆ. ಭಾರತೀಯ ಪರಂಪರೆಯಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹತ್ತು ಹಲವು ಕ್ಷೇತ್ರಗಳ ವೈವಿಧ್ಯಮಯ ಕಲಾವಿದರು ಈಕ್ಷೇತ್ರಕ್ಕೆ ಬಂದು ತಮ್ಮಲ್ಲಿನ ತಮ್ಮ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ವಿನಾಯಕನ ಸೇವೆಯನ್ನು ಮಾಡುತ್ತಿದ್ದಾರೆ. ಆದ್ದರಿಂದ ಈ ಗಣಪತಿಯನ್ನು ಸಾಂಸ್ಕೃತಿಕ ಗಣಪತಿ ಎಂದು ಕರೆಯಲು ಇಚ್ಚಿಸುತ್ತೇನೆ ಎಂದರು.

ಗಣೇಶೋತ್ಸವನ್ನು ಬರೀ ಹಿಂದೂಗಳೇ ಆಚರಿಸಕೊಂಡು ಬಂದಿಲ್ಲ, ಮುಸ್ಲೀಂ ಬಾಂಧವರೂ ಕೂಡ ಆಚರಿಸಿಕೊಂಡು ಬಂದಿರುವುದನ್ನು ನಾವು ನೋಡಿದ್ದೇವೆ, ಆದುದರಿಂದ ನಾವು ಗಣಪತಿಯನ್ನು ಹಿಂದೂ ಗಣಪತಿ ಎಂದು ಲೇಬಲ್ ಮಾಡದೆ ಸರ್ವಜನಾಂಗದ ಗಣಪತಿ ಎಂದು ಕರೆಯಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಸಿದ್ಧಿವಿನಾಯಕ ಸೇವಾ ಮಂಡಳಿ ಉಪಾಧ್ಯಕ್ಷ ಹೆಚ್.ಆರ್.ನಾಗೇಶ್, ಮಹಾನಗರಪಾಲಿಕೆ ಸದಸ್ಯೆ ನಾಸಿರಾ ಬಾನು, ದಸರಾ ಉತ್ಸವ ಸಮಿತಿಯ ಕೋರಿ ಮಂಜುನಾಥ್, ಸಿದ್ದಿವಿನಾಯಕ ಸೇವಾ ಮಂಡಳಿ ಉಪಾಧ್ಯಕ್ಷ, ಬಾವಿಕಟ್ಟೆ ಮಂಜುನಾಥ್, ಎಸ್.ನಾಗಣ್ಣ, ಬೆಸ್ಕಾಂನ ಹಿರಿಯ ಅಧಿಕಾರಿಗಳಾದ ಗೋವಿಂದಪ್ಪ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?