Sunday, July 21, 2024
Google search engine
Homeಜನಮನಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಿಸಿ :ಕಳ್ಳಿಪಾಳ್ಯ ಲೋಕೇಶ್

ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಿಸಿ :ಕಳ್ಳಿಪಾಳ್ಯ ಲೋಕೇಶ್

Publicstory/prajayoga

ವರದಿ,ದೇವರಾಜ್ ಗುಬ್ಬಿ

ಗುಬ್ಬಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಪೋಷಿಸಿ ಬೆಳೆಸುವ ಕೆಲಸ ಮಾಡಲು ಶಿಕ್ಷಣ ಇಲಾಖೆ ಆಯೋಜಿಸುವ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಇದರ ಸದುಪಯೋಗವನ್ನು ಮಕ್ಕಳು ಪಡೆಯಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಮತ್ತು ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಕರೆ ನೀಡಿದರು.

ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ಕಸಬಾ ಹೋಬಳಿ ಅಡಗೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಕುಚಿತ ಮನೋಭಾವ ಬೆಳೆಸಿಕೊಂಡ ಮಕ್ಕಳು ಸೂಕ್ಷ್ಮ ಮತೀಯ ಆಲೋಚನೆ ಮಾಡುತ್ತಾರೆ. ಇಂತಹ ವೇದಿಕೆ ಮೂಲಕ ಮಕ್ಕಳಲ್ಲಿ ವಿಶಾಲ ಹಾಗೂ ಕ್ರೀಡಾ ಮನೋಭಾವ ಬೆಳೆಸುವ ಕೆಲಸ ಆಗಬೇಕಿದೆ ಎಂದರು.

ಮಕ್ಕಳ ವಿಕಸನಕ್ಕೆ ಪಾಠ ಪ್ರವಚನ ಜೊತೆ ಸಾಂಸ್ಕೃತಿಕ ಕಲೆ ಅಗತ್ಯವಿದೆ. ಹಲವು ಪ್ರತಿಭೆಗಳು ಎಲೆ ಮರೆ ಕಾಯಂತೆ ಮರೆಯಾಗುವ ಮುನ್ನ ಮಕ್ಕಳ ಪ್ರತಿಭೆಗೆ ಅಗತ್ಯ ಪ್ರೋತ್ಸಾಹ ಬೇಕು. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ವೇದಿಕೆ ಉತ್ತಮ. ಕ್ರೀಡೆಗೆ ನಾನಾ ರೀತಿಯ ತರಬೇತಿ ನೀಡುವ ಕೆಲಸ ಮಾಡುವ ಸರ್ಕಾರ ಮಕ್ಕಳಲ್ಲಿ ಅಡಗಿರುವ ಕಲೆಗೆ ನೀರೆರೆಯುವ ಕೆಲಸ ಮಾಡಬೇಕು. ಪ್ರತಿಭಾ ಕಾರಂಜಿ ಮೂಲಕ ಬೆಳಕಿಗೆ ಬರುವ ಮಕ್ಕಳ ಪ್ರತಿಭೆ ಹಾಗೆಯೇ ಮುಂದುವರೆಸಲು ಸಹಕಾರ ನೀಡಲು ಸರ್ಕಾರ ಇಲಾಖೆಗೆ ನಿರ್ದೇಶನ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಅಡಗೂರು ಕ್ಲಸ್ಟರ್ ಶಾಲೆಯ ಎಲ್ಲಾ ಮಕ್ಕಳು ತಮ್ಮ ಕಲೆಯ ಪ್ರದರ್ಶನ ಮಾಡಿದರು.

ವೇದಿಕೆಯಲ್ಲಿ ಗ್ರಾಪಂ ಸದಸ್ಯರಾದ ನಾರಾಯಣಸ್ವಾಮಿ, ಮಂಜುನಾಥ್, ಎಸ್ ಡಿಎಂಸಿ ಸದಸ್ಯ ನಿರಂಜನ್, ಮುಖಂಡರಾದ  ಆನಂದ್, ಲಕ್ಷ್ಮಣ, ಕೃಷ್ಣಪ್ಪ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?