Friday, July 26, 2024
Google search engine
Homeಪೊಲಿಟಿಕಲ್ವಡವನಘಟ್ಟ ಗ್ರಾಪಂ ಉಪಾಧ್ಯಕ್ಷರಾಗಿ ಮಂಗಳಮ್ಮ ಆಯ್ಕೆ

ವಡವನಘಟ್ಟ ಗ್ರಾಪಂ ಉಪಾಧ್ಯಕ್ಷರಾಗಿ ಮಂಗಳಮ್ಮ ಆಯ್ಕೆ

Publicstory/prajaypga

ತುರುವೇಕೆರೆ : ತಾಲೂಕಿನ ವಡವನಘಟ್ಟ ಗ್ರಾಮ ಪಂಚಾಯಿತಿ ನೂತನ ಉಪಾದ್ಯಕ್ಷರಾಗಿ ಜೆ.ಡಿ.ಎಸ್. ಬೆಂಬಲಿತ ಮಂಗಳಮ್ಮಲೋಕೇಶ್ ಅವಿರೋಧವಾಗಿ ಆಯ್ಕೆಯಾದರು.

ವಡವನಘಟ್ಟ ಗ್ರಾ.ಪಂ.ನ ಈ ಹಿಂದಿನ ಉಪಾಧ್ಯಕ್ಷರಾಗಿದ್ದ ಸಲೀಂ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. 14 ಸದಸ್ಯ ಬಲವುಳ್ಳ ಪಂಚಾಯಿತಿಯಲ್ಲಿ  ಉಪಾದ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಮಂಗಳಮ್ಮ ಲೋಕೇಶ್ ಹೊರೆತುಪಡಿಸಿ ಇತರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸಲಿಲ್ಲ, ಅಂತಿಮವಾಗಿ ಕಣದಲ್ಲಿ ಉಳಿದ ಮಂಗಳಮ್ಮ ಲೋಕೇಶ್ ಅವಿರೋಧವಾಗಿ ಉಪಾದ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಘೋಷಣೆ ಮಾಡಿದರು.

ನೂತನ ಉಪಾಧ್ಯಕ್ಷೆ ಮಂಗಳಮ್ಮಲೋಕೇಶ್ ಮಾತನಾಡಿ, ನನ್ನನ್ನು ಅವಿರೋಧವಾಗಿ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ ಎಲ್ಲರಿಗೂ ಅನಂತ ವಂದನೆಗಳನ್ನು ತಿಳಿಸುತ್ತೇನೆ. ಮುಂಬರುವ ದಿನಗಳಲ್ಲಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಸರ್ವ ಸದಸ್ಯರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.

ನೂತನ ಉಪಾದ್ಯಕ್ಷರ ಆಯ್ಕೆ ಪ್ರಕಟವಾಗುತ್ತಿದ್ದಂತೆ ಮಂಗಳಮ್ಮಲೋಕೇಶ್ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೂತನ ಉಪಾದ್ಯಕ್ಷರನ್ನು ಅಧ್ಯಕ್ಷೆ ಯಲ್ಲಮ್ಮಅಣ್ಣೋಜಿರಾವ್, ನಿಕಟಪೂರ್ವ ಉಪಾಧ್ಯಕ್ಷ ಸಲೀಂ, ಸದಸ್ಯರಾದ ಮಂಜೇಗೌಡ, ನರಸಿಂಹಮೂರ್ತಿ,ಪ್ರಕಾಶ್, ಕಮಲಮ್ಮ, ನಾಗರತ್ನಮ್ಮ, ಜಯಮ್ಮ, ಸತೀಶ್, ಉಮೇಶ್, ವಿದ್ಯಾಶ್ರೀ, ಸುಧಾ, ಮುಖಂಡರಾದ ರಮೇಶ್, ಶಂಕರಲಿಂಗೇಗೌಡ, ಮಧು, ಕಿಟ್ಟಪ್ಪ ಮತ್ತಿತರರು ಅಭಿನಂಧಿಸಿ ಶುಭ ಹಾರೈಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?