Wednesday, July 24, 2024
Google search engine
Homegovernanceಮಳೆ ಹಾನಿ ಸಂತ್ರಸ್ತರ ನೆರವಿಗೆ ನಿಂತ ಶಾಸಕ ಜ್ಯೋತಿಗಣೇಶ್

ಮಳೆ ಹಾನಿ ಸಂತ್ರಸ್ತರ ನೆರವಿಗೆ ನಿಂತ ಶಾಸಕ ಜ್ಯೋತಿಗಣೇಶ್

Publicstory/prajayoga

ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತುಮಕೂರು ನಗರದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಿಟಿ ರೌಂಡ್ ನಡೆಸಿ ಮಳೆಹಾನಿ ಸಂತ್ರಸ್ತ ಕುಟುಂಬಗಳ ನೆರವಿಗೆ ನಿಂತಿದ್ದಾರೆ.

ತುಮಕೂರು : ವಿದ್ಯುತ್ ಶಾರ್ಟ್  ಸರ್ಕ್ಯೂಟ್‌ನಿಂದ ಮೃತಪಟ್ಟಿದ್ದ ಈರಣ್ಣನ ಪತ್ನಿಗೆ  5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಶಾಸಕ ಜ್ಯೋತಿಗಣೇಶ್ ಬುಧವಾರ ವಿತರಿಸಿದರು.

ನಗರದ ಉಪ್ಪಾರಹಳ್ಳಿಯಲ್ಲಿರುವ ಮೃತ ಈರಣ್ಣನ ಮನೆಗೆ ಬುಧವಾರ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಈರಣ್ಣನವರ ಸಾವು ಅತ್ಯಂತ ದುಃಖಕರ ಸಂಗತಿ. ಅತಿಯಾದ ಮಳೆಯಿಂದಾಗಿ ಅವಾಂತರ, ಅವಘಡಗಳು ಸಂಭವಿಸುತ್ತಲೇ ಇವೆ. ಅವಘಡಗಳು ಆಗದಂತೆ ಅಧಿಕಾರಿಗಳು ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿದ್ದಾರೆ ಎಂದರು.

ಮೃತ ಈರಣ್ಣನವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರವನ್ನು ವಿತರಿಸಲಾಗಿದೆ. ಅಲ್ಲದೆ ಪಾಲಿಕೆ ವತಿಯಿಂದಲೂ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದರು.

ಕಳೆದ 30 ವರ್ಷದಲ್ಲಿ ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಳೆ ಒಂದೇ ರಾತ್ರಿಯಲ್ಲಿ ಸುರಿದಿರುವುದು ಈ ಬಾರಿ ಮಾತ್ರ. ಈ ಪ್ರಮಾಣದಲ್ಲಿ ಮಳೆಯಾದರೆ ಯಾರು ಏನೂ ಮಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್‌ಕುಮಾರ್, ಕಂದಾಯ ನಿರೀಕ್ಷಕ ಅಜಯ್, ಗ್ರಾಮ ಲೆಕ್ಕಿಗ ರವಿ, ಪಾಲಿಕೆ ಸದಸ್ಯ ಶಿವರಾಮ್ ಮತ್ತಿತರರು ಉಪಸ್ಥಿತರಿದ್ದರು.

5 ದಿನಗಳ ಕಾಲ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ

ತುಮಕೂರು : ‘ಧೈರ್ಯದಿಂದಿರಿ, ನಿಮ್ಮೊಂದಿಗೆ ನಾವಿದ್ದೇವೆ’ ತುಮಕೂರು ನಗರದಲ್ಲಿ ಮುಂದಿನ 5  ದಿನಗಳನ್ನು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಸಾರ್ವಜನಿಕರು ಜಾಗರೂಕರಾಗಿರಿ ಹಾಗೂ ರಾತ್ರಿ ಸಮಯದಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ವಿದ್ಯುತ್‌ನಿಂದಾಗಿ ಅಪಾಯವಾಗುವ ಸಂಭವವಿದೆ. ಈ ಬಗ್ಗೆ ಎಲ್ಲರೂ ಗಮನವಹಿಸಿ ಎಚ್ಚರದಿಂದಿರಿ ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.


ಹೊಸಳಯ್ಯನತೋಟ: ವಾರ್ಡ್ ನಂ.22ರ ಹೊಸಳಯ್ಯನತೋಟದ ಭಾಗ ಸುಮಾರು ಮನೆಗಳಿಗೆ ನೀರು ನುಗ್ಗಿದ್ದು, ಇಲ್ಲಿನ ಸ್ಥಳೀಯರನ್ನು ಹತ್ತಿರದಲ್ಲಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಅವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ 4 ರಿಂದ 5 ಕಾಳಜಿ ಕೇಂದ್ರ ತೆರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಕ್ಷಣವೇ ಅಧಿಕಾರಿಗಳು ಎಚ್ಚೆತ್ತು ನಗರದಲ್ಲಿ 4 ಕಡೆ, ಅಂದರೆ  ಟೂಡಾ ಟ್ರಕ್ ಟರ್ಮಿನಲ್, ಕ್ಯಾತಸಂದ್ರ, ಅಂಬಾ ವಿಲಾಸ, ಸದಾಶಿವನಗರ, ಮಹಾನಗರಪಾಲಿಕೆ ಸಮುದಾಯ ಭವನ, ಬಟವಾಡಿ,  ಪೂರ್ಣಯ್ಯ ಛತ್ರ, ಚಿಕ್ಕಪೇಟೆ,  ಮಹಾನಗರಪಾಲಿಕೆ ಆವರಣದಲ್ಲಿ ಕಾಳಜಿ ಕೇಂದ್ರ ತೆರೆದು ಅನುಕೂಲ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಪಾಲಿಕೆ ಆಯುಕ್ತರಾದ ರೇಣುಕಾ, ಮುಖಂಡರಾದ ನರಸಿಂಹಮೂರ್ತಿ, ಮುಂತಾದವರು ಇದ್ದರು.

ದೇವರಾಯಪಟ್ಟಣ:  ವಾರ್ಡ್ ನಂ.35ರ ದೇವರಾಯಪಟ್ಟಣದಲ್ಲಿ ಬಾರಿ ಮಳೆಯಿಂದಾಗಿ ದೊಡ್ಡ ಆಲದಮರ ಧರೆಗೆ ಉಳಿದಿದ್ದು, ಹತ್ತಿರದಲ್ಲಿದ್ದ ಜೀಪ್ ಮೇಲೆ ಮರ ಉರುಳಿತ್ತು. ಇದರಿಂದ ಜೀಪ್ ಹಾನಿಗೊಳಗಾಗಿತ್ತು. ಈ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಮಳೆಯಿಂದಾಗಿ ಬೆಸ್ಕಾಂನ 4 ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ಅವುಗಳನ್ನು ಕೂಡಲೇ ದುರಸ್ಥಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಮಳೆಯಿಂದಾಗಿ ಮನೆ ಬಿದ್ದಿರುವ ಕುಟುಂಬಕ್ಕೆ ಹಾಗೂ ನೀರು ನುಗ್ಗಿರುವ ಮನೆಗಳಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನ ತಕ್ಷಣವೇ ದೊರಕುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ನಿರ್ಮಲಾ ಶಿವಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಡಿ.ಆರ್.ಬಸವರಾಜ್, ಮುನಿಯಪ್ಪ ಹಾಗೂ ಮುಂತಾದ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.

ತುಮಕೂರು ನಗರದಲ್ಲಿ ಭಾರಿ ಮಳೆಯಿಂದಾಗಿ ನಿರಾಶ್ರಿತರಿಗಾಗಿ 04 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಿಗೆ ಬೇಟಿ ನೀಡಿ ಕಾಳಜಿ ಕೇಂದ್ರದಲ್ಲಿರುವ 14 ಜನ ನಿರಾಶ್ರಿತರಿಗೆ ಊಟವನ್ನು ಬಡಿಸಿ, ಧೈರ್ಯ ತುಂಬಿದರು ಹಾಗೂ ಕಾಳಜಿ ಕೇಂದ್ರದಲ್ಲಿರುವವರಿಗೆ ಆರೋಗ್ಯ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?