Wednesday, December 6, 2023
spot_img
Homeವಿದ್ಯಾ ಸಂಸ್ಥೆವಿದ್ಯೋದಯ ಕಾನೂನು ಕಾಲೇಜಿನಲ್ಲಿ 'ನಾಳೆ' ಬೌದ್ಧಿಕ ಹಕ್ಕುಗಳ ಸಮ್ಮೇಳನ

ವಿದ್ಯೋದಯ ಕಾನೂನು ಕಾಲೇಜಿನಲ್ಲಿ ‘ನಾಳೆ’ ಬೌದ್ಧಿಕ ಹಕ್ಕುಗಳ ಸಮ್ಮೇಳನ

Publicstory/prajayoga

ತುಮಕೂರು: ವಿದ್ಯೋದಯ ಕಾನೂನು ಕಾಲೇಜು ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಇವರ ಸಹಯೋಗದೊಂದಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಎಂಬ ವಿಷಯದ ಬಗ್ಗೆ ಒಂದು ದಿನದ ಸಮ್ಮೇಳನವನ್ನು ನಾಳೆ ಬೆಳಿಗ್ಗೆ 10:30 ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದ್ದು, ಬೆಂಗಳೂರಿನ ನ್ಯಾಷನಲ್ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ಕಾನೂನು ಪ್ರಾಧ್ಯಾಪಕ ಪ್ರೊ.ಡಾ.ಟಿ.ರಾಮಕೃಷ್ಣ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಚ್. ಹೇಮಂತ್ ಕುಮಾರ್ ಬೌದ್ಧಿಕ ಆಸ್ತಿ ಹಕ್ಕಿನ ಘಟಕದ ಉದ್ಘಾಟನೆ ಮಾಡಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಐ.ಪಿ. ಅಟಾರ್ನಿ ವಿವೇಕ್ ಆನಂದ್ ಸಾಗರ್ ಹಾಗೂ ನಾಗರ್ಜುನ ಎಮ್. ಜಿ. ಪ್ರಾಜೆಕ್ಟ್ ಅಸೋಸಿಯೇಟ್ ಇವರು ಭಾಗವಹಿಸಲಿದ್ದಾರೆ. ಮ್ಯಾನೇಜಿಂಗ್ ಟ್ರಸ್ಟಿ ಎಚ್. ಎಸ್. ರಾಜು, ವಿದ್ಯೋದಯ ಫೌಂಡೇಶನ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊ.ಕೆ.ಚಂದ್ರಣ್ಣ ಹಾಗೂ ಪ್ರಭಾರ ಪ್ರಾಂಶುಪಾಲ ಡಾ.ಎ.ನಾರಾಯಣ ಸ್ವಾಮಿ ಇರಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು