Sunday, July 21, 2024
Google search engine
Homeಪೊಲಿಟಿಕಲ್ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚನೆ : ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ

ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚನೆ : ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ

Publicstory/prajayoga

ಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯ

ಶಿರಾ: ತಾಲೂಕಿನಲ್ಲಿ ಇನ್ನೂ 10 ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗೃತೆಯಿಂದ ಇರಬೇಕು. ಗ್ರಾಮ ಪಂಚಾಯಿತಿಗಂದ ಜನರಲ್ಲಿ ಜಾಗೃತಿ ಮೂಡಿಸಬೇಕ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಎಂದು ಸೂಚಿಸಿದರು.

ಅವರು ನಗರದ ಮಿನಿ ವಿಧಾನಸೌಧದಲ್ಲಿ ಮಳೆ ಹಾನಿ ಬಗ್ಗೆ ಹಾಗೂ ಮುಂಜಾಗ್ರತೆ ತೆಗೆದುಕೊಳ್ಳುವ ಬಗ್ಗೆ ಬುಧವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ತಾಲೂಕಿನಲ್ಲಿ ಮಳೆ ಹಾನಿಯಿಂದ ಬಹುತೇಕ ಭಾಗದ ತಗ್ಗು ಪ್ರದೇಶಗಳಲ್ಲಿ, ವಸತಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಕೃಷಿಕರಿಗೆ ಕೃಷಿ ಚಟುವಟಿಕೆಗಳ ಜಮೀನಿನಲ್ಲಿ ಹೆಚ್ಚು ನೀರು ನುಗ್ಗಿ ಬೆಳೆಗಳು ಹಾನಿಯಾಗಿವೆ. ದಾವೂದ್ ಪಾಳ್ಯದ ಶಿಕ್ಷಕರು ನೀರಿನ ರಭರಸಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ. ಆದ್ದರಿಂದ ಎಲ್ಲಾ ಅಂಶಗಳನ್ನು ಪರಿಗಣಿಸಿ ತಾಲೂಕು ಆಡಳಿತದಿಂದ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿದೆ. ಗ್ರಾಮ ಪಂಚಾಯಿತಿಗಳಲ್ಲಿ ಸಂಬಂಧಪಟ್ಟ ಪಿಡಿಓಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಯಾರೂ ಸಹ ಜಾನುವಾರುಗಳನ್ನು ಮೈತೊಳೆಯಲು ನೀರಿಗಿಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ಮಮತ ಮಾತನಾಡಿ, ಶಿರಾ ತಾಲೂಕಿನಲ್ಲಿ ಜುಲೈ 30 ರಿಂದ ಹೆಚ್ಚು ಮಳೆಯಾಗಿದ್ದು,  ಕೋಡಿ ಹರಿದಿರುವ ಎಲ್ಲಾ ಕೆರೆಗಳ ವಿಕ್ಷಣೆ ಮಾಡಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಕಸಬಾ ಹೋಬಳಿಯಲ್ಲಿ 26 ಮನೆಗಳು, ಹುಲಿಕುಂಟೆ 10 ಮನೆಗಳು, ಗೌಡಗೆರೆ 4 ಮನೆಗಳು, ಬುಕ್ಕಾಪಟ್ಟಣ 5 ಮನೆಗಳು, ಕಳ್ಳಂಬೆಳ್ಳದಲ್ಲಿ 5 ಮನೆಗಳಿಗೆ ಹಾನಿಯಾಗಿದ್ದು, ಸಂಬಂಧಪಟ್ಟವರಿಗೆ ಪರಿಹಾರ ಕೊಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಂ. ದಾಸರಹಳ್ಳಿ ಗ್ರಾಮದಲ್ಲಿ 3 ಮನೆಗಳಿಗೆ ನೀರು ನುಗ್ಗಿದ್ದು, ಅವರಿಗೆ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಗೆ ಸ್ಥಳಾಂತರ ಮಾಡಲಾಗಿದೆ. ಚನ್ನನಕುಂಟೆ, ಕೋಟೆ, ಚಿಕ್ಕನಹಳ್ಳಿ, ಇನಕನಹಳ್ಳಿ ಗ್ರಾಮಗಳಿಗೆ ಹೋಗುವಾಗ ಸೇತುವೆಗಳ ಮೇಲೆ ಸಂಚರಿಸಬೇಕಿದ್ದು, ಅಂತಹ ಕಡೆಗಳಲ್ಲಿ ಎಚ್ಚರಿಕೆಯ ನಾಮಫಲಕ ಹಾಗೂ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓಗಳು ಮುನ್ನೆಚ್ಚರಿಕೆ ಕ್ರಮವಾಗಿ ಜನರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನ ದಾವೂದ್ ಪಾಳ್ಯ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕರಾದ ಆರೀಫ್ ಉಲ್ಲಾ ಖಾನ್ ಅವರು ಮಂಗಳವಾರ ಚನ್ನನಕುಂಟೆ ಸೇತುವೆ ದಾಟುತ್ತಿದ್ದ ವೇಳೆ ನೀರಿನ ರಭಸಕ್ಕೆ ಸಿಕ್ಕಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹಾಗೂ ತಹಶೀಲ್ದಾರ್ ಮಮತ ಅವರು 5. ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದರು.

ಸಭೆಯಲ್ಲಿ ಡಿವೈಎಸ್‌ಪಿ ನವೀನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಸಹಾಯಕ ಕೃಷಿ ನಿರ್ದೇಶಕ ಆರ್.ರಂಗನಾಥ್, ನಗರ ಸಿಪಿಐ ಹನುಮಂತಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?