Saturday, July 27, 2024
Google search engine
Homeಪೊಲಿಟಿಕಲ್ಜನತೆಗೆ ಸೌಲಭ್ಯ‌ ಒದಗಿಸುವಲ್ಲಿ ಬಿಜೆಪಿ ಸರ್ಕಾರ ವಿಫಲ: ಎಚ್.ಸಿ.ಹನುಂಮತಯ್ಯ

ಜನತೆಗೆ ಸೌಲಭ್ಯ‌ ಒದಗಿಸುವಲ್ಲಿ ಬಿಜೆಪಿ ಸರ್ಕಾರ ವಿಫಲ: ಎಚ್.ಸಿ.ಹನುಂಮತಯ್ಯ

Publicstory/prajayoga

ತುಮಕೂರು: ಎಐಸಿಸಿ ಮತ್ತು ಕೆಪಿಸಿಸಿ ನಿರ್ದೇಶನದ ಮೇರೆಗೆ ಜಿಲ್ಲಾ ಮತ್ತು, ಬ್ಲಾಕ್ ಕಾಂಗ್ರೆಸ್ ಹಾಗೂ ಗುಬ್ಬಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಣೆಗಾಗಿ ಭಾರತ ಇತಿಹಾಸದ ಸಂದರ್ಭಗಳನ್ನು ಜನತೆಗೆ ಮುಟ್ಟಿಸಲು ಸಮಿತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಸಿ.ಹನುಮಂತಯ್ಯ ಮಾತನಾಡಿ, ಅನೇಕ ನಾಯಕರ ಹೋರಾಟ, ಲಕ್ಷಾಂತರ ಜನಗಳ ಬಲಿದಾನದ ಹಿನ್ನೆಲೆಯಲ್ಲಿ ರಾಷ್ಟ್ರನಾಯಕರು ಸ್ವತಂತ್ರ ತಂದು ಕೊಟ್ಟರು. ನಂತರ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದ ಅವಧಿಯಲ್ಲಿ ಅನೇಕ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಅನೇಕ ರಂಗಗಳಲ್ಲಿ ಪ್ರಗತಿಯನ್ನು ಸಾಧಿಸಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯವಾಯಿತು

ರಾಷ್ಟ್ರ ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ವಿಶ್ವದಲ್ಲೇ ಆರ್ಥಿಕ ಸದೃಢತೆ ಒಂದನೇ ಸ್ಥಾನದಲ್ಲಿತ್ತು .ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಾಕಿಸ್ತಾನ ಮತ್ತು ಶ್ರೀಲಂಕಾದ ಪರಿಸ್ಥಿತಿಗೆ ಬರುವಂತಾಗಿದೆ. ಅನೇಕ ಸೌಲಭ್ಯಗಳನ್ನು ಜನತೆಗೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಅಸಮರ್ಥವಾಗಿದೆ ಮತ್ತು ಕಾಂಗ್ರೆಸ್ ಪಕ್ಷ ಕೊಟ್ಟ ಯೋಜನೆಗಳನ್ನು ರದ್ದುಪಡಿಸಲಾಗಿದೆ. ಆದ್ದರಿಂದ ಇಂತಹ ಅಸಮರ್ಥ ಸರ್ಕಾರವನ್ನು ಕಿತ್ತೊಗೆಯಲು ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನಸಾಮಾನ್ಯರ ಜಾಗೃತಿ ಮೂಡಿಸಲು ಈ ಭಾರತ ಸ್ವಾತಂತ್ರ‍್ಯ ಮಹೋತ್ಸವ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯು ಗುಬ್ಬಿ ತಾಲೂಕ್ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಭಾನುವಾರ ಮರಳು ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚೇಳೂರು – ತುಮಕೂರು ರಸ್ತೆಯಲ್ಲಿ ಪಾದಯಾತ್ರೆಯನ್ನು ನಡೆಸಿ ತದನಂತರ ಚೇಳೂರು ವೃತ್ತದಲ್ಲಿ ಪಾದಯಾತ್ರೆಯ ಸಭೆಯನ್ನು ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು, ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಗುಬ್ಬಿ ವಿಧಾನಸಭಾ ಕ್ಷೇತ್ರದ ವೀಕ್ಷಕರು ಹಾಗೂ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ, ಗುಬ್ಬಿ ವಿಧಾನ ಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹೊನ್ನಗಿರಿ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ನಿಂಬೆಕಟ್ಟೆ ಜಯಣ್ಣ ಮತ್ತು ನರಸಿಂಹಯ್ಯ, ಶಂಕರಾನAದ ಸಿಆರ್ ಗೌಡ, ಶ್ರೀನಿವಾಸ್ ಮತ್ತು ಮಹಿಳಾ ಮುಖಂಡರುಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?