Tuesday, July 23, 2024
Google search engine
Homeಪೊಲಿಟಿಕಲ್ಆ.10ಕ್ಕೆ ಕೆಆರ್‌ಎಸ್ ಪಕ್ಷದ ಸಂಸ್ಥಾಪನಾ ದಿನ ಹಾಗೂ ಮಹಾಧಿವೇಶನ

ಆ.10ಕ್ಕೆ ಕೆಆರ್‌ಎಸ್ ಪಕ್ಷದ ಸಂಸ್ಥಾಪನಾ ದಿನ ಹಾಗೂ ಮಹಾಧಿವೇಶನ

Publicstory/prajayoga

ಬೆಂಗಳೂರು: ನಗರದ ಮಾಗಡೀ ರಸ್ತೆಯಲ್ಲಿರುವ ಧನಂಜಯ ಪ್ಯಾಲೆಸ್‌ನಲ್ಲಿ ಆ.10 ರಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮೂರನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮಹಾಧಿವೇಶನ ನಡೆಯಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ದಿನಪೂರ್ತಿ ಕಾರ್ಯಕ್ರಮಗಳು ಜರುಗಲಿವೆ. ಈ ಸಂದರ್ಭದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಕ್ಷ ಮಾಡಿರುವ ಸಾಧನೆ, ನೂತನ ರಾಜ್ಯ ಸಮಿತಿಯ ಘೋಷಣೆ, ವಿಧಾನಸಭೆ ಮತ್ತು ಬಿಬಿಎಂಪಿ ಯ ಸಂಭಾವ್ಯ  ಅಭ್ಯರ್ಥಿಗಳ ಪರಿಚಯ ಮತ್ತು ಘೋಷಣೆ ಸೇರಿದಂತೆ ವಿದ್ಯಾರ್ಥಿ/ಯುವ/ರೈತ/ಪರಿಸರ/ ಬಿಬಿಎಂಪಿ ಯ ಪ್ರಣಾಳಿಕೆಗಳ ಬಿಡುಗಡೆ ಮಾಡಲಾಗುವುದು. ಮಧ್ಯಾಹ್ನದ ನಂತರ ನಡೆಯುವ ಮಹಾಧಿವೇಶನದಲ್ಲಿ ನಾಡಿನ ಹಿರಿಯ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಮತ್ತು ಖ್ಯಾತ ನ್ಯಾಯವಾದಿ ಕೆ.ವಿ.ಧನಂಜಯ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸ್ವಚ್ಚ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ರಾಜ್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕವಾಗಿ ಹಾಗೂ ಶಿಸ್ತುಬದ್ಧವಾಗಿ ಹೋರಾಡುತ್ತಿರುವ ಪಕ್ಷ ಎಂದರೆ ಅದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಈ ಅಭೂತಪೂರ್ವ ರಾಜಕೀಯ ಕ್ರಾಂತಿಯಲ್ಲಿ ಸಾರ್ವಜನಿಕರು ಭಾಗಿಯಾಗಬೇಕೆಂದು ಕೆಆರ್‌ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ರಘು‌ ಜಾಣಗೆರೆ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?