Saturday, April 20, 2024
Google search engine
Homeರಾಜ್ಯಸರ್ಕಾರದ ವೈಫಲ್ಯ; ಭಾಜಪ ಮಂಡಲದ ಅಧ್ಯಕ್ಷರು ರಾಜೀನಾಮೆ

ಸರ್ಕಾರದ ವೈಫಲ್ಯ; ಭಾಜಪ ಮಂಡಲದ ಅಧ್ಯಕ್ಷರು ರಾಜೀನಾಮೆ

ಚಿತ್ರದುರ್ಗ : ಇತ್ತೀಚೆಗೆ ನಡೆದ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ, ಗೃಹ ಸಚಿವರ ಹುಸಿ ಭರವಸೆಗಳನ್ನು ವಿರೋಧಿಸಿ ಜಿಲ್ಲೆಯ ಭಾಜಪದ 9 ಮಂಡಲದ ಅಧ್ಯಕ್ಷರು ರಾಜೀನಾಮೆ ಸಲ್ಲಿದ್ದಾರೆ.

ಪಕ್ಷಕ್ಕಾಗಿ ಶ್ರಮಿಸುತ್ತಿರುವವರ ಜೀವ ಬೆಲೆಕಟ್ಟಲಾಗದ್ದು. ಈ ಹಿಂದೆ ಹತ್ಯೆಯಾದ ಕಾರ್ಯಕರ್ತರಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎಂದು ನಮ್ಮ ಕಣ್ಣೆದುರಿಗಿದೆ.
ಭಾಜಪ ಕೆಡವಲ ರಾಜಕೀಯ ಪಕ್ಷವಲ್ಲ. ಅದೊಂದು ವಿಚಾರ ಸಂಘಟನೆ. ಇದರ ಸಿದ್ಧಾಂತದ ನಿಲುವಿಗಾಗಿ ಅದೆಷ್ಟೋ ಕಾರ್ಯಕರ್ತರ ಬಲಿದಾನವಾಗಿದೆ. ಇಂಥ ಸಹಸ್ರಾರು ತ್ಯಾಗ ಬಲಿದಾನದಿಂದ ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೆ ನಮ್ಮದೇ ಸರ್ಕಾರಗಳು ಅಧಿಕಾರದಲ್ಲಿವೆ. ಆದರೂ ಮುಗ್ಧ ಕಾರ್ಯಕರ್ತರ ಸರಣಿ ಕೊಲೆಗಳು ನಡೆಯುತ್ತಿವೆ.

ಗೃಹ ಸಚಿವರು, ಮುಖ್ಯಂಮತ್ರಿಗಳು ಕಠಿಣ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳದೆ ಕೇವಲ ಭರವಸೆಗಳನ್ನು ನೀಡುತ್ತಿದ್ದಾರೆ. ಇದರಿಂದ ನಾವೆಲ್ಲರೂ ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?